ಕಸ ಸಮಸ್ಯೆ: ಲೋಕಸತ್ತಾದಿಂದ ಭಾನುವಾರ ಪ್ರತಿಭಟನೆ
ಬೆಂಗಳೂರು, ಜೂ.14: ಮಂಡೂರು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಸ ಹಾಕುವುದನ್ನು ವಿರೋಧಿಸಿ 'ಡಂಪಿಂಗ್ ಸಾಕು' ಎಂಬ ಪ್ರತಿಭಟನಾ ಅಭಿಯಾನವನ್ನು ನಗರದಲ್ಲಿ ಲೋಕಸತ್ತಾ ಪಕ್ಷ ಜೂನ್ 15 ಭಾನುವಾರದಂದು ಆಯೋಜಿಸಿದೆ.
ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ಲೋಕಸತ್ತಾ ಪಕ್ಷವು ಬೆಂಗಳೂರಿನ ಬಸವನಗುಡಿ ವಿಧಾನಸಭಾ ಕ್ಷೇತ್ರದ ಶ್ರೀನಗರ, ಹನುಮಂತನಗರ ಪ್ರದೇಶದ ಮನೆಗಳಿಂದ ಕಸವನ್ನು ಸಂಗ್ರಹಣೆ ಮಾಡಿ ಜನತೆಯಲ್ಲಿ ಅರಿವು ಮೂಡಿಸಲಿದೆ.[ಮೇಯರ್ ವಿದೇಶ ಪ್ರವಾಸಕ್ಕೆ ಲೋಕಸತ್ತಾ ವಿರೋಧ]

ಪ್ರತಿಭಟನೆಯ ಜೊತೆಗೆ ಬಸವನಗುಡಿ ಕ್ಷೇತ್ರದ ಶಾಸಕರಿಗೆ ಮತ್ತು ಪಾಲಿಕೆ ಸದಸ್ಯರುಗಳಿಗೆ ಈ ಬಗ್ಗೆ ಮನವಿ ಪತ್ರ ಸಲ್ಲಿಸಿ, ಮಂಡೂರಿನ ಜನತೆಗೆ ನ್ಯಾಯ ದೊರಕಿಸಿ, ನಗರದ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಒತ್ತಾಯಿಸಲಿದೆ.
ಕಸ ಸಮಸ್ಯೆಗೆ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿರುವ ಲೋಕಸತ್ತಾ ಪಕ್ಷ ಜೂನ್.8 ರಂದು ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿಯವರ ಮನೆ ಸುತ್ತಮುತ್ತಾ ಕಸವನ್ನು ಎತ್ತಿ ಪ್ರತಿಭಟನೆ ನಡೆಸಿದ್ದರು.[ಸಚಿವರ ಮನೆ ಸುತ್ತ ಕಸ ಎತ್ತಿ ಲೋಕಸತ್ತಾ ಪ್ರತಿಭಟನೆ]
ಮಂಡೂರಿನ ಕಸದ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆ ಯಾವುದೇ ತೀರ್ಮಾನಕ್ಕೆ ಬಾರದೇ ವಿಫಲವಾಗಿದೆ. ಈ ನಡುವೆ ಕೆಲ ಗ್ರಾಮಸ್ಥರು ಘಟಕ ಸ್ಥಗಿತಗೊಳಿಸುವುದಾಗಿ ಮುಚ್ಚಳಿಕೆ ನೀಡಿದರಷ್ಟೇ ಮೂರು ತಿಂಗಳ ಕಾಲಾವಕಾಶ ನೀಡುವುದಾಗಿ ಹೇಳಿದ್ದಾರೆ.[ಕಸ ಕಿತ್ತಾಟ: ಸಿಎಂ ಸಿದ್ದರಾಮಯ್ಯ ಸಂಧಾನ ಸಭೆ ವಿಫಲ]
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications