ಡ್ರಗ್ಸ್ ಜಾಲದ ಹಿಂದಿನ ರಾಜಕಾರಣಿ ಯಾರು? ನಟಿ ರಮ್ಯಾ ಪ್ರಶ್ನೆಗೆ ಪೊಲೀಸರು ಉತ್ತರಿಸುವರೇ?
ಬೆಂಗಳೂರು, ಸೆ 9: ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿರುವ ಡ್ರಗ್ಸ್ ಪ್ರಕರಣ, ಇನ್ನೋರ್ವ ನಟಿ ಸಂಜನಾ ಗಲ್ರಾನಿಯ ಬಂಧನವಾಗುವ ಮೂಲಕ, ಮತ್ತೊಂದು ಆಯಾಮವನ್ನು ಪಡೆದುಕೊಂಡಿದೆ.
Recommended Video
ಈಗಾಗಲೇ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿಯ ಬಂಧನವಾಗಿದೆ. ಈ ನಡುವೆ, ನಟಿ ಮತ್ತು ಮಾಜಿ ಎಐಸಿಸಿ ಸಾಮಾಜಿಕ ತಾಣದ ಮುಖ್ಯಸ್ಥೆ ರಮ್ಯಾ ಆಲಿಯಾಸ್ ದಿವ್ಯ ಸ್ಪಂದನ ಈ ವಿಚಾರದಲ್ಲಿ ಟ್ವೀಟ್ ಒಂದನ್ನು ಮಾಡಿದ್ದಾರೆ.
ಇಂಗ್ಲಿಷ್ ಪತ್ರಿಕೆಯ ವರದಿಯೊಂದನ್ನು ಉಲ್ಲೇಖಿಸುತ್ತಾ, ಮರಿಜುವಾನಾ (ಮಾದಕ ಪದಾರ್ಥ) ಹೊಂದಿದ್ದ ಟ್ರಕ್ ಯಾವ ರಾಜಕಾರಣಿಯದ್ದು ಎಂದು ಬೆಂಗಳೂರು ಪೊಲೀಸ್ ಹ್ಯಾಂಡಲ್ ಅನ್ನು ಟ್ಯಾಗ್ ಮಾಡಿ ರಮ್ಯಾ ಟ್ವೀಟ್ ಮಾಡಿದ್ದಾರೆ.
ಈ ನಡುವೆ, ನಿನ್ನೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾದ ಸಂಜನಾ ವಿಚಾರಣೆಯ ವೇಳೆ, ಹಲವು ಸೆಲೆಬ್ರಿಟಿಗಳ ಹೆಸರನ್ನು ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ನಟಿ ರಮ್ಯಾ ಮಾಡಿರುವ ಟ್ವೀಟ್ ಏನು?

ಸಿಸಿಬಿ ಪೊಲೀಸರ ಭರ್ಜರಿ ಬೇಟೆ
ಆಗಸ್ಟ್ ಕೊನೆಯ ವಾರದಲ್ಲಿ ಸಿಸಿಬಿ ಟ್ರಕ್ ವೊಂದನ್ನು ವಶ ಪಡಿಸಿಕೊಂಡಿತ್ತು. ಅದರಲ್ಲಿ ಒಂದು ಕೋಟಿ ಮೌಲ್ಯದ 204ಕೆಜಿ ಮರಿಜುವಾನಾ ಡ್ರಗ್ಸ್ ಇತ್ತು. ಬೆಂಗಳೂರು ಹೊರ ವಲಯದ ದೇವನಹಳ್ಳಿಯಲ್ಲಿ ಈ ಘಟನೆ ನಡೆದಿತ್ತು ಮತ್ತು ಈ ಸಂಬಂಧ ಮೂವರನ್ನು ಪೊಲೀಸರು ವಶ ಪಡಿಸಿಕೊಂಡಿದ್ದರು.

ರಮ್ಯಾ ಟ್ವೀಟ್
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಿಂದ, ಮರಿಜುವಾನಾ ತುಂಬಿಕೊಂಡು ಬಂದಿದ್ದ ಟ್ರಕ್ ಇದಾಗಿತ್ತು ಮತ್ತು ಇದು ಬೇನಾಮಿ ಹೆಸರನಲ್ಲಿರುವ ಪ್ರಮುಖ ರಾಜಕಾರಣಿಯದ್ದು ಎಂದು ಆಂಗ್ಲ ಪತ್ರಿಕೆಯ ಲೇಖನದಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನು ಫಾರ್ವರ್ಡ್ ಮಾಡಿ ರಮ್ಯಾ ಟ್ವೀಟ್ ಮಾಡಿದ್ದಾರೆ.

ಯಾಕೆ ಲೇಖನದಲ್ಲಿ ಆ ರಾಜಕಾರಣಿಯ ಹೆಸರನ್ನು ಉಲ್ಲೇಖಿಸಿಲ್ಲ
ವಶ ಪಡಿಸಿಕೊಳ್ಳಲಾಗಿರುವ ಟ್ರಕ್ ಪ್ರಮುಖ ರಾಜಕಾರಣಿಯವರದ್ದು ಎಂದು ಬರೆಯಲಾಗಿದೆ, ಯಾಕೆ ಲೇಖನದಲ್ಲಿ ಆ ರಾಜಕಾರಣಿಯ ಹೆಸರನ್ನು ಉಲ್ಲೇಖಿಸಿಲ್ಲ. ಯಾರು ಆ ರಾಜಕಾರಣಿ, ಆತನನ್ನು ಬಂಧಿಸಲಾಯಿತೇ ಎಂದು ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿ ರಮ್ಯಾ ಟ್ವೀಟ್ ಮಾಡಿದ್ದಾರೆ.

ಸ್ಯಾಂಡಲ್ ವುಡ್
ಸ್ಯಾಂಡಲ್ ವುಡ್ ನಲ್ಲಿನ ಡ್ರಗ್ಸ್ ಜಾಲವನ್ನು ಬಯಲುಗೆಳೆಯಲು ಆ ರಾಜಕಾರಣಿ ಪ್ರಯತ್ನಿಸುತ್ತಿದ್ದಾರೆ. ಅದರಲ್ಲಿ ಹಲವರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ಪ್ರಮುಖ ನಟರು ನಿಧನ ಹೊಂದಿದ ನಂತರ ಸ್ಯಾಂಡಲ್ ವುಡ್ ಅನಾಥವಾಗಿದೆ. ಹಾಗಾಗಿ, ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಅವರು ಬಾಸ್ ಆಗಲು ಹೊರಟಿದ್ದಾರೆ ಎಂದು ಲೇಖನದಲ್ಲಿ ಬರೆಯಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications