ಬೆಂಗಳೂರಿನಲ್ಲಿ ಆನ್ಲೈನ್ ಮೂಲಕ ಮಾದಕ ವಸ್ತು ಮಾರಾಟ
ಬೆಂಗಳೂರು, ಮಾರ್ಚ್ 9: 'ಬೆಂಗಳೂರಿನ ಶಾಲಾ ಕಾಲೇಜುಗಳ ಆವರಣದಲ್ಲಿ ಹಾಡು ಹಗಲಲ್ಲೇ ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದೆ' ಎಂದು ಸರ್ವಜ್ಞನಗರ ಶಾಸಕ ಕೆಜೆ ಜಾರ್ಜ್ ಬೇಸರ ಬೇಸರ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಈ ಬಗ್ಗೆ ಚರ್ಚಿಸಿದ ಶಾಸಕ ಕೆ.ಜೆ. ಜಾರ್ಜ ''ಸರ್ವಜ್ಞನಗರ ವಿಧಾನಸಭೆ ವ್ಯಾಪ್ತಿಯ ಶಾಲಾ ಕಾಲೇಜುಗಳ ಆವರಣದಲ್ಲಿ ಹಾಡು ಹಗಲಲ್ಲೇ ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದೆ. ಕೆಲವು ಪೊಲೀಸರು ಈ ದಂಧೆಯೊಂದಿಗೆ ಕೈ ಜೋಡಿಸಿದ್ದಾರೆ. ಇಂಟರ್ನೆಟ್ ಮೂಲಕವೂ ಮಾದಕ ವಸ್ತುಗಳ ಆನ್ ಲೈನ್ ಮಾರಾಟ ನಡೆಯುತ್ತಿದೆ. ಕೆಲವು ವ್ಯಕ್ತಿಗಳು ಮಾದಕ ವಸ್ತುಗಳ ಮಾರಾಟವನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಾರೆ'' ಎಂದು ಅಳಲು ತೋಡಿಕೊಂಡಿದ್ದಾರೆ.
ಇದಕ್ಕೂ ಮುಂಚೆ ಮಾತನಾಡಿದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಪ್ರಿಯಾಂಕ ಖರ್ಗೆ ಅವರು ''ಜನವಸತಿ ಪ್ರದೇಶಗಳು, ಶಾಲಾಕಾಲೇಜು ಆವರಣ, ಮಂದಿರದ ಸಮೀಪದಲ್ಲೂ ಬಾರ್ ಅಂಡ್ ರೆಸ್ಟೋರೆಂಟ್ ಗಳಿಗೆ ಲೈಸೆನ್ಸ್ ನೀಡಲಾಗಿದೆ'' ಎಂದು ಅಬಕಾರಿ ಇಲಾಖೆಯ ವಿರುದ್ಧ ಆರೋಪಿಸಿದರು.

'ಕಲಬುರಗಿ ನಗರಕ್ಕೆ 111 ಬಾರ್ ಲೈಸೆನ್ಸ್ ನೀಡಲಾಗಿದೆ ಕಲ್ಬುರ್ಗಿ ನಗರದಲ್ಲಿ ಕಿರಾಣಿ ಅಂಗಡಿಗಳಲ್ಲೂ ಮದ್ಯಮಾರಾಟವಾಗುತ್ತಿದೆ' ಎಂದು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಉತ್ತರಿಸಿದ ಅಬಕಾರಿ ಸಚಿವ ನಾಗೇಶ್ 'ನಿಯಮ ಉಲ್ಲಂಘಿಸಿ ಮದ್ಯಮಾರಾಟದ ಬಗ್ಗೆ ಮಾಹಿತಿ ಇಲ್ಲ' ಎಂದರು.
ಮಧ್ಯಪ್ರವೇಶಿಸಿದ ಸ್ಪೀಕರ್ ಕಾಗೇರಿ, 'ಇಡೀ ರಾಜ್ಯಾದ್ಯಂತ ಈ ಸಮಸ್ಯೆ ಇದೆ, ನೀವು ಅಧಿಕಾರಿಗಳಿಗೆ ಟಾರ್ಗೆಟ್ ನೀಡುತ್ತಿರುವುದೇ ಇದಕ್ಕೆಲ್ಲ ಕಾರಣ. ಇದನ್ನು ನಿಯಂತ್ರಿಸದೇ ಹೋದರೆ ತೊಂದರೆಯಾಗುತ್ತದೆ' ಎಂದು ಸೂಚಿಸಿದರು.
ಅಬಕಾರಿ ಸಚಿವರ ಸಹಾಯಕ್ಕೆ ಧಾವಿಸಿದ ಗೃಹ ಸಚಿವ ಬೊಮ್ಮಾಯಿ ಅನಧೀಕೃತವಾಗಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ದ ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications