ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಾಮೀನಿಗಾಗಿ ಸೆಷನ್ಸ್ ಕೋರ್ಟ್ ಮೊರೆ ಹೋದ ದುನಿಯಾ ವಿಜಯ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 27 : ನಟ ದುನಿಯಾ ವಿಜಯ್ ಜಾಮೀನು ನೀಡುವಂತೆ ಕೋರಿ ಸೆಷನ್ಸ್‌ ಕೋರ್ಟ್‌ ಮೊರೆ ಹೋಗಿದ್ದಾರೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಬುಧವಾರ ವಿಜಯ್ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಸೆಷನ್ಸ್ ಕೋರ್ಟ್ ಸೆ.29ರಂದು ಅರ್ಜಿಯ ವಿಚಾರಣೆ ನಡೆಸಲಿದೆ.

ದುನಿಯಾ ವಿಜಯ್ ಪರ ವಕೀಲರು ಗುರುವಾರ ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದರು. ಜಿಮ್ ಟ್ರೈನರ್ ಮಾರುತಿ ಗೌಡ ಅವರ ಮೇಲೆ ಹಲ್ಲೆ ನಡೆಸಿರುವುದು, ಅಪಹರಣ ಪ್ರಕರಣದಲ್ಲಿ ದುನಿಯಾ ವಿಜಯ್ ಆರೋಪಿಯಾಗಿದ್ದಾರೆ.

ನಟ ದುನಿಯಾ ವಿಜಯ್ ಜಾಮೀನು ಅರ್ಜಿ ವಜಾ, ಜೈಲೇ ಗತಿನಟ ದುನಿಯಾ ವಿಜಯ್ ಜಾಮೀನು ಅರ್ಜಿ ವಜಾ, ಜೈಲೇ ಗತಿ

ಸೆ.23ರಂದು ಹೈಗ್ರೌಂಡ್ಸ್ ಠಾಣೆ ಪೊಲೀಸರು ದುನಿಯಾ ವಿಜಯ್ ಅವರನ್ನು ಬಂಧಿಸಿದ್ದರು. ಕೋರ್ಟ್ 14 ದಿನಗಳ ಕಾಲ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ದುನಿಯಾ ವಿಜಯ್ ಬಗ್ಗೆ ನಿರ್ಮಾಪಕ ಮುನಿರತ್ನ ಕೊಟ್ಟ ಪ್ರತಿಕ್ರಿಯೆ ಹೀಗಿತ್ತುದುನಿಯಾ ವಿಜಯ್ ಬಗ್ಗೆ ನಿರ್ಮಾಪಕ ಮುನಿರತ್ನ ಕೊಟ್ಟ ಪ್ರತಿಕ್ರಿಯೆ ಹೀಗಿತ್ತು

Duniya Vijay moved session court for bail

ಸೆ.24ರಂದು ದುನಿಯಾ ವಿಜಯ್ ಪರ ವಕೀಲ ಶಿವಕುಮಾರ್ ಅವರು 8ನೇ ಎಸಿಎಂಎಂ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಸೆ.26ಕ್ಕೆ ತೀರ್ಪು ಕಾಯ್ದಿರಿಸಿತ್ತು. ಬುಧವಾರ ಜಾಮೀನು ಅರ್ಜಿ ವಜಾ ಮಾಡಲಾಗಿದೆ.

14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ದುನಿಯಾ ವಿಜಯ್14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ದುನಿಯಾ ವಿಜಯ್

ಜಾಮೀನಿಗೆ ಆಕ್ಷೇಪ : ದುನಿಯಾ ವಿಜಯ್ ಎಸಿಎಂಎಂ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಜಿ.ಎನ್.ಅರುಣ್ ಆಕ್ಷೇಪ ವ್ಯಕ್ತಪಡಿಸಿದ್ದರು. ಜಾಮೀನು ನೀಡಿದರೆ ಪುನಃ ಗಲಾಟೆ ನಡೆಯುವ ಸಾಧ್ಯತೆ ಇದೆ. ದುನಿಯಾ ವಿಜಯ್ ಗುಂಪು ಕಟ್ಟಿಕೊಂಡು ಪದೇ-ಪದೇ ಗಲಾಟೆ ಮಾಡುತ್ತಿದ್ದಾರೆ ಎಂದು ವಾದ ಮಂಡಿಸಿದ್ದರು.

English summary
Kannada actor Duniya Vijay moved session court for bail. Bengaluru 8th ACMM court on September 26, 2018 rejected the bail application of Duniya Vijay. Duniya Vijay accused in attack and kidnap case of jim trainer Mruthi Gowda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X