ಬೆಂಗಳೂರು ಟ್ರಾಫಿಕ್ ಜಂಕ್ಷನ್ಗಳ ಮೇಲೆ ನಿಗಾ ಇಡಲು ಡ್ರೋನ್ ಕ್ಯಾಮೆರಾ ಬಳಕೆ
ಬೆಂಗಳೂರು, ಜೂನ್ 20: ವಾಹನ ದಟ್ಟಣೆ ಇರುವ ಜಂಕ್ಷನ್ಗಳನ್ನು ನಿರ್ವಹಣೆ ಮಾಡುವ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಸೋಮವಾರ ಹೆಬ್ಬಾಳ ಜಂಕ್ಷನ್ನಲ್ಲಿ ಡ್ರೋನ್ ಕಣ್ಗಾವಲು ಪ್ರಯೋಗವನ್ನು ನಡೆಸಲಿದ್ದಾರೆ.
ಮಾರತ್ತಹಳ್ಳಿ ಜಂಕ್ಷನ್ನಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಪರೀಕ್ಷಿಸಲು ಅವರು ಯೋಜಿಸಿದ್ದಾರೆ. ಪ್ರಸ್ತುತ ಟ್ರಾಫಿಕ್ ಪೊಲೀಸರು ಜಂಕ್ಷನ್ಗಳಲ್ಲಿ ಟ್ರಾಫಿಕ್ ಸಾಂದ್ರತೆಯನ್ನು ಮೇಲ್ವಿಚಾರಣೆ ಮಾಡಲು ಎರಡು ಡ್ರೋನ್ ಕ್ಯಾಮೆರಾಗಳನ್ನು ಬಳಸುತ್ತಿದ್ದಾರೆ. ಅಲ್ಲದೆ ಕಾರ್ಯಾಚರಣೆಗಳಿಗೆ ಅವುಗಳನ್ನು ಬಳಸಲು ಮುಂದಾಗಿದ್ದಾರೆ.

ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ ಎನ್ ಅನುಚೇತ್ ಮಾತನಾಡಿ, ಟ್ರಾಫಿಕ್ ಆವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವುದು ಮತ್ತು ತಂತ್ರಜ್ಞಾನಕ್ಕೆ ನಮ್ಮನ್ನು ನಾವು ಒಗ್ಗಿಸಿಕೊಳ್ಳಲು ನಾವು ಡ್ರೋನ್ ಕ್ಯಾಮರಾ ಬಳಸುತ್ತಿದ್ದೇವೆ. ನಾವು ಇಂದು ಪ್ರಯೋಗಗಳನ್ನು ನಡೆಸಿದ್ದೇವೆ ಮತ್ತು ವ್ಯವಸ್ಥೆಯೊಂದಿಗೆ ಪರಿಣತಿಯನ್ನು ಪಡೆಯಲು ಮುಂದಿನ ವಾರ ಅದನ್ನು ಮುಂದುವರಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಟ್ರಾಫಿಕ್ ಪೊಲೀಸರು ನಗರದಲ್ಲಿ ಹೆಚ್ಚು ಜನದಟ್ಟಣೆ ಇರುವ ಎಂಟು ಜಂಕ್ಷನ್ಗಳಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಪರೀಕ್ಷಿಸಲು ವಾಹನಗಳ ಚಲನೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯವಿರುವೆಡೆ ದಟ್ಟಣೆಯನ್ನು ನಿವಾರಿಸಲು ಅಗತ್ಯ ಕ್ರಮಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ.
ಬೆಂಗಳೂರು ಸಂಚಾರ ಪೊಲೀಸರು ಮೊದಲ ಬಾರಿಗೆ ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಳಸಿ ನಗರದ ಟ್ರಾಫಿಕ್ ಅನ್ನು ನಿಯಂತ್ರಿಸಲಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಇತ್ತೀಚೆಗೆ ಹೇಳಿದ್ದರು. ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ನಾನು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಮೂರು ತಿಂಗಳ ಗಡುವನ್ನು ನೀಡಿದ್ದೇನೆ. ನಗರವು ವಿಶ್ವದ ಅತ್ಯಂತ ಜನದಟ್ಟಣೆಯ ನಗರಗಳಲ್ಲಿ ಒಂದಾಗಿದೆ ಎಂಬ ಅಪಖ್ಯಾತಿ ಗಳಿಸಿದೆ ಎಂದು ಬೆಂಗಳೂರಿನ ಕಚೇರಿಯಲ್ಲಿ ನಡೆದ ಮೊದಲ ಅಪರಾಧ ಪರಿಶೀಲನಾ ಸಭೆಯಲ್ಲಿ ಅವರು ಹೇಳಿದ್ದರು.
ಜಂಕ್ಷನ್ಗಳಲ್ಲಿ ನಿಯೋಜಿಸಲಾದ ಪೊಲೀಸರು ಒಂದು ಹಂತವನ್ನು ಮೀರಿದ ದಟ್ಟಣೆಯನ್ನು ನೋಡಲು ಸಾಧ್ಯವಾಗುವುದಿಲ್ಲ ಮತ್ತು ರೋಡ್ ಬ್ಲಾಕ್ಗೆ ಕಾರಣವೇನು ಎಂದು ತಿಳಿಯುವುದಿಲ್ಲ. ಇಲ್ಲಿಯೇ ಡ್ರೋನ್ಗಳು ಬಂದು ಅಡೆತಡೆಗಳನ್ನು ಗುರುತಿಸಲು ಪೊಲೀಸರಿಗೆ ಸಂಚಾರ ಸುಗಮಗೊಳಿಸಲು ಸಹಾಯ ಮಾಡುತ್ತದೆ.
ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ ಅವರು ಸೂಚಿಸಿದ ಡ್ರೋನ್ ಬಳಕೆಯನ್ನು ಅಪರಾಧದ ಮೇಲೆ ನಿಗಾ ಇಡಲು ಜನನಿಬಿಡ ಸ್ಥಳಗಳಲ್ಲಿಯೂ ಬಳಸಲಾಗುವುದು ಎಂದು ಅವರು ಹೇಳಿದ್ದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್












Click it and Unblock the Notifications