ತಲೆಮರೆಸಿಕೊಂಡಿದ್ದ ದುನಿಯಾ ವಿಜಯ್ ಪತ್ನಿಗೆ ನಿರೀಕ್ಷಣಾ ಜಾಮೀನು
ಬೆಂಗಳೂರು, ನವೆಂಬರ್ 05: ಹಲ್ಲೆ ಪ್ರಕರಣದ ಆರೋಪಿ ಆಗಿ ಪೊಲೀಸರಿಗೆ ಬೇಕಾಗಿದ್ದ ನಟ ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಅವರಿಗೆ ಇಂದು ನಿರೀಕ್ಷಣಾ ಜಾಮೀನು ದೊರೆತಿದೆ.
ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಪೊಲೀಸರು ವಿಚಾರಣೆಗಾಗಿ ನಾಗರತ್ನ ಅವರನ್ನು ಹುಡುಕುತ್ತಿದ್ದರು ಆದರೆ ಅವರು ತಲೆಮರೆಸಿಕೊಂಡಿದ್ದರು.
ಕಳೆದ ವಾರದಿಂದಲೂ ಪೊಲೀಸರಿಂದ ತಲೆಮರೆಸಿಕೊಂಡಿದ್ದ ನಾಗರತ್ನ ಅವರಿಗೆ ಇಂದು ನಿರೀಕ್ಷಣಾ ಜಾಮೀನು ದೊರೆತಿದೆ. ಹಾಗಾಗಿ ಅವರು ನಿರಾಳವಾಗಲಿದ್ದಾರೆ. ಅವರಿಗೆ ಬಂಧನದ ಭೀತಿ ಇಲ್ಲವಾಗಿದೆ.
ದುನಿಯಾ ವಿಜಯ್ ಅವರು ಪಾನಿಪುರಿ ಕಿಟ್ಟಿ ಅವರ ಅಣ್ಣನ ಮಗನ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ ಮಾರನೇಯ ದಿನ ದುನಿಯಾ ವಿಜಯ್ ಮನೆಗೆ ಬಂದಿದ್ದ ನಾಗರತ್ನ ಏಕಾ-ಏಕಿ ಚಪ್ಪಲಿಯಿಂದ ಕೀರ್ತಿಗೌಡ ಮೇಲೆ ಹಲ್ಲೆ ಮಾಡಿದ್ದರು ಅದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿತ್ತು.

ಕೀರ್ತಿಗೌಡ ಮೇಲೆ ದೂರು ನೀಡಿದ್ದ ನಾಗರತ್ನ
ಹಲ್ಲೆ ಮಾಡಿದ್ದ ನಾಗರತ್ನ ಠಾಣೆಗೆ ಬಂದು ಕೀರ್ತಿ ಗೌಡಾಳೆ ತನ್ನ ಹಾಗೂ ಮಗಳ ಮೇಲೆ ಹಲ್ಲೆ ಮಾಡಿದ್ದಾಳೆ ಎಂದು ದೂರು ನೀಡಿದ್ದರು. ಆದರೆ ತನಿಖೆ ನಡೆಸಿದ ಪೊಲೀಸರು ನಾಗರತ್ನ ಅವರೇ ಹಲ್ಲೆ ನಡೆಸಿದ್ದಾರೆಂದು ಪತ್ತೆ ಹಚ್ಚಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದಿನಿಂದ ನಾಗರತ್ನ ನಾಪತ್ತೆ ಆಗಿದ್ದರು.

ವಿಜಯ್ಗೆ ಅಣ್ಣಾಮಲೈ ನೊಟೀಸ್
ಈ ಮಧ್ಯೆ ದುನಿಯಾ ವಿಜಯ್ ಮತ್ತು ಕುಟುಂಬ ಸದಸ್ಯರಿಗೆ ದಕ್ಷಿಣ ವಿಭಾಗದ ಪೊಲೀಸ್ ವರೀಷ್ಠಾಧಿಕಾರಿ ಅಣ್ಣಾಮಲೈ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗಿ ಮುಚ್ಚಳಿಕೆ ಬರೆದುಕೊಡುವಂತೆ ಸೂಚನೆ ನೀಡಿದ್ದಾರೆ ಆದರೆ ಈ ವರೆಗೆ ವಿಚಾರಣೆಗೆ ವಿಜಯ್ ಹಾಜರಾಗಿಲ್ಲ ಎನ್ನಲಾಗಿದೆ.

ತಾರಕಕ್ಕೇರಿದ್ದ ಕುಟುಂಬ ಜಗಳ
ಪಾನಿಪುರಿ ಕಿಟ್ಟಿ ವಿವಾದದ ನಂತರ ದುನಿಯಾ ವಿಜಯ್ ಕುಟುಂಬ ಜಗಳ ತಾರಕ್ಕೇರಿತು. ಮೊದಲಿಗೆ ನಾಗರತ್ನ ಕೀರ್ತಿ ರೆಡ್ಡಿ ಮೇಲೆ ದೂರು ನೀಡಿದರು ಆ ನಂತರ ದುನಿಯಾ ವಿಜಯ್ ಮಗಳೇ ಅಪ್ಪನ ವಿರುದ್ಧ ಠಾಣೆ ಮೆಟ್ಟಿಲು ಏರಿದಳು. ಆ ನಂತರ ಕೀರ್ತಿ ರೆಡ್ಡಿ ನಾಗರತ್ನ ಮೇಲೆ ದೂರು ನೀಡಿದರು.

ವಿಚ್ಛೇಧನಕ್ಕೆ ಅರ್ಜಿ ಹಾಕಲಿರುವ ವಿಜಯ್
ದುನಿಯಾ ವಿಜಯ್ ಅವರು ನಾಗರತ್ನ ಅವರಿಗೆ ವಿಚ್ಛೇದನ ಅರ್ಜಿ ಕಳುಹಿಸಲಿದ್ದಾರೆ ಎನ್ನಲಾಗಿದೆ. ಆ ಮೂಲಕ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ಕೌಟುಂಬಿಕ ಕಲಹ ತಾರ್ಕಿಕ ಅಂತ್ಯ ಕಾಣಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications