ಭೈರಪ್ಪನವರ ಹೊಸ ಕಾದಂಬರಿ 'ಯಾನ' ಪ್ರೀ ಬುಕ್ಕಿಂಗ್
ಬೆಂಗಳೂರು, ಜು.21: ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಡಾ.ಎಸ್ ಎಲ್ ಭೈರಪ್ಪ ಅವರ ಹೊಚ್ಚ ಹೊಸ ಕಾದಂಬರಿ 'ಯಾನ' ಮುಂದಿನ ತಿಂಗಳು ಲೋಕಾರ್ಪಣೆಗೊಳ್ಳಲಿದೆ. ಈಗಾಗಲೇ ಯಾನ ಕಾದಂಬರಿ ಬಗ್ಗೆ ಫೇಸ್ ಬುಕ್ ನಲ್ಲಿ ಚರ್ಚೆ ಆರಂಭಗೊಂಡಿದೆ.
ಓದುಗರು ಹಾಗೂ ಕನ್ನಡ ಪುಸ್ತಕ ಪ್ರಕಾಶಕರ ಪಾಲಿನ ಆಪ್ತರೆನಿಸಿರುವ ಭೈರಪ್ಪ ಅವರ 'ಯಾನ' ಕಾದಂಬರಿಯ ಕಥಾವಸ್ತುವಿನ ಗುಟ್ಟು ಇನ್ನೂ ರಟ್ಟಾಗಿಲ್ಲ. ಆಗಸ್ಟ್ ಮೊದಲ ವಾರದಲ್ಲಿ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. ಇದಕ್ಕೂ ಮುನ್ನ ಆಸಕ್ತರು ಮುಂಗಡವಾಗಿ ಪುಸ್ತಕವನ್ನು ಕಾಯ್ದಿರಿಸಿಕೊಳ್ಳಬಹುದು.
ಈ ಸೌಲಭ್ಯವನ್ನು ಕನ್ನಡ ಓದುಗರಿಗೆ ಸುನೀಲ್ ಎಸ್. ಪಾಟೀಲ್ ಹಾಗೂ ಬೆಂಗಳೂರಿನ ಸಚಿನ್ ಕುಡ್ತುರಕರ್ ಅವರ ಅಫೋರ್ಡಬಲ್ (a4dable.in) ಎಂಬ ಹೆಸರಿನ ವೆಬ್ ತಾಣ ಒದಗಿಸುತ್ತಿದೆ.
ಇತ್ತೀಚೆಗೆ ಭೈರಪ್ಪ ಹೊಗಳಿದ ಕರಣಂ ಪವನ್ ಪ್ರಸಾದ್ ಬರೆದಿರುವ 'ಕರ್ಮ' ಕೃತಿಯನ್ನು ಆನ್ ಲೈನ್ ಮೂಲಕ ರಾಜ್ಯದೆಲ್ಲೆಡೆ ಮಾರಾಟ ಮಾಡಿದ್ದು ಒಳ್ಳೆ ಅನುಭವ ನೀಡಿದೆ. ಈ ಸೌಲಭ್ಯ ವಿಶ್ವದೆಲ್ಲೆಡೆ ಲಭ್ಯವಾಗಿದ್ದು, ಪುಸ್ತಕ ಬಿಡುಗಡೆಯಾದ ಮುರ್ನಾಲ್ಕು ದಿನದೊಳಗೆ ಎಷ್ಟೇ ದೂರದ ವಿಳಾಸವಾದರೂ ತಲುಪಿಸುವ ಹೊಣೆ ನಮ್ಮದು ಎಂದು ಸಚಿನ್ ಅವರು ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದ್ದಾರೆ.

ಇಂಗ್ಲೀಷ್ ಹಳೆ, ಹೊಸ ಪುಸ್ತಕ ಖರೀದಿ ಸಾಕಷ್ಟು ವೆಬ್ ತಾಣಗಳಿವೆ. ಕನ್ನಡದಲ್ಲೂ ಟೋಟಲ್ ಕನ್ನಡ, ಸಪ್ನ, ಅಕೃತಿ ಬುಕ್ ಹೌಸ್, ಕನ್ನಡ ಸ್ಟೋರ್, ಬುಕ್ಸ್ ಫಾರ್ ಯೂ ಅಲ್ಲದೆ ಫ್ಲಿಪ್ ಕಾರ್ಟ್ ಮುಂತಾದ ಆನ್ ಲೈನ್ ಶಾಪಿಂಗ್ ವೆಬ್ ತಾಣಗಳು ಕನ್ನಡ ಪುಸ್ತಕಗಳನ್ನು ಆನ್ ಲೈನ್ ಮೂಲಕ ಖರೀದಿಸುವ ಸೌಲಭ್ಯ ಒದಗಿಸಿವೆ. ಇವೆಲ್ಲದರ ನಡುವೆ ಅಫೊರ್ಡಬಲ್ ಹೇಗೆ ಭಿನ್ನ? [ಈ ವೆಬ್ ತಾಣದ ಬಗ್ಗೆ ಇಲ್ಲಿ ಓದಿ]
'ನಾನು ಬರೆಯಲು ಆರಂಭಿಸಿದಾಗಿನಿಂದ ಇದುವರೆಗೂ ಸಾಹಿತ್ಯ ನಿರ್ಮಿತಿಯು ಬದಲಾವಣೆ, ಆಧುನಿಕತೆ ಮತ್ತು ಹಿಂದುಳಿದವರನ್ನು ಮೇಲೆತ್ತುವ ಪ್ರಯತ್ನದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕು, ಹಾಗೆ ತೊಡಗಿಸಿಕೊಳ್ಳದ ಬರೆಹವು ಕೇವಲ ಬೂಸಾ ಎಂಬ ಒತ್ತಡವನ್ನು ಹಲವು ಸಾಮಾಜಿಕ ಮತ್ತು ರಾಜಕೀಯ ಚಳುವಳಿಗಳು ಹಾಕುತ್ತಿವ' ಎಂದು ಸರಸ್ವತಿ ಸಮ್ಮಾನ್ ಸ್ವೀಕರಿಸಿದ ನಂತರದ ಭಾಷಣದಲ್ಲಿ ಎಸ್ ಎಲ್ ಭೈರಪ್ಪ ಅವರು ಹೇಳಿದ್ದರು. [ಭಾಷಣದ ಪೂರ್ಣ ಪಾಠ ಇಲ್ಲಿ ಓದಿ]
ಈ ಹಿಂದಿನ ಕಾದಂಬರಿ ಕವಲು : ಪ್ರಸ್ತುತ ದಿನಮಾನಗಳಲ್ಲಿ ಮಹಿಳಾ ಪರ ಕಾನೂನುಗಳ ದುರುಪಯೋಗ, ಮಹಿಳಾ ಮಣಿಗಳ ಹೋರಾಟದ ರೀತಿ, ಆಧುನಿಕ ಮಹಿಳಾವಾದ ಕಾರಣ ಛೀದ್ರವಾಗುತ್ತಿರುವ ಭಾರತೀಯ ಕೌಟುಂಬಿಕ ವ್ಯವಸ್ಥೆಗಳ ಬಗ್ಗೆ ಕವಲಿನಲ್ಲಿ ಚೆನ್ನಾಗಿ ಮನಸ್ಸಿಗೆ ನಾಟುವಂತೆ ಚಿತ್ರಿತವಾಗಿದೆ.
ಉನ್ನತ ಶಿಕ್ಷಣಗಳಲ್ಲಿ ಪಾಶ್ಚಿಮಾತ್ಯದ ಪ್ರಭಾವೋ ಏನೋ ಆಧುನಿಕ ಮಹಿಳೆಯರು, ಮುಕ್ತ ಸಂಸ್ಕೃತಿಯನ್ನು ಬಿಡಲಾಗದೆ, ಇತ್ತ ಭಾರತೀಯ ಸಂಸ್ಕೃತಿಯನ್ನು ಒಪ್ಪಿಕೊಳ್ಳಲಾಗದೆ ಒದ್ದಾಡುವ ಸಂದಿಗ್ಧ ಪರಿಸ್ಥಿತಿಯನ್ನು "ಕವಲು"ನಲ್ಲಿ ಚಿತ್ರಿಸಿದ್ದಾರೆ. ಕವಲು ಪೂರ್ತಿ ಓದಿ ಮುಗಿಸಿದಾಗ ಏಲ್ಲೋ ಒಂದು ಕಡೆ ನಮ್ಮ ಮನದ ಮೂಲೆಯಲ್ಲಿ ಇಂದಿನ ಆಧುನಿಕ ಮಹಿಳೆಯರ ಬಗ್ಗೆ ನಕರಾತ್ಮಕ ಭಾವನೆ ಮೂಡಿದರೆ ತಪ್ಪು ನಮ್ಮದಲ್ಲ. [ಸ್ತ್ರೀವಾದ, ಕುಟುಂಬ ವ್ಯವಸ್ಥೆಯ ಕವಲು]
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications