ಬೆಂಗಳೂರು: ಈ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧ
Recommended Video
ಬೆಂಗಳೂರು, ಸೆ 7: ನಗರದ ಪೂರ್ವ ಕಮಿಷನರೇಟ್ ವ್ಯಾಪ್ತಿಯ, ಕೆಲವೊಂದು ಪೊಲೀಸ್ ಠಾಣಾ ಸರಹದ್ದಿನಲ್ಲಿ, ಭಾನುವಾರ (ಸೆ 8) ಮದ್ಯ ಮಾರಾಟವನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯ, ಶಿವಾಜಿನಗರದ ಸೆಂಟ್ ಮೇರಿ ಚರ್ಚ್ನಲ್ಲಿ, ಸೆಂಟ್ ಮೇರಿ ಆರೋಗ್ಯಮಾತೆಯ ವಾರ್ಷಿಕ ರಥೋತ್ಸವ ಕಾರ್ಯಕ್ರಮ ಭಾನುವಾರ ನಡೆಯಲಿದೆ.
ಈ ಕಾರ್ಯಕ್ರಮವು ಬೆಳಿಗ್ಗೆ 06.30 ಗಂಟೆಗೆ ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ, 11.30 ಗಂಟೆಯವರೆಗೆ ಚರ್ಚ್ನಲ್ಲಿ, ಸಾಮೂಹಿಕ ಪ್ರಾರ್ಥನೆ ಹಾಗೂ ಸೇವೆಗಳು ನಡೆಯುತ್ತವೆ.

ಮಧ್ಯಾಹ್ನದ ನಂತರ ಸೆಂಟ್ ಮೇರಿ ಮಾತೆಯ ಬೃಹತ್ ತೇರಿನ ಮೆರವಣಿಗೆಯು, ಚರ್ಚ್ನಿಂದ ಹೊರಟು, ಎಂ.ಕೆ.ಸ್ಟ್ರೀಟ್, ಶಿವಾಜಿ ರಸ್ತೆ, ಬ್ರಾಡ್ವೇ ರಸ್ತೆ, ರಸೆಲ್ ಮಾರ್ಕೆಟ್ ಮತ್ತು ನರೋನ ರಸ್ತೆ ಮಾರ್ಗವಾಗಿ ಸಂಚರಿಸಿ ಚರ್ಚ್ಗೆ ವಾಪಸ್ ಬಂದು ಸೇರುವ ಕಾರ್ಯಕ್ರಮವಿರುತ್ತದೆ.
ಈ ಉತ್ಸವದಲ್ಲಿ, ನೆರೆಹೊರೆಯ ಪ್ರದೇಶಗಳಿಂದ ಸುಮಾರು 75000-100000 ಭಕ್ತಾದಿಗಳು ಸೇರುವ ಸಾಧ್ಯತೆಯಿದೆ. ಈ ಸಂಬಂಧ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಶಾಂತಿಯನ್ನು ಕಾಪಾಡುವ ದೃಷ್ಠಿಯಿಂದ ಶಿವಾಜಿನಗರ, ಕಮರ್ಷಿಯಲ್ ಸ್ಟ್ರೀಟ್ ಮತ್ತು ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸೆ8ರ ಬೆಳಿಗ್ಗೆ 06 ಗಂಟೆಯಿಂದ ರಾತ್ರಿ 11ಗಂಟೆಯವರೆಗೆ, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಈ ಸಮಯದಲ್ಲಿ ಕಿಡಿಗೇಡಿಗಳು, ಮದ್ಯಪಾನದ ಅಮಲಿನಲ್ಲಿ, ದುಷ್ಕೃತ್ಯವನ್ನು ನಡೆಸಿ, ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಹಾಳು ಮಾಡುವ ಸಂಭವವಿರುವುದಾಗಿ ಗುಪ್ತವಾರ್ತಾ ವಿಭಾಗದ ಮಾಹಿತಿಯಿಂದ ತಿಳಿದುಬಂದಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ಹೇಳಲಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications