ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಡಿಯುವ ನೀರಿಗಾಗಿ 350ಕೋಟಿ ಬಿಡುಗಡೆ: ಕಾಗೋಡು

By Ananthanag
|
Google Oneindia Kannada News

ಬೆಂಗಳೂರು, ಜನವರಿ 10: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಗಂಭೀರ ಪರಿಸ್ಥಿತಿ ಎದುರಾಗಬಹುದೆಂದು ಅಂದಾಜಿಸಲಾಗಿದೆ, ಕುಡಿಯುವ ನೀರು ಸರಬರಾಜಿಗೆ ಮೊದಲ ಆದ್ಯತೆ ನೀಡಿರುವ ಸರ್ಕಾರ ಇದಕ್ಕೆ 350 ಕೋಟಿ ರೂ. ಹಣ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದರು.

ಬರ ಅಧ್ಯಯನಕ್ಕೆ ಸಚಿವರ ನಾಲ್ಕು ತಂಡಗಳು ತೆರಳಿದ್ದು, ಅಧ್ಯಯನ ಮುಗಿದಿದೆ. ವರದಿ ಬಂದ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದ ಸಚಿವರು, ಬರದಿಂದ ರಾಜ್ಯದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂ. ನಷ್ಠ ಆಗಿದೆ. ಕೇಂದ್ರದಿಂದ ರೂ. 1754 ಕೋಟಿ ಬಂದಿದ್ದು, ಇನ್ನೂ 900 ಕೋಟಿ ರೂ. ಹಣ ನೀರಿಕ್ಷಿಸಲಾಗಿದೆ ಎಂದರು.[ಸುಡುತ್ತಿದೆ ಕರ್ನಾಟಕ, ಬಾ ಮಳೆಯೇ ಬೇಗ ಬಾ..]

Drought: rs 350 crore released by government for drinking water

ನಮಗೆ ಬೆಳೆ ಪರಿಹಾರದ ಹಣ ಮೂರು ಸಾವಿರ ಕೋಟಿ ರೂ. ಆಗಿದ್ದು ರೈತರಿಗೆ ನಿಯಮಾವಳಿ ಪ್ರಕಾರ ಒಂದು ಹೆಕ್ಟೇರ್ ಪ್ರದೇಶಕ್ಕೆ 6350 ರೂ. ಪರಿಹಾರ ನೀಡಬೇಕಾಗುತ್ತದೆ ಎಂದ ಸಚಿವರು ಮುಂದಿನ ಮಾರ್ಚ್, ಏಪ್ರಿಲ್ ವೇಳೆಗೆ ಬೇಸಿಗೆ ಇನ್ನೂ ಗಂಭೀರವಾಗಲಿದ್ದು ಕುಡಿಯುವ ನೀರು ಪೂರೈಕೆಗಾಗಿಯೇ ನಮಗೆ 1500 ಕೋಟಿ ರೂ. ಹಣ ಬೇಕಾಗುತ್ತದೆ ಎಂದರು.

ರಾಜ್ಯದಲ್ಲಿ ಪ್ರಸ್ತುತ ಭೀಕರ ಬರಗಾಲ ಆವರಿಸಿ ನದಿ,ಕೆರೆ,ಕಟ್ಟೆಗಳು ಆಗಲೇ ಬತ್ತಿವೆ ಇನ್ನು ಬೇಸಿಗೆ ಸಮಯದಲ್ಲಿ ಜನ, ಜಾನುವಾರುಗಳಿಗೆ ಹೇಗೆ ನೀರು ಮತ್ತು ಮೇವನ್ನು ಸರಕಾರ ಒದಗಿಲಿದೇ ಎಂಬದು ಎಲ್ಲರನ್ನು ಕಾಡುತ್ತಿರುವ ಪ್ರಶ್ನೆಯಾಗಿದೆ.

English summary
Rs 350 crore released by the karnataka government to overcome the water shortage during summer said Revenue Minister Kagodu Timmappa. Due to the drought There was a problem with water and food.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X