ಉಚಿತ ಹಾಲು ವಿತರಣೆ ವೇಳೆ ಮಾರಾಮಾರಿ: ಆಟೋ ಡ್ರೈವರ್ಗೆ ಚಾಕು ಇರಿತ
ಬೆಂಗಳೂರು, ಮೇ 1: ನಗರದ ಶೇಷಾದ್ರಿಪುರಂನಲ್ಲಿ ಉಚಿತ ಹಾಲು ವಿತರಣೆ ವೇಳೆ ನಡೆದ ಮಾರಾಮಾರಿಯಲ್ಲಿ ಆಟೋ ಚಾಲಕರೊಬ್ಬರು ಚಾಕು ಇರಿತಕ್ಕೊಳಗಾಗಿದ್ದಾರೆ.
ನಾಗರಾಜ್ ಎಂಬುವವರು ಬಿಬಿಎಂಪಿಯ ಉಚಿತ ಹಾಲು ವಿತರಣೆ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ಅವರಿಗೆ ಪರಿಚಯವಿದ್ದ ಕುಟುಂಬದವರಿಗೆ ಮಾತ್ರ ಹಾಲು ನೀಡುತ್ತಿದ್ದರು. ಕೇವಲ ವಿವಿಗಿರಿ ಕಾಲೊನಿಯ ಜನರಿಗೆ ಮಾತ್ರ ಹಾಲು ನೀಡಲಾಗುತ್ತಿತ್ತು. ಅದನ್ನು ಆಟೋ ಚಾಲಕ ವಿನೋದ್ ಕುಮಾರ್ ಪ್ರಶ್ನಿಸಿದ್ದರು. ಇದರಿಂದ ಮಾತು ಜಗಳಕ್ಕೆ ತಿರುಗಿತ್ತು.
ಬುಧವಾರವೂ ಜಗಳ ಮುಂದುವರೆದಿತ್ತು. ಕುಮಾರ್ ಕುಟುಂಬದವರು ಈ ವಿಚಾರವಾಗಿ ನಾಗರಾಜ್ ಅವರನ್ನು ಮತ್ತೆ ಪ್ರಶ್ನಿಸಿದ್ದರು. ಕುಮಾರ್ ಅವರ ಬೆಂಬಲಿಗರು ಹಾಗೂ ನಾಗರಾಜ್ ಬೆಂಬಲಿಗರ ಮಧ್ಯೆ ಕಲಹ ಆರಂಭವಾಗಿ ನಾಗರಾಜ್ ಬೆಂಬಲಿಗರು ವಿನೋದ್ ಕುಮಾರ್ ಅವರ ಹೊಟ್ಟೆಗೆ ಚಾಕುವಿನಿಂದ ತಿವಿದಿದ್ದಾರೆ. ಇಬ್ಬರು ಮಹಿಳೆಯರು ಸೇರಿ ಒಟ್ಟು ಹತ್ತು ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಬಿಬಿಎಂಪಿಯಿಂದ ನೀಡಲಾಗುವ ಉಚಿತ ಹಾಲು ವಿತರಣೆ ಗ್ಯಾಂಗ್ವಾರ್ ಆಗಿ ಮಾರ್ಪಾಟಾದ ಘಟನೆ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ನಡೆದಿತ್ತು.
ಹರೀಶ್, ರಾಜಣ್ಣ, ಗಿರಿನರಸಿಂಹಯ್ಯ ಹಾಗೂ ವೆಂಕಟೇಶಪ್ಪ ಅವರು ಬಿಬಿಎಂಪಿ ಅಧಿಕಾರಿಗಳು ನೀಡಿದ್ದ ಹಾಲನ್ನು ಉಚಿತವಾಗಿ ಜನರಿಗೆ ವಿತರಣೆ ಮಾಡುತ್ತಿದ್ದರು. ಗೃಹಿಣಿ ಅಂಜಲಿ ಸರತಿಯಲ್ಲಿ ನಿಂತಿದ್ದರು,
ಆ ಸಂದರ್ಭದಲ್ಲಿ ವಿತರಕರು ತಮಗೆ ಬೇಕಾದ ಜನರಿಗೆ ಅರ್ಧ ಲೀಟರ್ಗಿಂತಲೂ ಹೆಚ್ಚು ಹಾಲು ವಿತರಣೆ ಮಾಡುವುದನ್ನು ನೋಡಿ ಅದನ್ನು ವಿರೋಧಿಸಿದರು.ಇದರಿಂದ ಕೋಪಗೊಂಡ ಹರೀಶ್ ಮತ್ತೆ ರಾಜಣ್ಣ ಅಂಜಲಿಯವರನ್ನು ನಿಂದಿಸಿ ಅವರನ್ನು ಆ ಜಾಗದಿಂದ ಹೊರಡುವಂತೆ ಹೇಳಿದರು ಬಳಿಕ ಗಲಾಟೆ ಆರಂಭವಾಗಿತ್ತು.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications