ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪಗೆ ಧನ್ಯವಾದ ತಿಳಿಸಿದ ದುನಿಯಾ ವಿಜಯ್

|
Google Oneindia Kannada News

ಬೆಂಗಳೂರು, ಮೇ 14: ನಟ ದುನಿಯಾ ವಿಜಯ್ ತಮ್ಮ ಫೇಸ್‌ ಬುಕ್ ಖಾತೆಯ ಮೂಲಕ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪಗೆ ಧನ್ಯವಾದ ತಿಳಿಸಿದ್ದಾರೆ. ಜಿಮ್ ತೆರೆಯಲು ಸರ್ಕಾರ ಮನಸ್ಸು ಮಾಡಿದ್ದು, ದುನಿಯಾ ವಿಜಯ್ ವಂದನೆ ಹೇಳಿದ್ದಾರೆ.

Recommended Video

ಅಪ್ಪು ಹಾಗು ಸುಧಾಮೂರ್ತಿಯವರು ಹೇಳುತ್ತಿರೋ ಈ ಆಪ್ತಮಿತ್ರ ಯಾರು ? | Apthamitra | Helpline

''ಜಿಮ್ ಟ್ರೈನರುಗಳ ಕಷ್ಟ ಯಾವ ಮಟ್ಟದಲ್ಲಿದೆ ಎನ್ನುವುದರ ಬಗ್ಗೆ ನಾನು ಇತ್ತೀಚೆಗಷ್ಟೇ ಎರಡೆರಡು ಬಾರಿ ಫೇಸ್ಬುಕ್ ನಲ್ಲಿ ಬರೆದುಕೊಂಡಿದ್ದೇನೆ. ನಾನು ಒಬ್ಬ ಮಾಜಿ ಜಿಮ್ ಟ್ರೈನರ್ ಆಗಿ ಅವರು ಪ್ರಸ್ತುತ ಎದುರಿಸುವ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ವಿವರವಾಗಿ ಬರೆದಿದ್ದೆ. ಅದು ಮಾನ್ಯ ಮುಖ್ಯಮಂತ್ರಿಯವರಿಗೆ ನೀಡಿದ ಮನವಿಯೂ ಆಗಿತ್ತು.'' ಎಂದಿರುವ ದುನಿಯಾ ವಿಜಯ್ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

 ಕರ್ನಾಟಕದಲ್ಲಿ ಮೇ 17ರಿಂದ ಜಿಮ್, ಫಿಟ್ನೆಸ್ ಕೇಂದ್ರ ಓಪನ್? ಕರ್ನಾಟಕದಲ್ಲಿ ಮೇ 17ರಿಂದ ಜಿಮ್, ಫಿಟ್ನೆಸ್ ಕೇಂದ್ರ ಓಪನ್?

''ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರು ಇದೇ ತಿಂಗಳ 18ರಿಂದ ಹೋಟೆಲ್ ಜತೆಗೆ ಜಿಮ್ ಟ್ರೈನಿಂಗ್ ಸೆಂಟರ್ ಗಳನ್ನು ಕೂಡ ತೆರೆಯಲು ಸಮ್ಮತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ಈ ಸಕಾರಾತ್ಮಕ ಸ್ಪಂದನೆಗೆ ನಾಡಿನ ಎಲ್ಲ ಜಿಮ್ ಟ್ರೈನರುಗಳ ಪರವಾಗಿ ಕೋಟಿ ವಂದನೆಗಳು. ಅದೇ ಸಂದರ್ಭದಲ್ಲಿ ಜಿಮ್ ಟ್ರೈನರುಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಕಳಕಳಿಯ ಅಪೇಕ್ಷೆ. ವಂದನೆಗಳು.'' ಎಂದು ದುನಿಯಾ ವಿಜಯ್ ಫೇಸ್‌ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Duniya Vijay Thanked CM Yediyurappa

ಕೆಲ ದಿನಗಳ ಹಿಂದೆ ದುನಿಯಾ ವಿಜಯ್ ಸೋಷಿಯಲ್ ಮೀಡಿಯಾದಲ್ಲಿ ಜಿಮ್‌ ಟ್ರೈನರ್‌ಗಳ ಕಷ್ಟದ ಬಗ್ಗೆ ತಿಳಿಸಿದ್ದರು. ಜಿಮ್‌ ತೆರೆಯಲು ಅವಕಾಶ ನೀಡಬೇಕು ಎಂದಿದ್ದರು. ಈಗ ಸರ್ಕಾರ ಜಿಮ್‌ ತೆರೆಯಲು ಸಮ್ಮತಿ ನೀಡಲು ನಿರ್ಧಾರ ಮಾಡಿದೆ.

ಮೇ 17ರಂದು ಮೂರನೇ ಹಂತದ ಲಾಕ್ಡೌನ್ ಮುಕ್ತಾಯವಾಗಲಿದ್ದು, ಜಿಮ್, ಫಿಟ್ನೆಸ್ ಕೇಂದ್ರ, ಗಾಲ್ಫ್ ಕೋರ್ಸ್ ತೆರೆಯಲು ಸರ್ಕಾರ ಅನುಮತಿ ನೀಡುವ ಸಾಧ್ಯತೆ ಹೆಚ್ಚಿದೆ.

English summary
Kannada actor Duniya vijay thanked CM BS Yediyurappa. State government planning to give permission to open gym.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X