ಪೊಲೀಸರಿಗೆ ಕಗ್ಗಂಟಾದ ಇ-ಸಿಗರೇಟ್ ಹಾವಳಿ
ಬೆಂಗಳೂರು, ಅಕ್ಟೋಬರ್, 25: ಕೆಲವು ತಿಂಗಳ ಹಿಂದೆ ರಾಜ್ಯದಲ್ಲಿ ಇ-ಸಿಗರೇಟ್ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಸಹ ಅಕ್ರಮವಾಗಿ ಇ-ಸಿಗರೇಟ್ ಮಾರಾಟ ದಂಧೆ ಜೋರಾಗಿ ನಡೆಯುತ್ತಿದೆ.
ಯುವ ಸಮುದಾಯ ಹೆಚ್ಚಾಗಿ ಇ-ಸಿಗರೇಟ್ ಅನ್ನು ಆನ್ ಲೈನ್ ನಲ್ಲೇ ಹೆಚ್ಚು ಖರೀದಿ ಮಾಡುತ್ತಿದ್ದು, ಇ-ಸಿಗರೇಟ್ ಜಾಲವನ್ನು ಬೇಧಿಸುವುದು ಪೊಲೀಸರಿಗೆ ಕಗ್ಗಂಟಾಗಿ ಪರಿಣಮಿಸಿದೆ.

ಮುಖ್ಯವಾಗಿ ಕಾಲೇಜು ವಿದ್ಯಾರ್ಥಿಗಳು ಸಿ-ಸಿಗರೇಟ್ ಸೇವನೆಗೆ ಹೆಚ್ಚು ಒಲವು ತೋರುತ್ತಿದ್ದು, ಇದರಿಂದ ಮಾದಕ ವ್ಯಸನಿಗಳಾಗುವ ಸಾಧ್ಯತೆ ಇದೆ. ಬೆಂಗಳೂರು, ಮೈಸೂರು, ಉಡುಪಿಯಲ್ಲಿ ಹೆಚ್ಚಾಗಿ ಇ-ಸಿಗರೇಟ್ ಬಳಸಲಾಗುತ್ತಿದೆ.
ಗಾಂಜಾ, ಹಶಿಶ್, ಲಿಸರ್ಜಿಕ್ ದ್ರವ, ಮತ್ತು ಡೈಥಲಮೈಡ್ ನಂತಹ ಮಾದಕ ಪದಾರ್ಥಗಳು ಇ-ಸಿಗರೇಟ್ ಗಳಲ್ಲಿ ಇದ್ದು ಇದನ್ನು ಸೇವಿಸುವ ಯುವಕರು ಹೆಚ್ಚು ಉದ್ರೇಕಕ್ಕೆ ಒಳಾಗುಗವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ದರಿಂದ ಇ-ಸಿಗರೇಟ್ ಮಾರಾಟ ಜಾಲವನ್ನು ಬೇಧಿಸಿ ತಡೆಯಬೇಕಾದ ಅನಿವಾರ್ಯತೆ ಇದೆ ಎಂದು ಹೇಳಲಾಗಿದೆ.
ಮುಖ್ಯವಾಗಿ ಇ-ಸಿಗೇಟ್ ಸೇವನೆ ಮಾಡುವಾಗ ಹೊಗೆ ಬಂದರೂ ಸಹ ಭಸ್ಮ ಬರುವುದಿಲ್ಲವಾದ್ದರಿಂದ . ಈ ಕಾರಣಕ್ಕಾಗಿಯೇ ಯುವಕರು ಹೆಚ್ಚಾಗಿ ಇ-ಸಿಗರೇಟ್ ಸೇವನೆಗೆ ಹೆಚ್ಚು ಒಲವು ತೋರಿಸುತ್ತಿದ್ದಾರೆ ಎನ್ನಲಾಗಿದೆ.
ಈ ಕುರಿತಂತೆ ಎಡಿಜಿಪಿ ಭಾಸ್ಕರ್ ರಾವ್ ಅವರು ಪ್ರತಿಕ್ರಿಯೆ ನೀಡಿದ್ದು, "ಇ-ಸಿಗರೇಟ್ ಸೇವನೆಯಿಂದ ಪ್ರಮುಖವಾಗಿ ಯುವಕರು ಮಾದಕ ಪದಾರ್ಥಗಳಿಗೆ ದಾಸರಾಗುವ ಸಾಧ್ಯತೆ ಇದ್ದು, ಇದು ನಮ್ಮ ಆರೋಗ್ಯದ ಮೇಲೆ ದೀರ್ಘಕಾಲಿಕ ಪರಿಣಾಮ ತೋರಲಿದೆ" ಎಂದು ಹೇಳಿದ್ದಾರೆ.
ಈಗಾಗಲೇ ವಿದೇಶಗಳಲ್ಲಿ ಇ-ಸಿಗರೇಟ್ ಸೇವನೆಯ ದುಷ್ಪರಿಣಾಮಗಳು ಬೆಳಕಿಗೆ ಬರುತ್ತಿದ್ದು, ಭಾರತ ಮತ್ತು ಕರ್ನಾಟಕಕ್ಕೂ ಇದರ ಜಾಲ ವಿಸ್ತರಿಸುತ್ತಿರುವುದು ವಿಷಾದಕರ. ಹೆಚ್ಚಾಗಿ ಆನ್ ಲೈನ್ ನಲ್ಲೇ ಖರೀದಿ ಮಾಡಲಾಗುತ್ತಿದ್ದು, ಕೊರಿಯಲ್ ಮೂಲಕ ಯುವಕರ ಕೈ ಸೇರುತ್ತಿರುವುದರಿಂದ ಬಳಕೆ ತಡೆಗಟ್ಟುವುದು ಕಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.
ಈ ವಿಷಯವನ್ನು ರಾಜ್ಯ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಇ-ಸಿಗರೇಟ್ ಮಾರಾಟ ಜಾಲತಾಣಗಳನ್ನು ಪತ್ತೆ ಹಚ್ಚಿ ಮಾರಾಟ ತಡೆಯುವ ಕುರಿತು ಶ್ರಮಿಸುತ್ತಿದೆ ಎಂದು ಹೇಳಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
MT Aqua Titan: ಮಂಗಳೂರು ಕರಾವಳಿಗೆ ಆಗಮಿಸಿದ ರಷ್ಯಾದ ಕಚ್ಚಾ ತೈಲ ಹೊತ್ತ ಬೃಹತ್ ನೌಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications