ಶವವನ್ನು 70 ಕಿ.ಮೀ ಎಳೆದುಕೊಂಡು ಹೋದ ಬಸ್ ಚಾಲಕ
Recommended Video

ಬೆಂಗಳೂರು, ಫೆಬ್ರವರಿ 05 : ಶಾಂತಿನಗರ ಒಂದನೇ ಡಿಪೋದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ ಶವ ಪ್ರಕರಣ, ತಾನೇ ಅಪಘಾತ ಮಾಡಿರುವುದಾಗಿ ಕೆಎಸ್ ಆರ್ ಟಿಸಿ ಬಸ್ ಚಾಲಕ ಮೊಯಿನುದ್ದೀನ್ ತಪ್ಪೊಪ್ಪಿಕೊಂಡಿದ್ದಾರೆ.
ಶಾಂತಿನಗರ ಒಂದನೇ ಡಿಪೋದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ ಶವ, ಅಪಘಾತದಿಂದ ಮೃತಪಟ್ಟಿರುವುದಾಗಿ ತನಿಖೆ ವೇಳೆ ತಿಳಿದುಬಂದಿತ್ತು.
ಅಪಘಾತ ನಡೆದ ಸ್ಥಳದಲ್ಲಿ ಬಸ್ ನಿಲ್ಲಿಸದೆ ಬಸ್ ಚಾಲಕ ಬಸ್ ಚಲಾಯಿಸಿಕೊಂಡು ಬಂದು, ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದ, ಚಾಲಕ ಮೊಯಿನುದ್ದೀನ್ ವಿರುದ್ಧ ಸಾಕ್ಷ್ಯ ನಾಶಕ್ಕೆ ಯತ್ನ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮೂರು ದಿನ ವಶಕ್ಕೆ ಪಡೆಯಲಾಗಿದೆ.

ವಿಚಾರಣೆ ವೇಳೆ ತಾನು ಅಪಘಾತ ಮಾಡಿರುವುದು ಹೌದು, ಅಪಘಾತವಾದ ತಕ್ಷಣ ಬಸ್ ನಿಲ್ಲಿಸದೆ ಚಲಾಯಿಸಿಕೊಂಡು ಹೋದೆ, ಪೊಲೀಸರಿಗೆ ಭಯ ಪಟ್ಟು ತಿಳಿಸದೆ ಮನೆಗೆ ಹೋಗಿದ್ದೆ ಎಂದು ಹೇಳಿಕೆ ನೀಡಿದ್ದಾರೆ.
ಮೃತ ವ್ಯಕ್ತಿ ಗುರುತು ಪತ್ತೆಯಾಗಿಲ್ಲ, ರಾತ್ರಿ ವೇಳೆಯಾಗಿದ್ದರಿಂದ ಆತನಿಗೂ ಅಪಘಾತ ನಡೆದ ಸ್ಥಳ ಯಾವುದು ಎಂದು ತಿಳಿದಿಲ್ಲ, ಘಟನೆ ನಡೆದ ಸ್ಥಳವನ್ನು ಪತ್ತೆ ಹಚ್ಚಿ ಪ್ರಕರಣವನ್ನು ಅಲ್ಲಿನ ಠಾಣೆಗೆ ವರ್ಗಾಯಿಸುವುದುಆಗಿ ವಿಲ್ಸನ್ ಗಾರ್ಡ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೊಯಿನುದ್ದೀನ್ ರಾತ್ರಿ 12.30 ರ ಸುಮಾರಿಗೆ ರಾಮನಗರ ಮತ್ತು ಚನ್ನಪಟ್ಟಣ ಮಧ್ಯೆ ಅಪಘಾತ ನಡೆದಿದ್ದು, ಚಾಲಕ ಬಸ್ ನಿಲ್ಲಿಸದೆ ಬೆಂಗಳೂರಿಗೆ ಬಂದಿದ್ದಾನೆ. ಕೊನೆಯ ನಿಲ್ದಾಣವಾದ ಶಾಂತಿನಗರದಲ್ಲಿ ಪ್ರಯಾಣಿಕರೆಲ್ಲಾ ಇಳಿದ ಬಳಿಕ ಚಾಲಕ ಬಸ್ ಡಿಪೋದ ಬಳಿ ಬಸ್ ನ ಕೆಳಗೆ ನೋಡಿದಾಗ ವ್ಯಕ್ತಿಯ ಶವ ಇರುವುದನ್ನು ಕಂಡಿದ್ದಾನೆ, ವ್ಯಕ್ತತಿಯ ದೇಹದಲ್ಲಿ ಸಂಪೂರ್ಣ ತರಚಿದ ಗಾಯಗಳಾಗಿತ್ತು. ಬಳಿಕ ಸಿಕ್ಕಿ ಬೀಳುತ್ತೇನೆ ಎಂದು ಆತಂಕದಲ್ಲಿ ಬಸ್ ಅನ್ನು ಡಿಪೋದ ಒಳಗೆ ತೆಗೆದುಕೊಂಡು ಹೋಗಿದ್ದು, ಬಸ್ ಕೆಳಗೆ ಸಿಲುಕಿದ್ದ ಶವ ಕೆಳಗೆ ಬಿದ್ದಿದೆ. ಬಳಿಕ ಶವವನ್ನು ಇತರ ಎರಡು ಬಸ್ ಗಳ ನಡುವೆ ಹಾಕಿ ಹೋಗಿದ್ದಾಗಿ ಆರೋಪಿ ಬಾಯ್ಬಿಟ್ಟಿದ್ದಾನೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications