ಕಸದ ಸಮಸ್ಯೆಗೆ ಸರ್ಕಾರದ ನಿರ್ಲಕ್ಷ್ಯ ಕಾರಣ:ಮೇಯರ್
ಬೆಂಗಳೂರು, ಜೂ.9: ಬಿಬಿಎಂಪಿ ಮನವಿ ಮಾಡಿದಾಗ ಸರ್ಕಾರ ಪರ್ಯಾಯ ಜಾಗ ಕೊಡಲು ನಿರ್ಲಕ್ಷ್ಯವಹಿಸಿದ್ದರಿಂದ ಮಂಡೂರು ಕಸದ ಸಮಸ್ಯೆ ಉಲ್ಭಣವಾಗಿದೆ ಎಂದು ಬೆಂಗಳೂರು ಮೇಯರ್ ಬಿ.ಎಸ್.ಸತ್ಯನಾರಾಯಣ ಹೇಳಿದ್ದಾರೆ.
ನಗರದ ಭಾರತೀಯ ವಿದ್ಯಾ ಭವನದಲ್ಲಿ ಬಿ ಪ್ಯಾಕ್ ಸಂಸ್ಥೆ ಭಾನುವಾರ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ಕಸ ಸಮಸ್ಯೆ ನಿವಾರಣೆಗೆ 100 ಎಕರೆ ಜಾಗ ನೀಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ, ಸರ್ಕಾರ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಸಮಸ್ಯೆ ಉಂಟಾಗಿದೆ ಎಂದರು.
ಸರ್ಕಾರ ಈಗ ನಾಲ್ಕು ಕಡೆ ಘಟಕೆ ತೆರೆಯಲು ಅನುಮತಿ ನೀಡಿದೆ.ಈ ನಾಲ್ಕು ಯೋಜನೆಗಳು ಆರಂಭವಾಗಲು ಕನಿಷ್ಠ ಆರು ತಿಂಗಳ ಅಗತ್ಯವಿದೆ. ಅಲ್ಲಿಯವರೆಗೂ ಮಂಡೂರಿಗೆ ಕಸ ಸಾಗಣೆ ಮಾಡುವುದನ್ನು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.[ಸಚಿವರ ಮನೆ ಸುತ್ತ ಕಸ ಎತ್ತಿ ಲೋಕಸತ್ತಾ ಪ್ರತಿಭಟನೆ]

ಕಲ್ಯಾಣ ನಗರ ಜನತೆಯ ಕಸ ವಿಲೇವಾರಿ ಕ್ರಮವನ್ನು ಹೊಗಳಿದ ಮೇಯರ್ ಕಸ ವಿಲೇವಾರಿ ಕೆಲಸ ಬಿಬಿಎಂಪಿಯದ್ದು ಎಂಬ ಭಾವನೆ ಜನರಲ್ಲಿ ಮೂಡಿದೆ. ಹಸಿ ಹಾಗೂ ಒಣ ತ್ಯಾಜ್ಯ ಮೂಲದಲ್ಲಿಯೇ ವಿಂಗಡಿಸಿ ನೀಡುವಂತೆ ಮನವಿ ಮಾಡಿದರೂ ಜನ ಸ್ಪಂದಿಸುತ್ತಿಲ್ಲ. ಜನರಲ್ಲೇ ಕಸದ ಸಮಸ್ಯೆ ಬಗ್ಗೆ ಅರಿವು ಮೂಡಬೇಕಿದೆ ಎಂದರು.[ಬೆಂಗಳೂರಿನ ಸೂತ್ರ ಹಿಡಿದವರು ಮಂಡೂರಲ್ಲಿ ವಾಸ್ತವ್ಯ ಹೂಡಲಿ]
ಕಸದ ಸಮಸ್ಯೆ ನಿವಾರಣೆ ಬಗ್ಗೆ ಬೇಜವಾಬ್ದಾರಿ ವಹಿಸಿದ ಬಿಬಿಎಂಪಿ ಅಧಿಕಾರಿಗಳು, ಆರೋಗ್ಯಾಧಿಕಾರಿ ಹಾಗೂ ಪೌರಕಾರ್ಮಿಕರನ್ನು ತರಾಟೆಗೆ ತೆಗೆದುಕೊಳ್ಳುವಂತಿಲ್ಲ. ತರಾಟೆಗೆ ತೆಗೆದುಕೊಂಡರೆ ಜಾತಿ ವಿಷಯ ಪ್ರಸ್ತಾಪಿಸಿ ಹೆದರಿಸುತ್ತಾರೆ. ಇವರ ನಡುವೆ ಕೆಲಸ ಮಾಡುವುದು ಹೇಗೆ ಎಂದು ಮೇಯರ್ ಸತ್ಯನಾರಾಯಣ ಪ್ರಶ್ನಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications