ಕಸದ ಸಮಸ್ಯೆಗೆ ಸರ್ಕಾರದ ನಿರ್ಲಕ್ಷ್ಯ ಕಾರಣ:ಮೇಯರ್
ಬೆಂಗಳೂರು, ಜೂ.9: ಬಿಬಿಎಂಪಿ ಮನವಿ ಮಾಡಿದಾಗ ಸರ್ಕಾರ ಪರ್ಯಾಯ ಜಾಗ ಕೊಡಲು ನಿರ್ಲಕ್ಷ್ಯವಹಿಸಿದ್ದರಿಂದ ಮಂಡೂರು ಕಸದ ಸಮಸ್ಯೆ ಉಲ್ಭಣವಾಗಿದೆ ಎಂದು ಬೆಂಗಳೂರು ಮೇಯರ್ ಬಿ.ಎಸ್.ಸತ್ಯನಾರಾಯಣ ಹೇಳಿದ್ದಾರೆ.
ನಗರದ ಭಾರತೀಯ ವಿದ್ಯಾ ಭವನದಲ್ಲಿ ಬಿ ಪ್ಯಾಕ್ ಸಂಸ್ಥೆ ಭಾನುವಾರ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ಕಸ ಸಮಸ್ಯೆ ನಿವಾರಣೆಗೆ 100 ಎಕರೆ ಜಾಗ ನೀಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ, ಸರ್ಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಸಮಸ್ಯೆ ಉಂಟಾಗಿದೆ ಎಂದರು.
ಸರ್ಕಾರ ಈಗ ನಾಲ್ಕು ಕಡೆ ಘಟಕೆ ತೆರೆಯಲು ಅನುಮತಿ ನೀಡಿದೆ.ಈ ನಾಲ್ಕು ಯೋಜನೆಗಳು ಆರಂಭವಾಗಲು ಕನಿಷ್ಠ ಆರು ತಿಂಗಳ ಅಗತ್ಯವಿದೆ. ಅಲ್ಲಿಯವರೆಗೂ ಮಂಡೂರಿಗೆ ಕಸ ಸಾಗಣೆ ಮಾಡುವುದನ್ನು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.[ಸಚಿವರ ಮನೆ ಸುತ್ತ ಕಸ ಎತ್ತಿ ಲೋಕಸತ್ತಾ ಪ್ರತಿಭಟನೆ]

ಕಲ್ಯಾಣ ನಗರ ಜನತೆಯ ಕಸ ವಿಲೇವಾರಿ ಕ್ರಮವನ್ನು ಹೊಗಳಿದ ಮೇಯರ್ ಕಸ ವಿಲೇವಾರಿ ಕೆಲಸ ಬಿಬಿಎಂಪಿಯದ್ದು ಎಂಬ ಭಾವನೆ ಜನರಲ್ಲಿ ಮೂಡಿದೆ. ಹಸಿ ಹಾಗೂ ಒಣ ತ್ಯಾಜ್ಯ ಮೂಲದಲ್ಲಿಯೇ ವಿಂಗಡಿಸಿ ನೀಡುವಂತೆ ಮನವಿ ಮಾಡಿದರೂ ಜನ ಸ್ಪಂದಿಸುತ್ತಿಲ್ಲ. ಜನರಲ್ಲೇ ಕಸದ ಸಮಸ್ಯೆ ಬಗ್ಗೆ ಅರಿವು ಮೂಡಬೇಕಿದೆ ಎಂದರು.[ಬೆಂಗಳೂರಿನ ಸೂತ್ರ ಹಿಡಿದವರು ಮಂಡೂರಲ್ಲಿ ವಾಸ್ತವ್ಯ ಹೂಡಲಿ]
ಕಸದ ಸಮಸ್ಯೆ ನಿವಾರಣೆ ಬಗ್ಗೆ ಬೇಜವಾಬ್ದಾರಿ ವಹಿಸಿದ ಬಿಬಿಎಂಪಿ ಅಧಿಕಾರಿಗಳು, ಆರೋಗ್ಯಾಧಿಕಾರಿ ಹಾಗೂ ಪೌರಕಾರ್ಮಿಕರನ್ನು ತರಾಟೆಗೆ ತೆಗೆದುಕೊಳ್ಳುವಂತಿಲ್ಲ. ತರಾಟೆಗೆ ತೆಗೆದುಕೊಂಡರೆ ಜಾತಿ ವಿಷಯ ಪ್ರಸ್ತಾಪಿಸಿ ಹೆದರಿಸುತ್ತಾರೆ. ಇವರ ನಡುವೆ ಕೆಲಸ ಮಾಡುವುದು ಹೇಗೆ ಎಂದು ಮೇಯರ್ ಸತ್ಯನಾರಾಯಣ ಪ್ರಶ್ನಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications