ಅಕ್ಟೋಬರ್ 7ರಿಂದ Onlineನಲ್ಲೇ DL ಅರ್ಜಿ ಸಲ್ಲಿಸಬಹುದು
ಬೆಂಗಳೂರು, ಸೆಪ್ಟೆಂಬರ್ 28: ವಾಹನ ಕಲಿಕಾ ಚಾಲನಾ ಪತ್ರ (LL), ಚಾಲನಾ ಪರವಾನಗಿ (DL) ಸೇರಿದಂತೆ ಎಲ್ಲ ರೀತಿಯ ವಾಹನ ಸೇವೆಗಳಿಗೆ ಇನ್ನು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಕೆ ವ್ಯವಹಾರ ಪೂರ್ಣಗೊಳಿಸಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದೆ.
ಸಾರಥಿ ಸೇವೆ ಅಕ್ಟೋಬರ್ 7ರಿಂದ ಈ ನೂತನ ನಿಯಮವು ಪ್ರಾಯೋಗಿಕವಾಗಿ ರಾಜಧಾನಿಯ 10 ಆರ್ ಟಿಓ ಕಚೇರಿಗಳಲ್ಲಿ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಾಹನ ಚಾಲನಾ ಪರವಾನಗಿ ನೀಡುವ ಈ ಅಂತರ್ಜಾಲ ವ್ಯವಸ್ಥೆಗೆ ''ಸಾರಥಿ'' ಎಂದು ಹೆಸರಿಡಲಾಗಿದೆ.

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿರುವ (RTO) ವ್ಯಾಪಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಸಲುವಾಗಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ತ್ವರಿತಗತಿಯಲ್ಲಿ ಅರ್ಜಿ ವಿಲೇವಾರಿಗೆ ಅನುವು ಮಾಡಿಕೊಡುವುದು ಇದರ ಸದುದ್ದೇಶವಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಇ-ಆಡಳಿತ ಯೋಜನೆಯಡಿ ದೇಶಾದ್ಯಂತ ಎಲ್ಲ ಪ್ರಾದೇಶಿಕ ಸಾರಿಗೆ ಕಚೇರಿಗಳನ್ನು ಗಣಕೀಕರಣಗೊಳಿಸಲಾಗಿದ್ದು, NIC ಅಭಿವೃದ್ಧಿಪಡಿಸಿರುವ ಎರಡು ಸಾಫ್ಟ್ ವೇರ್ ಬಳಸಿ ಸಾರಿಗೆ ಕಚೇರಿಗಳನ್ನು ಕಾಗದರಹಿತಗೊಳಿಸಲಾಗುತ್ತದೆ. ಕೇಂದ್ರದ ತಂತ್ರಾಂಶ ಹಾಗೂ ಅದಕ್ಕೆ ಸಂಬಂಧಿಸಿದ ದತ್ತಾಂಶಗಳನ್ನು ಸೇರ್ಪಡೆ ಮಾಡುವ ಮೂಲಕ ಅಂತರ್ಜಾಲದಲ್ಲಿ ಅರ್ಜಿ ಸ್ವೀಕರಿಸಲಾಗುವುದು.
ಒಟ್ಟು 8 ಸೇವೆಗಳು ಅಂತರ್ಜಾಲದಲ್ಲಿ: 1. ಕಲಿಕಾ ಚಾಲನಾ ಪರವಾನಗಿ, 2. ಚಾಲನಾ ಪರವಾನಗಿ, 3. ವಾಹನಗಳ ನೋಂದಣಿ ವ್ಯಾಪ್ತಿ, 4. ನೋಂದಣಿ ಹೇಗೆ ಮಾಡುವುದು ಎಂಬ ವಿವರ ಪಡೆಯುವುದು, 5. ನೋಂದಣಿ ಸಮಯದಲ್ಲಿ ವಾಹನ ಹಾಜರುಪಡಿಸುವ ಪ್ರಕ್ರಿಯೆ, 6. ನೋಂದಣಿ ಪತ್ರ ನವೀಕರಣ, 7. ಕಂತು ಖರೀದಿ ಒಪ್ಪಂದ ಮತ್ತು 8. ಸಾರಿಗೆ ವಾಹನಗಳ ಅರ್ಹತಾ ಪತ್ರವನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿನ ಯಾವುದೇ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಪಡೆಯಬಹುದು.
ಇತರೆ ಇಲಾಖೆಗಳಿಗೆ ಮಾಹಿತಿ: ವಾಹನಗಳ ನೋಂದಣಿ ಮಾಹಿತಿಯನ್ನು ಪೊಲೀಸ್ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ ಮತ್ತು ಅಬಕಾರಿ ಇಲಾಖೆ ಸೇರಿದಂತೆ ಇತರೆ ಸರ್ಕಾರಿ ಸಂಸ್ಥೆಗಳಿಗೆ ಆನ್ ಲೈನ್ ಮೂಲಕ ಒದಗಿಸಲಾಗುವುದು. ಹೊಸ ಸೇವೆಯಿಂದ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ವಾಹನಗಳ ಆರ್ಸಿ ದಾಖಲೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.
ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಸದ್ಯಕ್ಕೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಜನತೆ ನಗರದ ಯಾವುದೇ ಆರ್ ಟಿಒ ಕಚೇರಿಗಳಿಂದ ಅಗತ್ಯ ಸೇವೆ ಪಡೆದು ಕೊಳ್ಳಬಹುದಾಗಿದೆ ಎಂದು ತಿಳಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications