ಕಲ್ಲಪ್ಪ ಆತ್ಮಹತ್ಯೆ ಪ್ರಕರಣ: ಸಿಐಡಿಗೆ ಮಾಹಿತಿ ನೀಡುವುದು ಹೇಗೆ?
ಬೆಂಗಳೂರು, ಜುಲೈ 07: ಚಿಕ್ಕಮಗಳೂರಿನ ಡಿವೈಎಸ್ಪಿಯಾಗಿದ್ದ ಕಲ್ಲಪ್ಪ ಅವರ ಆತ್ಮಹತ್ಯೆ ಹಾಗೂ ತೇಜಸ್ ಗೌಡ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಏನಾದರೂ ಮಾಹಿತಿ ಇದ್ದಲ್ಲಿ ನೀವು ಕೂಡಾ ಸಿಐಡಿ ತಂಡಕ್ಕೆ ತಿಳಿಸಬಹುದು.
ಸಾರ್ವಜನಿಕರು ಕೂಡಾ ಈಗ ತಮ್ಮ ಬಳಿ ಇರುವ ಮಾಹಿತಿಯನ್ನು ನೇರವಾಗಿ ಕ್ರಿಮಿನಲ್ ಇನ್ವೆಸ್ಟಿಕೇಷನ್ ಡಿಪಾರ್ಟ್ಮೆಂಟ್ (ಸಿಐಡಿ) ಗೆ ತಿಳಿಸಬಹುದು. ಇದರಿಂದ ತನಿಖೆಗೆ ಸಹಕಾರಿಯಾಗುತ್ತದೆ. [ಕಲ್ಲಪ್ಪ ಆತ್ಮಹತ್ಯೆ ಪ್ರಕರಣ, ಸಿಐಡಿಯಿಂದ ತೀವ್ರ ವಿಚಾರಣೆ]
ಕರ್ನಾಟಕದ ಸಿಐಡಿ ತಂಡ ಸದ್ಯಕ್ಕೆ ಕಲ್ಲಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ಬಳಸಿ, ಮಾಹಿತಿ ನೀಡುವಂತೆ ಕೋರಿ ಟ್ವೀಟ್ ಮಾಡಿದೆ.

ಚಿಕ್ಕಮಗಳೂರಿನ ತೇಜಸ್ ಗೌಡ ಅವರನ್ನು ಕಿಡ್ನಾಪ್ ಮಾಡಿ 10 ಲಕ್ಷ ರು. ಹಣ ಸ್ವೀಕರಿಸಿದ ಆರೋಪ ಹೊತ್ತಿದ್ದ ಡಿವೈಎಸ್ಪಿ ಕಲ್ಲಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕುರಿತಂತೆ ಕಲ್ಲಪ್ಪ ಅವರ ಫೋನ್ ಕರೆ ಸಂಭಾಷಣೆಯನ್ನು ವಿಡಿಯೋದಲ್ಲಿ ಕೇಳಿಸಿಕೊಳ್ಳಿ
ಆದರೆ, ಈ ಬಗ್ಗೆ ಕರ್ನಾಟಕದ ಐಜಿಪಿ ಓಂ ಪ್ರಕಾಶ್ ಅವರ ಕಚೇರಿಗೆ ಮಾಹಿತಿ ತಲುಪುವ ಮೊದಲೇ ಡಿವೈಎಸ್ಪಿ ಕಲ್ಲಪ್ಪ ಅವರು ಬೆಳಗಾವಿಯ ಸವದತ್ತಿ ತಾಲೂಕಿನ ಮುರಗೋಡದಲ್ಲಿರುವ ಮಾವನ ಮನೆಯಲ್ಲಿ ಮಂಗಳವಾರ ನೇಣಿಗೆ ಶರಣಾಗಿದ್ದರು. ಬೆಳಗಾವಿಯಲ್ಲಿ ಕುಟುಂಬಸ್ಥರಿಗೆ ಆಘಾತ ವಿಡಿಯೋ ನೋಡಿ
ಕಲ್ಲಪ್ಪ ಅವರ ಸಾವಿಗೆ ಪೊಲೀಸ್ ಇಲಾಖೆ ಕಿರುಕುಳವೇ ಕಾರಣ ಎಂದು ಬೆಳಗಾವಿಯಲ್ಲಿ ಪ್ರತಿಭಟನೆ ಕೂಡಾ ನಡೆಸಲಾಗಿದೆ. ಈ ಬಗ್ಗೆ ಮಾಹಿತಿ ಕಲೆ ಹಾಕಲು ಡಿಜಿಪಿ ಸೋನಿಯಾ ನಾರಂಗ್ ಅವರ ತಂಡ ಬೆಳಗಾವಿಗೆ ಭೇಟಿ ನೀಡಿ ಕಲ್ಲಪ್ಪ ಅವರ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ.
@CIDKarnataka taking over DySP Kallappa's death probe & kidnapping investigations
— CIDKarnataka (@CIDKarnataka) July 6, 2016
Share info [email protected] / call 9480800123@CPBlr
ಇತ್ತ ಚಿಕ್ಕಮಗಳೂರಿನಲ್ಲಿ ಸಿಐಡಿ ರಾಜಪ್ಪ ಅವರ ನೇತೃತ್ವದ ತಂಡ ತೇಜಸ್ ಗೌಡ ಹಾಗೂ ಇನ್ನಿತರರ ವಿಚಾರಣೆಯನ್ನು ತೀವ್ರಗೊಳಿಸಿದೆ. ನಿಮ್ಮಲ್ಲಿ ಕೂಡಾ ಈ ಬಗ್ಗೆ ಮಾಹಿತಿ ಇದ್ದರೆ ಸಿಐಡಿ ತಂಡಕ್ಕೆ ತಿಳಿಸಿ
ಸಿಐಡಿ ಇಮೇಲ್: [email protected]
ಸಿಐಡಿ ಮೊಬೈಲ್ ನಂಬರ್: 94808 00123
ಸಿಐಡಿ ಅಧಿಕಾರಿಗಳ ನಂಬರ್ ಗಳ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications