ಉಚಿತ ಹಾಲು ವಿತರಣೆ ವೇಳೆ ಮಾರಾಮಾರಿ: ಆಟೋ ಡ್ರೈವರ್ಗೆ ಚಾಕು ಇರಿತ
ಬೆಂಗಳೂರು, ಮೇ 1: ನಗರದ ಶೇಷಾದ್ರಿಪುರಂನಲ್ಲಿ ಉಚಿತ ಹಾಲು ವಿತರಣೆ ವೇಳೆ ನಡೆದ ಮಾರಾಮಾರಿಯಲ್ಲಿ ಆಟೋ ಚಾಲಕರೊಬ್ಬರು ಚಾಕು ಇರಿತಕ್ಕೊಳಗಾಗಿದ್ದಾರೆ.
ನಾಗರಾಜ್ ಎಂಬುವವರು ಬಿಬಿಎಂಪಿಯ ಉಚಿತ ಹಾಲು ವಿತರಣೆ ಕಾರ್ಯಕ್ರಮದ ನೇತೃತ್ವ ವಹಿಸಿದ್ದಾರೆ. ಅವರಿಗೆ ಪರಿಚಯವಿದ್ದ ಕುಟುಂಬದವರಿಗೆ ಮಾತ್ರ ಹಾಲು ನೀಡುತ್ತಿದ್ದರು. ಕೇವಲ ವಿವಿಗಿರಿ ಕಾಲೊನಿಯ ಜನರಿಗೆ ಮಾತ್ರ ಹಾಲು ನೀಡಲಾಗುತ್ತಿತ್ತು. ಅದನ್ನು ಆಟೋ ಚಾಲಕ ವಿನೋದ್ ಕುಮಾರ್ ಪ್ರಶ್ನಿಸಿದ್ದರು. ಇದರಿಂದ ಮಾತು ಜಗಳಕ್ಕೆ ತಿರುಗಿತ್ತು.
ಬುಧವಾರವೂ ಜಗಳ ಮುಂದುವರೆದಿತ್ತು. ಕುಮಾರ್ ಕುಟುಂಬದವರು ಈ ವಿಚಾರವಾಗಿ ನಾಗರಾಜ್ ಅವರನ್ನು ಮತ್ತೆ ಪ್ರಶ್ನಿಸಿದ್ದರು. ಕುಮಾರ್ ಅವರ ಬೆಂಬಲಿಗರು ಹಾಗೂ ನಾಗರಾಜ್ ಬೆಂಬಲಿಗರ ಮಧ್ಯೆ ಕಲಹ ಆರಂಭವಾಗಿ ನಾಗರಾಜ್ ಬೆಂಬಲಿಗರು ವಿನೋದ್ ಕುಮಾರ್ ಅವರ ಹೊಟ್ಟೆಗೆ ಚಾಕುವಿನಿಂದ ತಿವಿದಿದ್ದಾರೆ. ಇಬ್ಬರು ಮಹಿಳೆಯರು ಸೇರಿ ಒಟ್ಟು ಹತ್ತು ಮಂದಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಬಿಬಿಎಂಪಿಯಿಂದ ನೀಡಲಾಗುವ ಉಚಿತ ಹಾಲು ವಿತರಣೆ ಗ್ಯಾಂಗ್ವಾರ್ ಆಗಿ ಮಾರ್ಪಾಟಾದ ಘಟನೆ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ನಡೆದಿತ್ತು.
ಹರೀಶ್, ರಾಜಣ್ಣ, ಗಿರಿನರಸಿಂಹಯ್ಯ ಹಾಗೂ ವೆಂಕಟೇಶಪ್ಪ ಅವರು ಬಿಬಿಎಂಪಿ ಅಧಿಕಾರಿಗಳು ನೀಡಿದ್ದ ಹಾಲನ್ನು ಉಚಿತವಾಗಿ ಜನರಿಗೆ ವಿತರಣೆ ಮಾಡುತ್ತಿದ್ದರು. ಗೃಹಿಣಿ ಅಂಜಲಿ ಸರತಿಯಲ್ಲಿ ನಿಂತಿದ್ದರು,
ಆ ಸಂದರ್ಭದಲ್ಲಿ ವಿತರಕರು ತಮಗೆ ಬೇಕಾದ ಜನರಿಗೆ ಅರ್ಧ ಲೀಟರ್ಗಿಂತಲೂ ಹೆಚ್ಚು ಹಾಲು ವಿತರಣೆ ಮಾಡುವುದನ್ನು ನೋಡಿ ಅದನ್ನು ವಿರೋಧಿಸಿದರು.ಇದರಿಂದ ಕೋಪಗೊಂಡ ಹರೀಶ್ ಮತ್ತೆ ರಾಜಣ್ಣ ಅಂಜಲಿಯವರನ್ನು ನಿಂದಿಸಿ ಅವರನ್ನು ಆ ಜಾಗದಿಂದ ಹೊರಡುವಂತೆ ಹೇಳಿದರು ಬಳಿಕ ಗಲಾಟೆ ಆರಂಭವಾಗಿತ್ತು.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ











Click it and Unblock the Notifications