ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಚಿವ ಡಾ. ಸುಧಾಕರ್ ಗರಂ!
ಬೆಂಗಳೂರು, ಜುಲೈ 7: ಕೋವಿಡ್ 19 ರೋಗಿಗಳ ಚಿಕಿತ್ಸೆ ಮತ್ತು ಸೌಲಭ್ಯಗಳ ವಿಷಯದಲ್ಲಿ ಲೋಪಗಳಿಗೆ ಅವಕಾಶವಿಲ್ಲದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಲು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೂಚನೆ ನೀಡಿದರು. ಟೆಲಿ ಐಸಿಯು ಸೌಲಭ್ಯ ಒದಗಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳು, ವೈದ್ಯರು ಮತ್ತು ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿ ಪರಿಶೀಲನೆ ನಡೆಸಿದ ಸಚಿವರು ಸಭೆಯಲ್ಲಿ ಈ ಕುರಿತು ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಾಧ್ಯಮಗಳಲ್ಲಿ ಆಸ್ಪತ್ರೆಗೆ ಸಂಬಂಧಿಸಿದಂತೆ ನಕಾರಾತ್ಮಕ ವರದಿಗಳು ಬರುತ್ತಿವೆ. ಹಗಲು- ರಾತ್ರಿ ಲೆಕ್ಕಿಸದೆ ಮುಖ್ಯ ಮಂತ್ರಿ ಆದಿಯಾಗಿ ಎಲ್ಲರೂ ಕೆಲಸ ಮಾಡುತ್ತಿರುವಾಗ ಇಂತಹ ಲೋಹಗಳನ್ನು ಸಹಿಸಲು ಸಾಧ್ಯವಿಲ್ಲ. ನಿಮಗೆ ಬೇಕಿರುವ ಎಲ್ಲ ಸೌಲಭ್ಯಗಳನ್ನು ಸರ್ಕಾರ ನೀಡಲು ಸಿದ್ಧ ಆದರೆ ತಪ್ಪುಗಳು ಮರುಕಳಿಸಬಾರದು ಎಂದು ತಾಕೀತು ಮಾಡಿದರು.
ಬೆಂಗಳೂರು ನಗರದಲ್ಲಿ ಸೋಂಕಿತರು ಮತ್ತು ಮರಣ ಹೊಂದುತ್ತಿರುವವರ ಪ್ರಮಾಣ ಹೆಚ್ಚುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಆರೋಗ್ಯ, ವೈದ್ಯಶಿಕ್ಷಣ, ಬಿಬಿಎಂಪಿ ಹಿರಿಯ ಅಧಿಕಾರಿಗಳು, ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ, ರೋಗಿಗಳ ಜೊತೆ ಸಚಿವರು ಸಂವಾದ ನಡೆಸಿದ್ದಾರೆ.

ಪ್ರತಿದಿನ ಸರಿಯಾದ ಮಾಹಿತಿಯನ್ನು ನೀಡಿ
ಪ್ರತಿದಿನ ದಾಖಲು ಆಗುತ್ತಿರುವ ಸೋಂಕಿತರು ಮತ್ತು ಗುಣಮುಖರಾಗಿ ಬಿಡುಗಡೆ ಆಗುವವರ ಸಂಖ್ಯೆ ಯನ್ನು ಅಧಿಕೃತವಾಗಿ ತಿಳಿಸುವ ವ್ಯವಸ್ಥೆ ಮಾಡಬೇಕು. ಹಾಗೆಯೇ ಸಾವಿನ ಸಂಖ್ಯೆ ಮತ್ತು ಕಾರಣಗಳು, ಗಂಭೀರ ಸ್ಥಿತಿಯಲ್ಲಿ ಇರುವವರು ಮಾಹಿತಿ ನೀಡಬೇಕು ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ಅವರು ವೈದ್ಯಾಧಿಕಾರಿಗಳಿಗೆ ತಿಳಿಸಿದರು. ರೋಗಿಗಳು ಮರಣ ಹೊಂದಿದಾಗ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ಪರಿಣಿತರ ಜತೆ ಹಂಚಿಕೊಂಡು ಕಾರಣಗಳನ್ನು ಅಧ್ಯಯನ ಮಾಡಿ ಲೋಪ ಮರುಕಳಿಸದಂತೆ ಎಚ್ಚರವಹಿಸಬೇಕು. ಮರಣ ಕಾರಣಗಳ ವಿಶ್ಲೇಷಣೆಗೆ ಪರಿಣಿತ ವೈದ್ಯರೊಬ್ಬರನ್ನು ನಿಯೋಜಿಸುವಂತೆ ಸಚಿವರು ನಿದೇ೯ಶಕರಿಗೆ ಆದೇಶಿಸಿದರು.

ಚಿಕಿತ್ಸಾ ವಿಧಿ- ವಿಧಾನಗಳ ಮಾಹಿತಿ ಮುಚ್ಚಿಡಬೇಡಿ
ಅನುಸರಿಸುತ್ತಿರುವ ಚಿಕಿತ್ಸಾ ವಿಧಿ- ವಿಧಾನಗಳು, ಡಯಾಲಿಸಿಸ್ ಸೌಲಭ್ಯ ಪಡೆಯುತ್ತಿರುವವರ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಪ್ರತಿದಿನವೂ ಕೊಡಬೇಕು. ಹಾಗೆಯೇ ಗರ್ಭಿಣಿಯರ ವಿವರಗಳನ್ನು ನೀಡಲು ಸೂಚಿಸಿದರು.
ಈ ಹಿಂದೆ ಸೂಚನೆ ನೀಡಿದ್ದಂತೆ ಟೆಲಿ ಐಸಿಯುಗೆ ಸೇರ್ಪಡೆ ಮಾಡಿಲ್ಲದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಆದಷ್ಟು ಬೇಗ ಸೇರ್ಪಡೆ ಮಾಡುವಂತೆ ತಿಳಿಸಿದರು. ದೇಶದಲ್ಲೇ ವಿನೂತನ ವ್ಯವಸ್ಥೆ ಎಂದೇ ಹೆಸರಾಗಿರುವ ಟೆಲಿ ಐಸಿಯು ವ್ಯವಸ್ಥೆಗೆ ನಗರದಲ್ಲೇ ಇರುವ ವಿಕ್ಟೋರಿಯಾ, ಬೌರಿಂಗ್ ಮತ್ತು ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆಗಳಿಗೆ ಕಳೆದ ತಿಂಗಳೇ ಮಂಜೂರಾಗಿದೆ.

ಐಸಿಯುನಲ್ಲಿರುವ ರೋಗಿಗಳ ಜತೆ ಸಮಾಲೋಚನೆ
ಇದಾದ ಬಳಿಕ ವಿಡಿಯೋ ಸಂವಾದದ ಮೂಲಕ ಐಸಿಯು, ವಾರ್ಡುಗಳಲ್ಲಿರುವ ರೋಗಿಗಳ ಜತೆ ಸಮಾಲೋಚನೆ ನಡೆಸಿ ಚಿಕಿತ್ಸೆ ಮತ್ತು ಸೌಲಭ್ಯಗಳ ಗುಣಮಟ್ಟದ ಬಗ್ಗೆ ವಿಚಾರಿಸಿದರು. ಊಟದ ಗುಣಮಟ್ಟದ ಬಗ್ಗೆ ವಿಚಾರಿಸಿದರು. ಅದಕ್ಕೆ ಎಲ್ಲಾ ರೋಗಿಗಳು ತೃಪ್ತಿ ವ್ಯಕ್ತಪಡಿಸಿದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಊಟ- ಸ್ವಚ್ಛತೆ ಸಹಿತ ಮೇಲ್ವಿಚಾರಣೆ ನೋಡಿಕೊಳ್ಳಲು ಹಿರಿಯ ಅಧಿಕಾರಿ ಸೋಮಣ್ಣ ಕಡಕೊಳ ಅವರನ್ನು ನೇಮಿಸಲಾಗಿದೆ. ಬೌರಿಂಗ್ ಮತ್ತು ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲೂ ಅದೇ ಕ್ರಮ ಅನುಸರಿಸಬೇಕು ಎಂದು ನಿದೇ೯ಶಕರಿಗೆ ಸೂಚನೆ ನೀಡಿದರು.

ಕೊವಿಡ್ 19 ಸೇವೆಗೆ ಅಂತಿಮ ವಷ೯ದ ವಿದ್ಯಾಥಿ೯ಗಳು
ದಾಖಲಾಗುವ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ವೈದ್ಯರು ಮತ್ತು ಶುಶ್ರೂಷ ಸಿಬ್ಬಂದಿ ಇರುವಂತೆ ನೋಡಿಕೊಳ್ಳಬೇಕು. ವಿಶೇಷವಾಗಿ ಐಸಿಯು ಹಾಗೂ ಹೈ ಪ್ಲೊ ಆಕ್ಸಿಜನ್ ವಾಡು೯ಗಳಲ್ಲಿ ಮೂರು ರೋಗಿಗಳಿಗೆ ಒಬ್ಬ ನಸ್೯ ಕಡ್ಡಾಯವಾಗಿ ಇರಬೇಕು. ಕೊರತೆಯಿರುವ ಕಡೆ ತಾತ್ಕಾಲಿಕ ನೇಮಕ ಮಾಡಿಕೊಳ್ಳಬೇಕು. ನೇಮಕ ಆಗುವತನಕ ಸಕಾ೯ರಿ ಮತ್ತು ಖಾಸಗಿ ಕಾಲೇಜುಗಳ ಅಂತಿಮ ವಷ೯ದ ವಿದ್ಯಾಥಿ೯ಗಳನ್ನು ನಿಯೋಜಿಸುವಂತೆ ಸೂಚಿಸಿದರು. ಐಸಿಯು ಮತ್ತು ಹೈ ಪ್ಲೊ ಆಕ್ಸಿಜನ್ ವಾಡು೯ಗಳಿಗೆ ತರಬೇತಿ ಪಡೆದವರು ಬೇಕು. ಕೋವಿಡ್ ಕೇರ್ ಸೆಂಟರ್ ಹಾಗೂ ಜನರಲ್ ವಾಡು೯ಗಳಲ್ಲಿರುವ ತರಬೇತಿ ಪಡೆದವರನ್ನು ಅಲ್ಲಿಗೆ ವಗಾ೯ಯಿಸಿ ಅಂತಿಮ ವಷ೯ದ ವಿದ್ಯಾಥಿ೯ಗಳನ್ನು ಸೆಂಟರ್ಗಳಲ್ಲಿ ಬಳಸಬಹುದು. ವೈದ್ಯರ ಕೊರತೆ ನಿವಾರಿಸಿಕೊಳ್ಳಲು ಆಯುಷ್ ಮತ್ತು ಪಿಜಿ ವಿದ್ಯಾಥಿ೯ಗಳನ್ನು ಆದ್ಯತೆ ಮೇರೆಗೆ ಬಳಸಿಕೊಳ್ಳಿ ಎಂದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications