ಚಿತ್ರಗಳಲ್ಲಿ: 'ಡಾ. ಪಾರ್ವತಮ್ಮ ರಾಜ್ ಕುಮಾರ್ ಒಂದು ನೆನಪು'
ಬೆಂಗಳೂರು, ಜೂನ್ 09 : ದೊಡ್ಮನೆ ಯಜಮಾನಿ ಡಾ. ಪಾರ್ವತಮ್ಮ ರಾಜ್ ಕುಮಾರ್ ಅವರ ನೆನಪಿಗಾಗಿ 'ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು' ಎಂಬ ಕಾರ್ಯಕ್ರಮ ಗುರುವಾರ ನಡೆಯಿತು.
ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಗಾಂಧೀ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು ಎಂಬ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಪುತ್ರರಾದ ಪುನೀತ್ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರಿಂದ ಪಾರ್ವತಮ್ಮರ ಫೋಟೋಗೆ ಪುಷ್ಪನಮನ ಸಲ್ಲಿಸಿದರು.[ಕನ್ನಡ ಸಿನಿಮಾ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ವಿಧಿವಶ]
ಈ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಅವರ ವಿಶೇಷ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಅವರ ಸಿನಿ ಬದುಕಿನ ಗುಣಗಾನ ಸಹ ಮಾಡಲಾಯಿತು. ಇದೇ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರು, ಕನ್ನಡ ಚಲನಚಿತ್ರ ರಂಗದಲ್ಲಿ ಸಾಧನೆಗೈದ ಮಹಿಳೆಯರಿಗೆ ಡಾ.ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಒಂದು ಲಕ್ಷ ರೂ ಮೊತ್ತದ ಪ್ರಶಸ್ತಿ ನೀಡಲಾಗುವುರು ಎಂದು ಹೇಳಿದರು.

ಅಮ್ಮನ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಜ್ ಕುಮಾರ್, ಪುನೀತ್
ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು ಎಂಬ ಕಾರ್ಯಕ್ರಮದಲ್ಲಿ ಪಾರ್ವತಮ್ಮ ರಾಜ್ ಕುಮಾರ್ ಪುತ್ರರಾದ ಪುನೀತ್ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರಿಂದ ಪಾರ್ವತಮ್ಮರ ಫೋಟೋಗೆ ಪುಷ್ಪನಮನ ಸಲ್ಲಿಸಿದರು.

ಡಾ. ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಪ್ರಶಸ್ತಿ
ಎಸ್.ವಿ.ರಾಜೇಂದ್ರಸಿಂಗ್ ಬಾಬು ರವರು, 'ಭಾರತ ಚಲನಚಿತ್ರ ರಂಗದಲ್ಲಿ 80 ಸಿನಿಮಾಗಳನ್ನು ನಿರ್ಮಿಸಿ ಇತಿಹಾಸ ಬರೆದಿರುವ ಏಕೈಕ ನಿರ್ಮಾಪಕಿ ಪಾರ್ವತಮ್ಮ. ಕನ್ನಡ ಚಲನಚಿತ್ರ ರಂಗಕ್ಕೆ ಅವರ ಕೊಡುಗೆ ಅಪಾರ ಹಾಗಾಗಿ ಅವರ ಹೆಸರಿನಲ್ಲಿ ಪ್ರಶಸ್ತಿಯೊಂದನ್ನು ಸ್ಥಾಪಿಸಿ ಚಲನಚಿತ್ರ ರಂಗದಲ್ಲಿ ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ನೀಡಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು' ಎಂದು ಹೇಳಿದರು.

ಪುರುಷ ಪ್ರಧಾನ ಸಮಾಜದಲ್ಲಿ 80 ಚಿತ್ರಗಳನ್ನು ನಿರ್ಮಿಸಿದ್ದು ಸಾಧನೆ
ರಾಜ್ ಕುಮಾರ್ ಪ್ರಭಾವಳಿ ಪಾರ್ವತಮ್ಮ ಅವರಲ್ಲಿತ್ತು. ಅದನ್ನು ಮೀರಿ ಅದರ ಆಚೇ ಒಬ್ಬ ನಿರ್ಮಾಪಕಿತಯಾಗಿ ಕನ್ನಡ ಚಲನಚಿತ್ರರಂಗದ ಮಹಿಳಾ ಶಕ್ತಿಯಾಗಿ ಬೆಳೆದಿದ್ದು ಅದು ಅವರತನ. ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಒಬ್ಬಳು ಬೆಳೆಯುವುದು ಕಷ್ಟಕರ. ಅಂತಹದರಲ್ಲಿ ಅವರು 80 ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದು ಒಂದು ಸಾಧನೆ ಎಂದು ಸಾಹಿತಿ ಹಾಗೂ ಚಿಂತಕ ಡಾ. ಬರಗೂರು ರಾಮಚಂದ್ರಪ್ಪ ಹೇಳಿದರು.

ನೆನಪು ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿ
'ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು' ಎಂಬ ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರದಾನ ಕಾರ್ಯದರ್ಶಿಯವರಾದ ಎಂ ಲಕ್ಷ್ಮಿನಾರಾಯಣ, ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ರಾಘವೇಂದ್ರ ರಾಜ್ ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್,ಚಿಂತಕ ಡಾ. ಬರಗೂರು ರಾಮಚಂದ್ರಪ್ಪ, ಸೇರಿದಂತೆ ರಾಜ್ ಕುಟುಂಬ ಸದಸ್ಯರು ಹಾಗೂ ಚಲನಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications