ಆಂಬ್ಯುಲೆನ್ಸ್, ಶಾಲಾ ವಾಹನಗಳಲ್ಲಿ ಹೆಚ್ಚಾದ ಕುಡುಕ ಚಾಲಕರ ಸಂಖ್ಯೆ!
ಬೆಂಗಳೂರು, ಫೆಬ್ರವರಿ 24 : ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುವ ಶಾಲಾ ವಾಹನ, ಆಂಬ್ಯುಲೆನ್ಸ್ ಚಾಲಕರ ಸಂಖ್ಯೆ ನಗರದಲ್ಲಿ ಹೆಚ್ಚಾಗಿದೆ. ಅಂತಹ ಚಾಲಕರು ತಮ್ಮ ಜೀವವನ್ನು ತೊಂದರೆಗೆ ಸಿಲಿಸುವುದರ ಜತೆಗೆ ಮಕ್ಕಳು ಹಾಗೂ ರೋಗಿಗಳ ಜೀವವನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ.
ಸಂಚಾರ ಪೊಲೀಸರು ನೀಡಿದ ಅಂಕಿ ಅಂಶಗಳ ಪ್ರಕಾರ, ಕುಡುದು ವಾಹನ ಚಲಾಯಿಸುವವರ ಸಂಖ್ಯೆ 2015 ರಲ್ಲಿ 12 ಪ್ರಕರಣಗಳು, 2016 ರಲ್ಲಿ 17 ಪ್ರಕಣಗಳು ದಾಖಲಾಗಿದ್ದರೆ 2017 ರಲ್ಲಿ ಬರೋಬ್ಬರಿ 55 ಪ್ರಕರಣಗಳು ದಾಖಲಾಗಿವೆ.
2018 ಪ್ರಾರಂಭವಾಗಿ ಇನ್ನು ಎರಡು ತಿಂಗಳೂ ಪೂರ್ಣವಾಗಿಲ್ಲ ಈ ಅವಧಿಯಲ್ಲಿ ಈಗಾಗಲೇ 6 ಪ್ರಕರಣಗಳು ದಾಖಲಾಗಿವೆ. ಈ ಕುರಿತು ಮುಂಜಾಗೃತೆ ವಹಿಸುವ ದೃಷ್ಟಿಯಿಂದ ಎಲ್ಲಾ ಶಾಲೆ ಹಾಗೂ ಆಸ್ಪತ್ರೆಗೆ ಪತ್ರವೊಂದನ್ನು ಬರೆದಿದ್ದು ನಗರದಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಪರೀಕ್ಷಿಸಲು ಪೊಲೀಸರಿಗೆ ಸಾಧ್ಯವಿಲ್ಲ ಹಾಗಾಗಿ ಆಸ್ಪತ್ರೆಯಿಂದ ಹೊರಡುವ ಆಂಬುಲೆನ್ಸ್ ಹಾಗೂ ಶಾಲಾ ವಾಹನಗಳ ಚಾಲಕರನ್ನು ಪರೀಕ್ಷಿಸಿಯೇ ಕಳುಹಿಸಬೇಕು ಎಂದು ತಿಳಿಸಲಾಗಿದೆ.

ಚಾಲಕರನ್ನು ಕೆಲಸಕ್ಕೆ ತೆಗೆದುಕೊಳ್ಳುವ ಮೊದಲು ಅವರ ಹಿನ್ನೆಲೆ ಯನ್ನು ತಿಳಿದುಕೊಳ್ಳಬೇಕು. ಶಾಲಾ ವಾಹನಗಳನ್ನು ತಡೆದು ಮಕ್ಕಳ ಮುಂದೆ ಅವರನ್ನು ಪರಿಶೀಲಿಸುವುದು ಕಷ್ಟ ಅದಷ್ಟೇ ಅಲ್ಲದೆ ಆಂಬ್ಯುಲೆನ್ಸ್ ಗಳನ್ನು ನಿಲ್ಲಿಸಿ ಚಾಲಕರ ಪರೀಕ್ಷೆ ಮಾಡುವುದರಿಂದ ರೋಗಿಗಳಿಗೆ ತೊಂದರೆಯಾಗಲಿದೆ.
| ಶಾಲಾ ಬಸ್ ಚಾಲಕರು | ಆಂಬ್ಯುಲೆನ್ಸ್ ಚಾಲಕರು | ||
| ವರ್ಷ | ಪ್ರಕರಣಗಳು | ವರ್ಷ | ಪ್ರಕರಣಗಳು |
| 2015 | 10 | 2015 | 2 |
| 2016 | 14 | 2016 | 3 |
| 2017 | 31 | 2017 | 24 |
| 2018 ಫೆಬ್ರವರಿ (3ನೇ ವಾರ) | 3 | 2018 ಫೆಬ್ರವರಿ (3ನೇ ವಾರ) | 3 |
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications