ಮಾದಕ ವ್ಯಸನಿ ಕೊಟ್ಟ ಕ್ವಾಟ್ಲೆಗೆ ಪೊಲೀಸ್ ವಿರುದ್ಧವೇ ಎಫ್ಐಆರ್ ದಾಖಲು
ಬೆಂಗಳೂರು, ಜು. 30: ಮಾದಕ ವ್ಯಸನ ಆರೋಪದ ಮೇಲೆ ಕರೆ ತಂದಿದ್ದ ವ್ಯಕ್ತಿಯೊಬ್ಬನಿಗೆ ದಿನಪೂರ್ತಿ ಪೋಲೀಸರು ಕ್ವಾಟ್ಲೆ ಕೊಟ್ಟಿದ್ದರು. ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡ ವೇಳೆ ಆ ವ್ಯಕ್ತಿ ಕೊಟ್ಟಿರುವ ಕ್ವಾಟ್ಲೆಯಿಂದ ಪೊಲೀಸ್ ಪೇದೆಯ ವಿರುದ್ಧವೇ ಕೇಸು ದಾಖಲಾಗಿದೆ. ಕೊನೆಗೂ ಕೈಕೋಳ ಸಮೇತ ಎಸ್ಕೇಪ್ ಆಗಿದ್ದ ಮಾದಕ ವಸ್ತು ವ್ಯಸನಿಯನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
ಹೌದು. ಮಾದಕ ವ್ಯಸನ ಆರೋಪದ ಮೇಲೆ ಠಾಣೆಗೆ ಕರೆತಂದಿದ್ದ ಶಂಕಿತ ಆರೋಪಿ ವೈದ್ಯಕೀಯ ಪರೀಕ್ಷೆ ವೇಳೆ ಕೈಕೋಳ ಸಮೇತ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯ ಸುಳಿವು ಸಿಗದ ಕಾರಣ ಆತನನ್ನು ಕರೆದುಕೊಂಡು ಹೋಗಿದ್ದ ಮುಖ್ಯ ಪೇದೆಯ ವಿರುದ್ಧ ಪೊಲೀಸ್ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ದೂರು ನೀಡಿದ್ದಾರೆ. ಆರೋಪಿ ತಪ್ಪಿಸಿಕೊಳ್ಳಲು ಕಾರಣವಾದ ಮುಖ್ಯಪೇದೆ ಕೇಶವಮೂರ್ತಿ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ಮಾದಕ ವ್ಯಸನಿ ಎಂದು ಶಂಕಿಸಿ ಕಿರಣ್ ಕುಮಾರ್ ಎಂಬಾತನನ್ನು ಜೆ.ಸಿ,ನಗರ ಪೊಲೀಸರು ಕರೆತಂದಿದ್ದರು. ವಿಚಾರಣೆಯ ಬಳಿಕ ಬಂಧನ ಪ್ರಕ್ರಿಯೆ ಮುಗಿಸಲು ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದರು. ಮುಖ್ಯಪೇದೆ ಕೇಶವಮೂರ್ತಿ, ಆರೋಪಿ ಕಿರಣ್ ಕುಮಾರ್ ನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಶಿವಾಜಿನಗರ ಸಮೀಪ ಕೈಕೋಳ ಸಮೇತ ಕಿರಣ್ ಎಸ್ಕೇಪ್ ಆಗಿದ್ದಾನೆ. ಕೋಳ ಹಿಡಿದುಕೊಂಡಿದ್ದ ಮುಖ್ಯ ಪೇದೆ ಕೇಶವಮೂರ್ತಿಯನ್ನು ಹೊರಗೆ ತಳ್ಳಿ ಪರಾರಿಯಾಗಿದ್ದಾನೆ. ಜೆ.ಸಿ.ನಗರ ಪಿಎಸ್ಐ ರಘುಪತಿ ಕಮರ್ಷಿಯಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

Recommended Video
ಎಫ್ಐಆರ್ ದಾಖಲಾದ ಬೆನ್ನಲ್ಲೇ ಪೊಲೀಸರು ಕೈಕೋಳ ಸಮೇತ ಪರಾರಿಯಾಗಿದ್ದ ಕಿರಣ್ ಕುಮಾರ್ನನ್ನು ಜೆ.ಸಿ. ನಗರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯ ಪೇದೆ ಕೇಶವಮೂರ್ತಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಂತಾಗಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Jr NTR: ನಟ ಜ್ಯೂನಿಯರ್ ಎನ್ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್ ಧ್ವಂಸ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications