16 ಮಂದಿಗೆ ಡಿಎಸ್ ಮ್ಯಾಕ್ಸ್ ಕಲಾಶ್ರೀ ಪ್ರಶಸ್ತಿ ಪ್ರದಾನ
ಬೆಂಗಳೂರು, ಜೂ.20: ದೇವರು, ಜ್ಯೋತಿಷಿಗಳಿಂದ ದೇಶವನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ. ದುಡಿಯುವ ಕೈಗಳಿಗೆ ಕೆಲಸ ನೀಡಿದಾಗ ದೇಶದ ಪ್ರಗತಿಯಾಗುತ್ತದೆ ಎಂದು ಚಿತ್ರದುರ್ಗದ ಮುರುಘ ಮಠದ ಡಾ. ಶಿವಮೂರ್ತಿ ಮುರುಘ ಶರಣರು ಅಭಿಪ್ರಾಯ ಪಟ್ಟಿದ್ದಾರೆ.
ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಗುರುವಾರ 'ಡಿಎಸ್-ಮ್ಯಾಕ್ಸ್' ಕಟ್ಟಡ ನಿರ್ಮಾಣ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ'ಡಿಎಸ್ ಮ್ಯಾಕ್ಸ್ ಕಲಾಶ್ರೀ' ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಇಂದು ಯುವಕರಿಗೆ ಕೆಲಸ ನೀಡಿದರೆ ಅವರು ಸಮಾಜಘಾತುಕ ಶಕ್ತಿಗಳಾಗದೇ ದೇಶದ ಉದ್ದಾರಕ್ಕೆ ಶ್ರಮಿಸುತ್ತಾರೆ. ನಮ್ಮ ವಿದ್ಯೆ, ಶಾಸ್ತ್ರ, ದೇಶ ಅಭಿವೃದ್ಧಿಗೆ ಬಳಕೆಯಾಗಬೇಕು. ಬಡತನ ನಿರ್ಮೂಲನೆಗೆ ಪ್ರಬಲ ವ್ಯಕ್ತಿಗಳು ನೂರಾರು ಯುವಕರಿಗೆ ಉದ್ಯೋಗ ನೀಡಿ ದೇಶದ ಅಭಿವೃದ್ಧಿಗೆ ಸಹಕರಿಸುತ್ತಿದ್ದಾರೆ. ದುಡಿಯುವ ಕೈಗಳಿಗೆ ಉದ್ಯೋಗ ನೀಡುತ್ತಿರುವ ಇಂತಹ ಸಂಘ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಚಲನ ಚಿತ್ರ ರಂಗದಲ್ಲಿ ಸಾಧನೆ ಮಾಡಿದ 16 ಮಂದಿ ಸಾಧಕರಿಗೆ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಎರಡನೇ ಬಾರಿ ಸಿಸಿಎಲ್ ಕ್ರಿಕೆಟ್ ಪ್ರಶಸ್ತಿ ಪಡೆದ ಕರ್ನಾಟಕ ಬುಲ್ಡೋಜರ್ಸ್ ತಂಡದ ಸದಸ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವ ಅಂಬರೀಷ್, ಶಾಸಕರಾದ ಸಿ.ಟಿ ರವಿ, ಅಶೋಕ್ ಖೇಣಿ, ನಟರಾದ ಸುದೀಪ್, ದರ್ಶನ್, ಮಾಜಿ ಸಚಿವ ರಾಜೂ ಗೌಡ, ಮಾಧ್ಯಮ ಅಕಾಡೆಮಿ ಅಧ್ಯಕ್ಷ ಪೊನ್ನಪ್ಪ, ತೆಲುಗು ಚಿತ್ರ ನಿರ್ದೇಶಕ ಕೃಷ್ಣಾ ರೆಡ್ಡಿ, ಡಿಎಸ್ ಮ್ಯಾಕ್ಸ್ ವ್ಯವಸ್ಥಾಪಕ ನಿರ್ದೇಶಕ ಸತೀಶ್, ಕಾರ್ಯನಿರ್ವಾಹನ ನಿರ್ದೆಶಕ ದಯಾನಂದ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಡಿಎಸ್ ಮ್ಯಾಕ್ಸ್ ಕಲಾಶ್ರೀ ಪ್ರಶಸ್ತಿ-2014
ನಟ ನಿರ್ದೇಶಕ ಶಿವರಾಂ, ನಟರಾದ ಸದಾಶಿವ್ ಬ್ರಹ್ಮಾವರ, ನಟಿ ಶಾಂತಮ್ಮ ಅವರಿಗೆ ಕಲಾಶ್ರೀ ಪ್ರಶಸ್ತಿ ನೀಡಲಾಯಿತು.

ಡಿಎಸ್ ಮ್ಯಾಕ್ಸ್ ಕಲಾಶ್ರೀ ಪ್ರಶಸ್ತಿ-2014
ಆರ್.ಟಿ ರಮಾ, ಶ್ರೀನಾಥ್, ಸುಂದರ್ ರಾಜ್ ಅವರಿಗೆ ಅವರಿಗೆ ಕಲಾಶ್ರೀ ಪ್ರಶಸ್ತಿ ನೀಡಲಾಯಿತು.

ಡಿಎಸ್ ಮ್ಯಾಕ್ಸ್ ಕಲಾಶ್ರೀ ಪ್ರಶಸ್ತಿ-2014
ನಟಿಯರಾದ ಚಿತ್ರ ಶೆಣೈ,ಸುಧಾರಾಣಿ, ಪ್ರಮೀಳಾ ಜೋಷಾಯ್ ಅವರಿಗೆ ಕಲಾಶ್ರೀ ಪ್ರಶಸ್ತಿ ನೀಡಲಾಯಿತು.

ಡಿಎಸ್ ಮ್ಯಾಕ್ಸ್ ಕಲಾಶ್ರೀ ಪ್ರಶಸ್ತಿ-2014
ಹಾಸ್ಯ ನಟರಾದ ಟೆನ್ನೀಸ್ ಕೃಷ್ಣಾ, ಮಂಡ್ಯ ರಮೇಶ್, ಸಂಕೇತ್ ಕಾಶಿ ಅವರಿಗೆ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಡಿಎಸ್ ಮ್ಯಾಕ್ಸ್ ಕಲಾಶ್ರೀ ಪ್ರಶಸ್ತಿ-2014
ಸತ್ಯಜೀತ್, ಕೆ. ಕಲ್ಯಾಣ್, ದತ್ತಣ್ಣ, ಮಾಸ್ತರ್ ಆನಂದ್ ಅವರಿಗೆ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಿಸಿಎಲ್ ಸನ್ಮಾನ
ಕರ್ನಾಟಕ ಬುಲ್ಡೋಜರ್ಸ್ ತಂಡದ ಕಪ್ತಾನ ಸುದೀಪ್ ಅವರಿಗೆ ಚಿನ್ನದ ಬಣ್ಣವಿರುವ ಟ್ರೋಫಿ ನೀಡಿ ಸನ್ಮಾನಿಸಲಾಯಿತು.

ಸಿಸಿಎಲ್ ಸನ್ಮಾನ
ಕರ್ನಾಟಕ ಬುಲ್ಡೋಜರ್ಸ್ ತಂಡದ ಸುದೀಪ್ ಮತ್ತು ದರ್ಶನ್ ಅವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications