ಅಜ್ಜಯ್ಯನ ಸಹವಾಸ ಅವರಿಗಿನ್ನೂ ಗೊತ್ತಿಲ್ಲ! ಅಶ್ವತ್ಥ ನಾರಾಯಣ ಅಕ್ರಮಗಳ ನಾಯಕ: ಡಿ.ಕೆ. ಶಿವಕುಮಾರ್

ಬೆಂಗಳೂರು, ಆಗಸ್ಟ್ 14: ಗುತ್ತಿಗೆದಾರರು ನೋವಿನಲ್ಲಿದ್ದಾರೆ. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಅವರನ್ನು ಬಳಸಿಕೊಂಡ ಅಶೋಕ ಚಕ್ರವರ್ತಿ, ನವರಂಗಿ ನಾರಾಯಣ, ಸಿ.ಟಿ ರವಿ, ಗೋಪಾಲಯ್ಯ ಅವರು ಮೊದಲು ಉತ್ತರ ನೀಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

ಅಜ್ಜಯ್ಯನ ಮಠಕ್ಕೆ ಬಂದು ಆಣೆ ಮಾಡಿ ಎಂದು ಹೇಳಿದ್ದ ಗುತ್ತಿಗೆದಾರ ಹೇಮಂತ್ ಮತ್ತಿತರರು ತಮ್ಮ ಹೇಳಿಕೆ ವಾಪಸ್ ಪಡೆದ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳಿದ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ಕಿಡಿ ಕಾರಿದರು.

dycm-dk-shivakumar

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, "ಗುತ್ತಿಗೆದಾರರು ನೋವಿನಲ್ಲಿ ಇದ್ದಾರೆ, ಅವರ ವಿಚಾರಕ್ಕೆ ನಾನು ಹೋಗುವುದಿಲ್ಲ, ಆದರೆ ಅವರನ್ನು ಬಳಸಿಕೊಂಡ ಅಶೋಕ ಚಕ್ರವರ್ತಿ, ನವರಂಗಿ ನಾರಾಯಣ, ಗೋಪಾಲಯ್ಯ, ಸಿ ಟಿ ರವಿ ಇವರೆಲ್ಲಾ ಮೊದಲು ಉತ್ತರ ಕೊಡಲಿ. ಆಮೇಲೆ ಮಿಕ್ಕ ವಿಚಾರ ಮಾತನಾಡುತ್ತೇನೆ" ಎಂದು ಸವಾಲು ಹಾಕಿದರು.

ಅಜ್ಜಯ್ಯನ ಸಹವಾಸ ಅವರಿಗೆ ಗೊತ್ತಿಲ್ಲ

ಬಿಜೆಪಿ ನಾಯಕರ ಅಕ್ರಮಗಳ ಬಗ್ಗೆ ನಿಮ್ಮ ಬಳಿ ದಾಖಲೆಗಳಿವೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, "ನಮ್ಮ ಅಜ್ಜಯ್ಯನ ಸಹವಾಸ ಏನು ಎಂದು ಅವರಿಗೆಲ್ಲಾ ಗೊತ್ತಿಲ್ಲ. ನಾನೀಗ ತಕ್ಷಣಕ್ಕೆ ಉತ್ತರ ನೀಡಲು ಹೋಗುವುದಿಲ್ಲ. ನಮಗೆ ನವರಂಗಿದು, ಚಕ್ರವರ್ತಿದು ಎಲ್ಲರದ್ದೂ ಗೊತ್ತಿದೆ. ಎಲ್ಲವನ್ನು ಒಮ್ಮೆಗೆ ಬಿಟ್ಟರೆ ಅರಗಿಸಿಕೊಳ್ಳಲು ಕಷ್ಟವಾಗುತ್ತದೆ. ಇದಕ್ಕೆಲ್ಲ ಆನಂತರ ಉತ್ತರಿಸುವೆ. ಶಾರ್ಕ್ ಮೀನಿನಂತಹ ಒಂದಷ್ಟು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಕಾಮಗಾರಿ ನಡೆಸಿಲ್ಲವಾದರೂ ಬಿಲ್ ಬಿಡುಗಡೆ ಮಾಡಿ ಎಂದು ಕೇಳುತ್ತಿದ್ದಾರೆ. ನಮಗೆ ಜನರ ಹಣದ ಮೇಲೆ ಜವಾಬ್ದಾರಿ ಇದೆ. ಸತ್ಯಶೋಧನೆಯ ವರದಿ ಬರಲಿ. ಆಗ ಪ್ರಾಮಾಣಿಕ ಗುತ್ತಿಗೆದಾರರಿಗೆ ಹಣ ನೀಡುತ್ತೇವೆ" ಎಂದು ಹೇಳಿದರು.

"ಎಲ್ಲಾ ಅಕ್ರಮಗಳ ನಾಯಕ ಅಶ್ವತ್ ನಾರಾಯಣ. ಇವರು ದೊಡ್ಡ ಇತಿಹಾಸವನ್ನೇ ಹೊಂದಿದ್ದಾರೆ. ನಮ್ಮ ಗ್ಯಾರಂಟಿ ಸರ್ಕಾರದ ಜನಪ್ರಿಯತೆ ಸಹಿಸದೆ ಮೊದಲ ದಿನದಂದಲೂ ಆಧಾರರಹಿತ ಆರೋಪ ಮಾಡುತ್ತಲೇ ಇದ್ದಾರೆ. ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗದವರು ಸುಳ್ಳು ಆರೋಪಗಳ ಮೊರೆ ಹೋಗಿದ್ದಾರೆ" ಎಂದು ಗಂಭೀರ ಆರೋಪ ಮಾಡಿದರು.

ಯಾರು ಬೇಕಾದರು ಭೇಟಿಯಾಗಲಿ

ಗುತ್ತಿಗೆದಾರರು ನಿಮ್ಮನ್ನು ಬಂದು ಭೇಟಿ ಮಾಡುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, "ನಮ್ಮನ್ನು ಬಂದು ಯಾರು ಬೇಕಾದರೂ ಭೇಟಿಯಾಗಲಿ. ಈಗಾಗಲೇ ಮುನಿರತ್ನ ಭೇಟಿಯಾಗಿದ್ದರು. ಚಿಕ್ಕಪೇಟೆ ಶಾಸಕರು ಬಂದು ಭೇಟಿಯಾಗಿದ್ದರು. ಯಾರು ಬಂದು ಭೇಟಿ ಆಗುವುದ್ದಕ್ಕೂ ಅಭ್ಯಂತರವಿಲ್ಲ" ಎಂದು ತಿಳಿಸಿದರು.

"ಜೆಪಿ ಸರ್ಕಾರ ಇದ್ದಾಗ 2 ವರ್ಷ ಯಾವುದೇ ಕಾಮಗಾರಿಗಳ ಬಿಲ್‌ಗಳನ್ನು ಬಿಡುಗಡೆ ಮಾಡಲಿಲ್ಲ ಯಾಕೆ? ನಾವು ಯಾವ ಕಾಮಗಾರಿಗಳು ನಡೆದಿವೆ, ನಡೆದಿಲ್ಲ ಎಂದು ಪರಿಶೀಲಿಸುವುದಕ್ಕೆ ಸಮಿತಿ ಮಾಡಿದ್ದೇವೆ. ಅಲ್ಲಿಂದ ವರದಿ ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ವಿವರಣೆ ನೀಡಿದರು.

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರು ಕಾಂಗ್ರೆಸ್ ಸರ್ಕಾರ ಯಾವುದೇ ಕಮಿಷನ್ ಕೇಳಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ. ರಾಜ್ಯಪಾಲರಿಗೆ ಪತ್ರ ಬರೆದಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯರು ನನ್ನನ್ನು ಭೇಟಿಯಾಗಿದ್ದರು. ನಾವು ಬಿಜೆಪಿಯವರ ಮಾತು ಕೇಳಿ ಈ ಕೆಲಸ ಮಾಡಿದೆವು, ನಮ್ಮದು ಯಾವುದೇ ಆರೋಪಗಳಿಲ್ಲ ಎಂದು ಹೇಳಿರುವುದಾಗಿ ಸ್ಪಷ್ಟನೆ ನೀಡಿದರು.

"ಕರ್ನಾಟಕ ಗುತ್ತಿಗೆದಾರರ ಸಂಘದವರನ್ನು ನಾನು ಇದುವರೆಗೂ ಭೇಟಿಯಾಗಿಲ್ಲ. ಆದರೆ ಯಾರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೋ ಅಂತಹವರು ತಮ್ಮ ಹಣ ಪಡೆಯಲಿದ್ದಾರೆ. ನಾನು ಕರ್ನಾಟಕದ ಜನರಿಗೆ ಉತ್ತರ ನೀಡುವ ಜವಾಬ್ದಾರಿ ಹೊಂದಿದ್ದೇನೆ" ಎಂದರು.

ಕರ್ನಾಟಕದಲ್ಲಿ ಡಿಸಿಎಂ ಟ್ಯಾಕ್ಸ್ ಇದೆ ಎನ್ನುವ ಅಶ್ವಥ ನಾರಾಯಣ ಅವರ ಆರೋಪಕ್ಕೆ ಉತ್ತರಿಸುತ್ತಾ, "ನಾನು ಎಷ್ಟು ಟ್ಯಾಕ್ಸ್ ಕಟ್ಟುತ್ತೇನೆ ಎನ್ನುವುದನ್ನು ತಿಳಿಸುತ್ತೇನೆ. ಅವರ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಲು ಸಿದ್ದನಿದ್ದೇನೆ. ಮೊದಲು ಅವರು ಬಿಜೆಪಿಯನ್ನು ಶುದ್ದಿ ಮಾಡಲಿ. ರಾಮನಗರ ಶುದ್ದ ಮಾಡುತ್ತೇನೆ ಎಂದು ಬಂದರು. ಆದರೆ ಬಿಜೆಪಿ ಕಚೇರಿ ತೆರೆಯಲು ಅವರ ಕೈಲಿ ಆಗಲಿಲ್ಲ. ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಎಲ್ಲಾ ಆಗಿದ್ದರೂ ಒಂದೇ ಒಂದು ನಗರ ಪಾಲಿಕೆ ಗೆಲ್ಲುವ ತಾಕತ್ತು ಅವರ ಬಳಿ ಇಲ್ಲ. ನಾನಲ್ಲ ನಮ್ಮ ರಾಮನಗರದ ಜನ ಸರಿಯಾದ ಉತ್ತರ ಕೊಟ್ಟು ಕಳಿಸಿದ್ದಾರೆ" ಎಂದು ತಿರುಗೇಟು ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+