ಡಾ. ಯತೀಂದ್ರ ಸಿದ್ದರಾಮಯ್ಯಗೆ ಕೋವಿಡ್ ಸೋಂಕು ದೃಢ
ಬೆಂಗಳೂರು, ಆ. 07: ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದೆ. ಕಳೆದ ಮೂರು ದಿನಗಳ ಹಿಂದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Recommended Video
ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ಕೋವಿಡ್ ಪಾಸಿಟಿವ್ ಎಂದು ದೃಢಪಟ್ಟಾಗ ಅವರನ್ನು ಪುತ್ರ ಡಾ. ಯತೀಂದ್ರ ಅವರು ಆರೈಕೆ ಮಾಡಿದ್ದರು. ಸಿದ್ದರಾಮಯ್ಯ ಅವರ ಪ್ರಾಥಮಿಕ ಸಂಪರ್ಕಕ್ಕೆ ಅವರು ಬಂದಿದ್ದರು. ಇದೀಗ ಅವರಿಗೂ ಕೊರೊನಾ ವೈರಸ್ ತಗುಲಿದೆ.

ಕೋವಿಡ್ ಸೋಂಕು ದೃಢಪಟ್ಟಿರುವುದನ್ನು ಟ್ವಿಟರ್ನಲ್ಲಿ ಸ್ವತಃ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಜೊತೆಗೆ ಅವರೊಂದಿಗೆ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ, ಕ್ವಾರಂಟೈನ್ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ. ಡಾ. ಯತೀಂದ್ರ ಸಿದ್ದರಾಮಯ್ಯ ಅವರೂ ಇದೀಗ ಮಣಿಪಾಲ್ ಆಸ್ಪತ್ರೆಗೆ ತೆರಳಿ ದಾಖಲಾಗಲಿದ್ದಾರೆ ಎಂಬ ಮಾಹಿತಿಯಿದೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— Dr Yathindra Siddaramaiah (@Dr_Yathindra_S) August 7, 2020
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications