ಭಾರತದಲ್ಲಿ ಮುಂಗಾರು ಮಳೆ ಶೇ.45 ಕುಸಿತ
ನವದೆಹಲಿ, ಜೂ.24: ಮುಂಗಾರು ಮಳೆ ಆರಂಭಕ್ಕೂ ಮುನ್ನ ಹವಾಮಾನ ಇಲಾಖೆ ತಿಳಿಸಿದ ಮುನ್ಸೂಚನೆ ನಿಜವಾಗಿದೆ. ಈ ಬಾರಿ ಎಲ್ ನಿನೋ ಪ್ರಭಾವದಿಂದಾಗಿ ದೇಶದಲ್ಲಿ ಕಡಿಮೆ ಪ್ರಮಾಣದ ಮಳೆ ಬಿದ್ದಿದೆ ಎನ್ನುವ ಅಂಶವನ್ನು ಹವಾಮಾನ ತಜ್ಞರು ಖಚಿತಪಡಿಸಿದ್ದಾರೆ.
ಜೂನ್ ಆರಂಭದಿಂದ ಜೂನ್ 18ರವರೆಗೆ ದೇಶದಲ್ಲಿ ಕೇವಲ ಶೇ.45ರಷ್ಟು ಮಾತ್ರ ಮಳೆಯಾಗಿದೆ. ಈ ಅವಧಿಯಲ್ಲಿ ದೇಶಾದ್ಯಂತ 78 ಮಿ.ಮೀ. ಮಳೆ ಸುರಿಯಬೇಕಿತ್ತು.
ಮಧ್ಯಪ್ರದೇಶ, ಗುಜರಾತ್, ಛತ್ತೀಸ್ಗಢ, ಮಹಾರಾಷ್ಟ್ರ, ಗೋವಾ ಹಾಗೂ ಒಡಿಶಾ ಒಳಗೊಂಡ ಮಧ್ಯಭಾರತದಲ್ಲಿ ದೀರ್ಘಕಾಲಿಕ ಸರಾಸರಿ ಮಳೆಯ ಪ್ರಮಾಣದ ಪ್ರಕಾರ ಶೇ. 66.2 ರಷ್ಟು ಮಳೆಯಾಗಬೇಕಿತ್ತು. ಆದರೆ ಇಲ್ಲಿವರೆಗೆ ಕೇವಲ 31.7 ಮಿ.ಮೀ.ನಷ್ಟು ಮಳೆಯಾಗಿದೆ.

ಈ ವರ್ಷ ಮುಂಗಾರು ಮಳೆಯ ಪ್ರಮಾಣ ಸಾಮಾನ್ಯಕ್ಕಿಂತ ಕಡಿಮೆ ಇರಲಿದ್ದು ಶೇ.95ರಷ್ಟು ಮಳೆ ಬರಬಹುದು ಎಂದು ಹವಾಮಾನ ಇಲಾಖೆ ಈ ಹಿಂದೆಯೇ ಮುನ್ಸೂಚನೆ ನೀಡಿತ್ತು.[ಪಥ ಬದಲಾವಣೆ : ಓಮನ್ ಕರಾವಳಿಯತ್ತ ಮುಂಗಾರು]
ಇನ್ನೂ ಮೂರು ತಿಂಗಳುಗಳ ಮಳೆಗಾಲ ಇರುವುದರಿಂದ ಉತ್ತಮ ಮಳೆಯಾಗಬಹುದು ಎಂಬ ನಿರೀಕ್ಷೆ ಹವಾಮಾನ ತಜ್ಞರದ್ದು. ಸಮುದ್ರದ ವಾತಾವರಣ ಬಿಸಿಯಾಗುವುದರಿಂದ ಉಂಟಾದ ಎಲ್ ನಿನೋ ಪರಿಣಾಮದಿಂದ ಮುಂಗಾರು ದುರ್ಬಲವಾಗಿದೆ. ಇದು ಚೇತರಿಕೆ ಕಂಡು ಬಂದಲ್ಲಿ ಹೆಚ್ಚಿನ ಮಳೆಯಾಗಬಹುದು ಆದರೆ ಚೇತರಿಕೆ ಕಾಣುತ್ತಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications