ಮೋದಿಗೆ ತಂತ್ರಜ್ಞಾನ ವಿವರಿಸಲು ಕಬ್ಬನ್ ಪಾರ್ಕ್ ಠಾಣೆ ಸಿದ್ಧ
ಬೆಂಗಳೂರು, ಆಗಸ್ಟ್ 24 : ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗಿನ ವಿಡಿಯೋ ಕಾನ್ಫರೆನ್ಸ್ಗೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಸಿದ್ಧಗೊಂಡಿದೆ. ಪೊಲೀಸ್ ಠಾಣೆಯಲ್ಲಿನ ಮಾಹಿತಿ ತಂತ್ರಜ್ಞಾನದ ಅನುಷ್ಠಾನದ ಬಗ್ಗೆ ಮಾಹಿತಿ ಪಡೆಯಲು ಮೋದಿ ಆ.26ರಂದು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಸಿಸಿಟಿಎನ್ಎಸ್ ಯೋಜನೆ ಅನ್ವಯ ಡಿಜಿಟಲೀಕರಣಗೊಂಡ ಪೊಲೀಸ್ ಠಾಣೆಗಳ ಜೊತೆ ಪ್ರಧಾನಿ ಮೋದಿ ಆ.26ರ ಬುಧವಾರ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ, ಅಸ್ಸಾಂ, ಉತ್ತರ ಪ್ರದೇಶದ ಎರಡು ಠಾಣೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. [ಕಬ್ಬನ್ ಪಾರ್ಕ್ ಠಾಣೆಗೆ ಮೋದಿ ಭೇಟಿ]
Crime and Criminal Tracking Network & Systems (CCTNS) ಯೋಜನೆಯಡಿ ಪೊಲೀಸ್ ಠಾಣೆಗಳನ್ನು ಆಧುನೀಕರಣಗೊಳಿಸಲು ಮತ್ತು ಡಿಜಿಟಲ್ ಆಡಳಿತಕ್ಕೆ ಒಳಪಡಿಸಲು ಮೂರು ಠಾಣೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ಠಾಣೆಗಳ ಜೊತೆ ಮೋದಿ ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.
ಸಿಸಿಟಿಎನ್ಎಸ್ ಯೋಜನೆ ಅನ್ವಯ ಕಬ್ಬನ್ ಪಾರ್ಕ್ ಠಾಣೆ ಡಿಜಿಟಲೀಕರಣಗೊಂಡಿದ್ದು, ಠಾಣೆಯ ಆಡಳಿತ ವ್ಯವಸ್ಥೆಗಾಗಿ ಪ್ರತ್ಯೇಕ ತಂತ್ರಾಶ ರೂಪಿಸಲಾಗಿದೆ. ಎಚ್ಪಿ ಕಂಪನಿ ಈ ತಂತ್ರಾಶವನ್ನು ನಿರ್ವಹಣೆ ಮಾಡುತ್ತಿದೆ. ಠಾಣೆಯಲ್ಲಿನ ಪ್ರಕರಣಗಳ ತನಿಖಾ ಹಂತಗಳು ಆನ್ಲೈನ್ ಮೂಲಕ ಲಭ್ಯವಿದೆ.
ಮೋದಿ ಜೊತೆ ಸಂವಾದಕ್ಕೆ ಸಿದ್ಧತೆ : ಮೋದಿ ಜೊತೆಗಿನ ಸಂವಾದಕ್ಕೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಸಕಲ ಸಿದ್ಧತೆಯಾಗಿದೆ. ಠಾಣೆಯ ಇನ್ಸ್ಪೆಕ್ಟರ್ ಸಿ.ಬಾಲಕೃಷ್ಣ ಅವರು ಮೋದಿ ಅವರಿಗೆ ಠಾಣೆಯಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಗೃಹ ಸಚಿವ ಕೆಜೆ ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್, ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್, ಕೇಂದ್ರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ಕಾನ್ಫರೆನ್ಸ್ನಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ರಿಂದ 5.30ರ ತನಕ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್













Click it and Unblock the Notifications