ತಲೆಮರೆಸಿಕೊಂಡಿದ್ದ ದುನಿಯಾ ವಿಜಯ್ ಪತ್ನಿಗೆ ನಿರೀಕ್ಷಣಾ ಜಾಮೀನು
ಬೆಂಗಳೂರು, ನವೆಂಬರ್ 05: ಹಲ್ಲೆ ಪ್ರಕರಣದ ಆರೋಪಿ ಆಗಿ ಪೊಲೀಸರಿಗೆ ಬೇಕಾಗಿದ್ದ ನಟ ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಅವರಿಗೆ ಇಂದು ನಿರೀಕ್ಷಣಾ ಜಾಮೀನು ದೊರೆತಿದೆ.
ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಪೊಲೀಸರು ವಿಚಾರಣೆಗಾಗಿ ನಾಗರತ್ನ ಅವರನ್ನು ಹುಡುಕುತ್ತಿದ್ದರು ಆದರೆ ಅವರು ತಲೆಮರೆಸಿಕೊಂಡಿದ್ದರು.
ಕಳೆದ ವಾರದಿಂದಲೂ ಪೊಲೀಸರಿಂದ ತಲೆಮರೆಸಿಕೊಂಡಿದ್ದ ನಾಗರತ್ನ ಅವರಿಗೆ ಇಂದು ನಿರೀಕ್ಷಣಾ ಜಾಮೀನು ದೊರೆತಿದೆ. ಹಾಗಾಗಿ ಅವರು ನಿರಾಳವಾಗಲಿದ್ದಾರೆ. ಅವರಿಗೆ ಬಂಧನದ ಭೀತಿ ಇಲ್ಲವಾಗಿದೆ.
ದುನಿಯಾ ವಿಜಯ್ ಅವರು ಪಾನಿಪುರಿ ಕಿಟ್ಟಿ ಅವರ ಅಣ್ಣನ ಮಗನ ಮೇಲೆ ಹಲ್ಲೆ ಮಾಡಿ ಜೈಲು ಸೇರಿದ ಮಾರನೇಯ ದಿನ ದುನಿಯಾ ವಿಜಯ್ ಮನೆಗೆ ಬಂದಿದ್ದ ನಾಗರತ್ನ ಏಕಾ-ಏಕಿ ಚಪ್ಪಲಿಯಿಂದ ಕೀರ್ತಿಗೌಡ ಮೇಲೆ ಹಲ್ಲೆ ಮಾಡಿದ್ದರು ಅದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿತ್ತು.

ಕೀರ್ತಿಗೌಡ ಮೇಲೆ ದೂರು ನೀಡಿದ್ದ ನಾಗರತ್ನ
ಹಲ್ಲೆ ಮಾಡಿದ್ದ ನಾಗರತ್ನ ಠಾಣೆಗೆ ಬಂದು ಕೀರ್ತಿ ಗೌಡಾಳೆ ತನ್ನ ಹಾಗೂ ಮಗಳ ಮೇಲೆ ಹಲ್ಲೆ ಮಾಡಿದ್ದಾಳೆ ಎಂದು ದೂರು ನೀಡಿದ್ದರು. ಆದರೆ ತನಿಖೆ ನಡೆಸಿದ ಪೊಲೀಸರು ನಾಗರತ್ನ ಅವರೇ ಹಲ್ಲೆ ನಡೆಸಿದ್ದಾರೆಂದು ಪತ್ತೆ ಹಚ್ಚಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಅಂದಿನಿಂದ ನಾಗರತ್ನ ನಾಪತ್ತೆ ಆಗಿದ್ದರು.

ವಿಜಯ್ಗೆ ಅಣ್ಣಾಮಲೈ ನೊಟೀಸ್
ಈ ಮಧ್ಯೆ ದುನಿಯಾ ವಿಜಯ್ ಮತ್ತು ಕುಟುಂಬ ಸದಸ್ಯರಿಗೆ ದಕ್ಷಿಣ ವಿಭಾಗದ ಪೊಲೀಸ್ ವರೀಷ್ಠಾಧಿಕಾರಿ ಅಣ್ಣಾಮಲೈ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗಿ ಮುಚ್ಚಳಿಕೆ ಬರೆದುಕೊಡುವಂತೆ ಸೂಚನೆ ನೀಡಿದ್ದಾರೆ ಆದರೆ ಈ ವರೆಗೆ ವಿಚಾರಣೆಗೆ ವಿಜಯ್ ಹಾಜರಾಗಿಲ್ಲ ಎನ್ನಲಾಗಿದೆ.

ತಾರಕಕ್ಕೇರಿದ್ದ ಕುಟುಂಬ ಜಗಳ
ಪಾನಿಪುರಿ ಕಿಟ್ಟಿ ವಿವಾದದ ನಂತರ ದುನಿಯಾ ವಿಜಯ್ ಕುಟುಂಬ ಜಗಳ ತಾರಕ್ಕೇರಿತು. ಮೊದಲಿಗೆ ನಾಗರತ್ನ ಕೀರ್ತಿ ರೆಡ್ಡಿ ಮೇಲೆ ದೂರು ನೀಡಿದರು ಆ ನಂತರ ದುನಿಯಾ ವಿಜಯ್ ಮಗಳೇ ಅಪ್ಪನ ವಿರುದ್ಧ ಠಾಣೆ ಮೆಟ್ಟಿಲು ಏರಿದಳು. ಆ ನಂತರ ಕೀರ್ತಿ ರೆಡ್ಡಿ ನಾಗರತ್ನ ಮೇಲೆ ದೂರು ನೀಡಿದರು.

ವಿಚ್ಛೇಧನಕ್ಕೆ ಅರ್ಜಿ ಹಾಕಲಿರುವ ವಿಜಯ್
ದುನಿಯಾ ವಿಜಯ್ ಅವರು ನಾಗರತ್ನ ಅವರಿಗೆ ವಿಚ್ಛೇದನ ಅರ್ಜಿ ಕಳುಹಿಸಲಿದ್ದಾರೆ ಎನ್ನಲಾಗಿದೆ. ಆ ಮೂಲಕ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ಕೌಟುಂಬಿಕ ಕಲಹ ತಾರ್ಕಿಕ ಅಂತ್ಯ ಕಾಣಲಿದೆ.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications