12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ
ಮೈಸೂರಲ್ಲಿ ಈ ಹಿಂದೆ ಡ್ರಗ್ ಫ್ಯಾಕ್ಟರಿಗಳು ಪತ್ತೆಯಾಗಿದ್ದು ಭಾರಿ ಸದ್ದು ಮಾಡಿತ್ತು. ರಾಜ್ಯ ಪೊಲೀಸ್ ಇಲಾಖೆ ಕಾರ್ಯವೈಖರಿ ಮೇಲೆ ಅನುಮಾನ ಹುಟ್ಟುವಂತೆ ಮಾಡಿತ್ತು. ಇದೀಗ ಮತ್ತೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದಾಸನಪುರ ಗ್ರಾಮದ ತೋಟದ ಮನೆಯೊಂದರಲ್ಲಿ ಬೃಹತ್ ಡ್ರಗ್ಸ್ ದಾಸ್ತಾನು ಪತ್ತೆಯಾಗಿದೆ. ಬರೋಬ್ಬರಿ 12 ಕೋಟಿ ರೂ. ಮೌಲ್ಯದ ಮಾಧಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜ್ಯದಲ್ಲಿ ಮೇಲಿಂದ ಮೇಲೆ ಡ್ರಗ್ಸ್ ಪ್ರಕರಣಗಳು ವರದಿ ಆಗುತ್ತಿದ್ದು. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ ಅವರು ಕಲವು ತಿಂಗಳ ಅಂತರದಲ್ಲಿ ನಿರಂತರವಾಗಿ ರಾಜ್ಯದಲ್ಲಿ ಡ್ರಗ್ ಆಗುತ್ತಿರುವುದನ್ನು ಖಂಡಿಸಿದೆ.'ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಗಂಧದ ನಾಡು ಕರುನಾಡು ಗಾಂಜಾ ಬೀಡಾಗಿದೆ.!' ಎಂದು ಅವರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಇತ್ತೀಚೆಗೆ ವರದಿಯಾದ ಡ್ರಗ್ ಪ್ರಕರಣಗಳಿವು!
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ ತಿಂಗಳು ಫೆಬ್ರವರಿ 10ರಂದು 2 ಕೋಟಿ
ರೂಪಾಯಿ ಡ್ರಗ್ಸ್ ವಶ, ಫೆಬ್ರವರಿ 18ರಂದು 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ, ಮತ್ತೆ ಫೆಬ್ರವರಿ 20ರಂದು ಪುತ್ತೂರಿನಲ್ಲಿ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು. ️ಫೆಬ್ರವರಿ 25ರಂದು ಮೈಸೂರಿನಲ್ಲಿ
ಡ್ರಗ್ಸ್ ಫ್ಯಾಕ್ಟರಿ ಪತ್ತೆ ಆಗಿತ್ತು. ಅದಾದ ಬಳಿಕ ತನಿಖಾಧಿಕಾರಿಗಳ ತಂಡ ದಾಳಿ ನಡೆಸಿ ಫೆಬ್ರವರಿ 27 5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿತ್ತು. ಇದೀಗ ️ಮಾರ್ಚ್ 28ರಂದು ಹುಣಸೂರಿನಲ್ಲಿ 12 ಕೋಟಿ ಮೌಲ್ಯದ ಒಟ್ಟು ಸುಮಾರು 48 ಕೆಜಿ ಡ್ರಗ್ಸ್ ಅನ್ನು ವಶಕ್ಕೆ ಪಡೆಯಲಾಗಿದೆ.
ನಾಡಿನಲ್ಲೆಲ್ಲ ಗಾಂಜಾ ಘಾಟು
ಸಿದ್ದರಾಮಯ್ಯ ಅವರ ಸರ್ಕಾರದ ತುಘಲಕ್ ಆಡಳಿತದಿಂದ ನಾಡೆಲ್ಲಾ ಗಾಂಜಾ ಘಾಟು ಆವರಿಸಿದೆ.! ಯುವಕರ ಭವಿಷ್ಯ ನಶೆಯಲ್ಲಿ ತೇಲಿ ಹೋಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳ ಸೇರಿದ್ದರೂ "ಗೊತ್ತಿಲ್ಲ" ಗೃಹ ಸಚಿವ ಜಿ. ಪರಮೇಶ್ವರ ಅವರು ಕಣ್ಮರೆಯಾಗಿದ್ದಾರೆ. ಡ್ರಗ್ಸ್ ಮಾಫಿಯಾಗೆ ಕಾಂಗ್ರೆಸ್ ಸರ್ಕಾರವೇ ರಕ್ಷಣೆ ಕೊಡುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ಅವರು ರಾಜ್ಯ ಸರ್ಕಾರ, ಗೃಹ ಇಲಾಖೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಹುಣಸೂರು ಪ್ರಕರಣಕ್ಕೆ ಮುಂಬೈ ನಂಟು
ಈ ಹಿಂದೆ ಮುಂಬೈ ಪೊಲೀಸರು ಪ್ರಕರಣವೊಂದರ ಜಾಡು ಹಿಡಿದು ಮೈಸೂರಿಗೆ ಬಂದಾಗ ಅಲ್ಲಿ ಡ್ರಗ್ಸ್ ಫ್ಯಾಕ್ಟರಿ ಇರುವುದನ್ನು ಪತ್ತೆ ಮಾಡಿದ್ದರು. ಇದರಿಂದ ರಾಜ್ಯ ಪೊಲೀಸ್ ಇಲಾಖೆಗೆ ತೀವ್ರ ಹಿನ್ನಡೆ ಎಂದು ವಿಶ್ಲೇಷಿಸಲಾಗಿತ್ತು. ಇದೀಗ ಹುಣಸೂರಿನಲ್ಲಿ ಸಿಕ್ಕ 12ಕೋಟಿ ರೂ. ಮೌಲ್ಯದ ಡ್ರಗ್ ಕೇಸಿಗೂ ಮುಂಬೈಗೂ ನಂಟಿದೆ ಎಂಬುದು ಗೊತ್ತಾಗಿದೆ. ಮುಂಬೈನಿಂದ ಡ್ರಗ್ ತಂದು ಮೈಸೂರು ವ್ಯಾಪ್ತಿಯಲ್ಲಿ ಹಂಚುತ್ತಿದ್ದರು ಎಂಬುದು ಗೊತ್ತಾಗಿದೆ.
ತೋಟದ ಮನೆಯನ್ನು ವಾರದ ಹಿಂದಷ್ಟೇ ಬಾಡಿಗೆ ಪಡೆದ ಡ್ರಗ್ ಪೆಡ್ಲರ್ಗಳು ಕ ಮಾದಕ ವಸ್ತು ಸೇರಿದಂತೆ ಹಲವು ಕಚ್ಚಾ ಪದಾರ್ಥ್ ಇಲ್ಲಿಗೆ ತರುತ್ತಿದ್ದರು. ಆನ್ಲೈನ್ ಮೂಲಕ ಕೆಲವು ರಸಾಯನಿಕಗಳನ್ನು ಇಲ್ಲಿಗೆ ತರಿಸಿಕೊಳ್ಳಲಾಗಿತ್ತು. ಇಲ್ಲಿಯೇ ಉತ್ಪಾದನೆ ಮಾಡುವ ಪ್ಲಾನ್ ಹಾಕಿಕೊಂಡಿರಬಹುದೆಂದು ಹೇಳಲಾಗುತ್ತಿದೆ. ಸದ್ಯ ಈ ಜಾಲದಲ್ಲಿರುವವರನ್ನು ಪತ್ತೆ ಮಾಡಲು ಮೂರು ತಂಡಗಳಾಗಿ ರಚಿಸಿ ಮುಂಬೈ ಸೇರಿದಂತೆ ಇತರ ಕಡೆಗೆ ಕಾರ್ಯಾಚರಣೆ ಮಾಡಲಾಗುತ್ತಿದೆ.
-
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ













Click it and Unblock the Notifications