ಡಾ.ರಾಜ್ ಪ್ರತಿಮೆ ಸ್ಥಾಪಿಸಿದವರೆ ಬೆಂಕಿ ಇಟ್ಟರುǃ
ಬೆಂಗಳೂರು, ನ. 16 : ಪ್ರತಿಮೆ ಭಗ್ನ ಮಾಡಿದವರೂ ಇವರೆ, ಪ್ರತಿಭಟನೆ ನಡೆಸಿದವರೂ ಇವರೆ! ಪೊಲೀಸರಿಗೆ ಅನುಮಾನ ಬರಬಾರದೆಂದು ಕನ್ನಡ ಪರ ಘೋಷಣೆ ಕೂಗುತ್ತಾ ದಾರಿ ಮಧ್ಯೆ ಬೆಂಕಿ ಹಚ್ಚಿ 'ಕನ್ನಡಾಭಿಮಾನ' ಪ್ರದರ್ಶಿಸಿದವರು ಇವರೆ!... ಅಲ್ಲದೇ ಮೂರ್ತಿ ಸ್ಥಾಪನೆಗೆ ದುಡಿದಿದ್ದವರೂ ಇವರೆ!
ಹೌದು... ನಾವು ಹೇಳುತ್ತಿರುವುದು ಬೆಂಗಳೂರು ರಾಜರಾಜೇಶ್ವರಿ ನಗರದ ಬಂಗಾರಪ್ಪ ನಗರದ ಡಾ. ರಾಜ್ ಕುಮಾರ್ ಪ್ರತಿಮೆ ಬೆಂಕಿ ಇಟ್ಟ ದುಷ್ಕರ್ಮಿಗಳ ಬಗ್ಗೆ. ರಾಜರಾಜೇಶ್ವರಿ ನಗರದ ಡಾ. ರಾಜ್ ಕುಮಾರ್ ಪ್ರತಿಮೆ ಭಗ್ನ ಪ್ರಕರಣಕ್ಕೆ ಸಂಬಂಧಿಸಿ 5 ಜನರನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ವೇಳೆ ಅನೇಕ ಮಾಹಿತಿ ಬಾಯಿ ಬಿಟ್ಟಿದ್ದಾರೆ.[ರಾಜ್ ಪ್ರತಿಮೆಗೆ ಬೆಂಕಿ: ಸ್ಥಳೀಯರು ಹೇಳುವುದೇನು?]

ಬಂಗಾರಪ್ಪ ನಗರದ ನಿವಾಸಿಗಳಾದ ಮುತ್ತುರಾಜ್ (31), ಪ್ರದೀಪ್ ಕುಮಾರ್ (25), ಎಸ್.ಚೇತನ್ ರಾವ್ (22), ರವಿಕಿರಣ್ (19) ಮತ್ತು ಮಂಜುನಾಥ್ (19) ಬಂಧಿತ ಆರೋಪಿಗಳು.
ನಿಗದಿಯಂತೆ ನವೆಂಬರ್ 23ಕ್ಕೆ ರಾಜ್ ಪ್ರತಿಮೆ ಅನಾವರಣ ನಡೆಯಬೇಕಿತ್ತು. ಈ ಸಂಬಂಧ ಆಮಂತ್ರಣ ಪತ್ರಿಕೆಯನ್ನು ಸಹ ಮುದ್ರಣ ಮಾಡಿಸಲಾಗಿತ್ತು. ಸ್ಥಳೀಯ ಮುಖಂಡ ಮೋಹನ್ ಕುಮಾರ್ ಎಂಬುವರ ಹೆಸರನ್ನು ಫೋಟೋ ಸಮೇತ ಮುದ್ರಣ ಮಾಡಲಾಗಿತ್ತು. ಆದರೆ ತಮ್ಮ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಹಾಕದಿರುವುದಕ್ಕೆ ಆರೋಪಿಗಳಾದ ಮುತ್ತುರಾಜ್, ಪ್ರದೀಪ್ ಕುಮಾರ್ ಕೆರಳಿದ್ದರು. ಅಲ್ಲದೇ ಬೇರೆ ಏರಿಯಾದ ಶ್ರೀನಿವಾಸ್ ಡಾ. ರಾಜ್ ಸೇವಾ ಸಮಿತಿ ಹೆಸರಲ್ಲಿ ನಾಯಕರಾಗಿ ಬೆಳೆಯುತ್ತಿರುವುದು ದ್ವೇಷ ಹೊತ್ತಿಸಿತ್ತು.[ಸ್ವುಸುಗತ - ಆಹಾ ಕನ್ನಡತಾಯೇ ನೀನು ಧನ್ಯಳು!]
ಆಮಂತ್ರಣ ಪತ್ರಿಕೆ ಮತ್ತು ಫ್ಲೆಕ್ಸ್ ಗಳಲ್ಲಿ ಹೆಸರು ಹಾಕದಿರುವುದನ್ನೇ ಕಾರಣ ಮಾಡಿಕೊಂಡ ಆರೋಪಿಗಳು ಕಾರ್ಯಕ್ರಮಕ್ಕೆ ಅಡ್ಡಗಾಲು ಹಾಕಲು, ಸೇವಾ ಸಮಿತಿಯ ಹೆಸರಿಗೆ ಮಸಿ ಬಳಿಯಲು ಸಂಚು ರೂಪಿಸಿ ನವೆಂಬರ್ 13 ರಂದು ರಾತ್ರಿ ಪ್ರತಿಮೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಬೆಳಗ್ಗೆ ಏನೂ ಗೊತ್ತಿಲ್ಲದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಪರಾಧ ವಿಭಾಗದ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ , ಜಂಟಿ ಪೊಲೀಸ್ ಆಯುಕ್ತ ಶರತ್ಚಂದ್ರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯ ನೇತೃತ್ವವನ್ನು ಪಶ್ಚಿಮ ವಿಭಾಗ ಉಪ ಪೊಲೀಸ್ ಕಮೀಷನರ್ ಲಾಬೂರಾಮ್, ಸತ್ಯನಾರಾಯಣ್.ಎನ್.ಕುದೂರ್, ರಾಜರಾಜೇಶ್ವರಿನಗರ ಪಿಎಸ್ ಐ.ಟಿ.ಮಂಜುನಾಥ್ ವಹಿಸಿದ್ದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications