ಡ್ರಗ್ ಸೇವಿಸುವ ವಿದ್ಯಾರ್ಥಿಗಳನ್ನು ಜೈಲಿಗಟ್ಟಿ: ಪಿಯು ಇಲಾಖೆ ಸೂಚನೆ
ಡ್ರಗ್ ಸೇವಿಸು ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕುರಿತು ಎಲ್ಲ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದೆ.
ಬೆಂಗಳೂರು, ನವೆಂಬರ್, 22: ಕಾಲೇಜುಗಳಲ್ಲಿ ಪತ್ತೆಯಾಗುವ ಡ್ರಗ್ ಸೇವನೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಇಲಾಖೆ ಹೊರಡಿಸಿರುವ ಸುತ್ತೋಲೆ ಕುರಿತು ಬ್ಯಾಂಗ್ಲೂರ್ ಮಿರರ್ ಪತ್ರಿಕೆ ವರದಿ ಮಾಡಿದೆ, ಅಷ್ಟೇ ಅಲ್ಲದೆ ನ್ಯೂಸ್ ಮಿನಿಟ್ ಸಹ ತನ್ನ ವೆಬೈಸೈಟ್ ನಲ್ಲಿ ಈ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿದೆ.
ಕಾಲೇಜುಗಳಲ್ಲಿ ಮಾದಕ ದ್ರವ್ಯ ಹಾಗು ಮಾನಸಿಕ ಸ್ಥಿರತೆಯನ್ನು ಹಾಳುಮಾಡುವಂತಹ ಪದಾರ್ಥಗಳನ್ನು ಸೇವಿಸುತ್ತಿರುವ ವಿದ್ಯಾರ್ಥಿಗಳ ಕುರಿತು ಕೂಡಲೇ ಪೊಲೀಸ್ ಇಲಾಖೆಗೆ ವರದಿ ನೀಡುವಂತೆ ರಾಜ್ಯದ ಎಲ್ಲ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಅಷ್ಟೇ ಅಲ್ಲದೆ ಕ್ಯಾಂಪಸ್ ಗಳಲ್ಲಿ ಈ ಕುರಿತು ಆಗಾಗ್ಗೆ ಪರಿಶೀಲನೆ ನಡೆಸುವಂತೆ ಕಾಲೇಜುಗಳಿಗೆ ಸೂಚಿಸಿದೆ.

ತನಿಖೆ ವೇಳೆ ಕಾಲೇಜು ಕ್ಯಾಂಪಸ್ ಗಳಲ್ಲಿ ಮಾದಕ ದ್ರವ್ಯಗಳು ಪತ್ತೆಯಾದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಮತ್ತು ಮಾದಕ ಪದಾರ್ಥಗಳನ್ನು ಸೇವಿಸುತ್ತಿರುವ ವಿದ್ಯಾರ್ಥಿಗಳನ್ನು ಬಂಧಿಸಲು ಪೊಲೀಸ್ ಇಲಾಖೆ ಸಂಪೂರ್ಣ ಸ್ವತಂತ್ರ್ಯ ಎಂದು ಇಲಾಖೆ ಸುತ್ತೋಲೆಯಲ್ಲಿ ಸೂಚಿಸಿದೆ.
ಕೊಕೆನ್, ಮಾರ್ಫೈನ್, ಅಫೀಮ್, ಗಾಂಜಾ, ಹಾಗು ಮಾನಸಿಕ ಸ್ಥಿರತೆಯನ್ನು ಹಾಳುಮಾಡುವಂತಹ ಪದಾರ್ಥಗಳನ್ನು ಸೇವಿಸುವ ವಿದ್ಯಾರ್ಥಿ ಅಥವಾ ಕಾಲೇಜು ಸಿಬ್ಬಂದಿ ಯಾರಾದರೂ ಪತ್ತೆಯಾದಲ್ಲಿ ಅವರನ್ನು ಕೂಡಲೇ ಪೊಲೀಸ್ ವಶಕ್ಕೆ ಒಪ್ಪಿಸಬೇಕು.
ಮತ್ತು ಅಂತಹವರ ವಿರುದ್ಧ ಎನ್ ಡಿ ಪಿ ಎಸ್ (ಮಾದಕ ಪದಾರ್ಥ ಮತ್ತು ಮಾನಸಿಕ ಸ್ಥಿರತೆ ಹಾಳು ಮಾಡುವ ಪದಾರ್ಥ ಸೇವನೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
ಅಷ್ಟೇ ಅಲ್ಲದೆ ಅಂತಹವರಿಗೆ 1 ವರ್ಷ ಜೈಲು ಮತ್ತು 20ಸಾವಿರ ರೂ. ದಂಡ ವಿಧಿಸುಬಹುದು ಎಂದು ಇಲಾಖೆ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
"ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಡ್ರಗ್ ಸೇವನೆ ಮಾಡಿರುವ ಪ್ರಕರಣಗಳು ವರದಿಯಾಗಿವೆ. ಈ ಬಗ್ಗೆ ಕಾಲೇಜು ಆಡಳಿತ ಸಿಬ್ಬಂದಿ ಕಠಿಣ ಕ್ರಮ ತೆಗೆದುಕೊಳ್ಳಬೇಕು" ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಶಿಕಲಾ ತಿಳಿಸಿದ್ದಾರೆ.
ಹಲವು ಶ್ರೀಮಂತ ವಿದ್ಯಾರ್ಥಿಗಳು ಡ್ರಗ್ ಸೇವನೆ ಪ್ರಕರಣಗಳನ್ನು ಮುಚ್ಚಿಹಾಕುವ ಪ್ರಯತ್ನ ಮಾಡುತ್ತಿದ್ದರು. ಇಲಾಖೆಯ ಈ ಕ್ರಮದಿಂದ ಇನ್ನು ಮುಂದೆ ಅಂತಹ ಅವಕಾಶ ಇರುವುದಿಲ್ಲ ಎಂದು ಇಲಾಖೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಕೇವಲ ಬೆಂಗಳೂರು ನಗರವೊಂದರಲ್ಲೇ 93 ಡ್ರಗ್ ಸೇವನೆ ಪ್ರಕರಣಗಳು 2016 ವರ್ಷದಲ್ಲಿ ವರದಿಯಾಗಿವೆ. ಬಂಧಿತರಿಂದ ಅಪಾಯಕಾರಿ ಮಾದಕ ಪದಾರ್ಥಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಂದು ನ್ಯೂಸ್ ಮಿನಿಟ್ ವರದಿಯಲ್ಲಿ ಉಲ್ಲೇಖಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications