ಎಂಕೆ ಗಣಪತಿ ಸಾವಿನ ಪ್ರಕರಣ : ಸಚಿವ ಕೆ.ಜೆ ಜಾರ್ಜ್ ವಿರುದ್ಧ ಎಫ್ ಐಆರ್
ಬೆಂಗಳೂರು, ಅಕ್ಟೋಬರ್ 26: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳ ಮೇಲೆ ಸಿಬಿಐ ಎಫ್ ಐ ಆರ್ ದಾಖಲಿಸಿದೆ.
ಸಿಐಡಿ ತನಿಖಾ ತಂಡ ಇಂದು ಸಿಬಿಐಗೆ ತನ್ನ ವಿಸ್ತೃತ ತನಿಖಾ ವರದಿಯನ್ನು ಹಸ್ತಾಂತರ ಮಾಡಿತ್ತು. ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸುಪ್ರೀಂಕೋರ್ಟ್ ಕೂಡಾ ಸೂಚಿಸಿತ್ತು.

ಈ ಹಿನ್ನೆಲೆಯಲ್ಲಿ ಸಿಐಡಿ ತನಿಖಾ ತಂಡ ವರದಿಯನ್ನು ಇಂದು ಚೆನ್ನೈನಲ್ಲಿರುವ ಸಿಬಿಐ ಅಧಿಕಾರಿಗಳಿಗೆ ಹಸ್ತಾಂತರಿಸಿತ್ತು. ಸಚಿವ ಕೆ.ಜೆ.ಜಾರ್ಜ್, ಹಿರಿಯ ಐಎಎಸ್ ಅಧಿಕಾರಿ ಎ.ಎನ್.ಪ್ರಸಾದ್, ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರ ವಿರುದ್ಧ ಸಿಬಿಐ ತಂಡ ಎಫ್ ಐ ಆರ್ ದಾಖಲಿಸಿದೆ.
ಮಡಿಕೇರಿಯ ಲಾಡ್ಜ್ ನಲ್ಲಿ(ರೂಮ್ ನಂಬರ್ 315) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗುವುದಕ್ಕೂ ಮುನ್ನ ಗಣಪತಿ ತಮ್ಮ ಜೀವಕ್ಕೆ ಯಾವುದೇ ರೀತಿಯ ತೊಂದರೆಯಾದರೆ ಗೃಹಸಚಿವರಾಗಿದ್ದ ಕೆ.ಜೆ.ಜಾರ್ಜ್ ಮತ್ತು ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರೇ ಕಾರಣವೆಂದು ಆರೋಪ ಮಾಡಿದ್ದರು.
ವಿಡಿಯೋ ಸಾಕ್ಷ್ಯವಿದ್ದರೂ ಯಾವುದೇ ಕ್ರಮ ಜರುಗಿಸುವಲ್ಲಿ ಕರ್ನಾಟಕ ಸರ್ಕಾರ, ತನಿಖಾ ತಂಡ ವಿಫಲವಾಗಿದೆ, ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಎಂಕೆ ಗಣಪತಿ ಅವರ ತಂದೆ ಎಂಕೆ ಗಣಪತಿ ತಂದೆ ಕುಶಾಲಪ್ಪ ಹಾಗೂ ಸಹೋದರ ಎಂ.ಕೆ. ಮಾಚಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಮಹತ್ವದ ಆದೇಶ ಹೊರಡಿಸಿತ್ತು.

ಈ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಜಾರ್ಜ್, ಪ್ರಣವ್ ಮೊಹಾಂತಿ ಹಾಗೂ ಎ.ಎಂ ಪ್ರಸಾದ್ ಮೂವರಿಗೂ ಕ್ಲೀನ್ ಚಿಟ್ ನೀಡಿ, ಬಿ ರಿಪೋರ್ಟ್ ಸಲ್ಲಿಸಿತ್ತು.
ಸಿಬಿಐ ತನಿಖೆಗೆ ಕೋರಿ ಹೈಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರಗೊಂಡ ಬಳಿಕ, ಗಣಪತಿ ಅವರ ಸೋದರ ಮಾಚಯ್ಯ, ಸೋದರಿ ಬಬಿತಾ, ತಂದೆ ಕುಶಾಲಪ್ಪ ಎಲ್ಲರೂ ಸುಪ್ರೀಂಕೋರ್ಟಿಗೆ ಅರ್ಜಿ ಹಾಕಿದ್ದರು. ಸಿಬಿಐ ತನಿಖೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications