‘ಈ ಹೊತ್ತಿಗೆ ಪ್ರಶಸ್ತಿ’ಗಾಗಿ ಅಪ್ರಕಟಿತ ಕಥಾ, ಕವನ ಸಂಕಲನ ಆಹ್ವಾನ
ಬೆಂಗಳೂರು, ಅ.29: 2022-23ನೇ ಸಾಲಿನ 'ಈ ಹೊತ್ತಿಗೆ ಪ್ರಶಸ್ತಿ'ಗಾಗಿ ಕನ್ನಡದ ಅಪ್ರಕಟಿತ ಕಥಾ ಸಂಕಲನಗಳನ್ನು ಮತ್ತು ಅಪ್ರಕಟಿತ ಕವನ ಸಂಕಲನಗಳನ್ನು ಆಹ್ವಾನಿಸಲಾಗಿದೆ.
ವಿಜೇತ ಕಥಾ ಸಂಕಲನ ಮತ್ತು ಕವನ ಸಂಕಲನಕ್ಕೆ ತಲಾ 10,000 (ಹತ್ತು ಸಾವಿರ) ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ನೀಡಲಾಗುತ್ತದೆ ಎಂದು ಟ್ರಸ್ಟ್ನ ಸಂಚಾಲಕರಾದ ಸಂಚಾಲಕರಾದ ಜಯಲಕ್ಷ್ಮಿ ಪಾಟೀಲ್ ಹೇಳಿದ್ದಾರೆ.
ನಿಯಮ, ನಿಬಂಧನೆಗಳು:
1. ಕಥೆಗಳು/ಕವನಗಳು ಸ್ವತಂತ್ರವಾಗಿರಬೇಕು. ಅನುವಾದಿತ ಕಥೆ/ಕವನಗಳಿರಕೂಡದು.
2. ಕಥಾ ಸಂಕಲನವು 8 ರಿಂದ 10 ಕಥೆಗಳನ್ನು ಒಳಗೊಂಡಿರಬೇಕು.
3. ಕವನ ಸಂಕಲನವು 35-40 ಕವನಗಳನ್ನು ಒಳಗೊಂಡಿರಬೇಕು.
4. ಕಂಪ್ಯೂಟರಿನಲ್ಲಿ ಟೈಪ್ ಮಾಡಿ, ಪ್ರಿಂಟ್ ತೆಗೆಸಿ ಬೈಂಡ್ ಮಾಡಿದ ಸಂಕಲನದ ಮೂರು ಪ್ರತಿಗಳನ್ನು ಈ ಹೊತ್ತಿಗೆಯ ಅಂಚೆ ವಿಳಾಸಕ್ಕೆ ಕಳುಹಿಸಿಕೊಡಬೇಕು.
5. ಕವಿಗಳು / ಕಥೆಗಾರರು ಪ್ರತ್ಯೇಕ ಹಾಳೆಯಲ್ಲಿ ತಮ್ಮ ಹೆಸರು, ಸಂಕಲನದ ಹೆಸರು, ಸಂಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಬರೆದಿರಬೇಕು. ಸಂಕಲನದ ಯಾವುದೇ ಪುಟಗಳಲ್ಲಿ ಲೇಖಕರ ಹೆಸರು ಇರಕೂಡದು.

6. ಪ್ರಶಸ್ತಿ ಘೋಷಣೆಯಾದ 30 ದಿನಗಳಲ್ಲಿ ಪ್ರಶಸ್ತಿ ಪಡೆದ ಸಂಕಲನವು ಮುದ್ರಣಗೊಳ್ಳಬೇಕು. ಕೃತಿ ಮುದ್ರಣಗೊಂಡರೆ ಮಾತ್ರ ಘೋಷಿತ ಬಹುಮಾನದ ಮೊತ್ತ ಹಾಗು ಪ್ರಶಸ್ತಿ ಫಲಕವು ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ಸಲ್ಲುತ್ತದೆ.
7. ಪ್ರಶಸ್ತಿ ಪಡೆದ ಕೃತಿಯನ್ನು ಮುದ್ರಿಸುವಾಗ ಮುಖಪುಟ ಹಾಗು ಪುಸ್ತಕದ ಒಳ ಪುಟದಲ್ಲಿ 'ಈ ಹೊತ್ತಿಗೆ (ಕಥಾ/ಕಾವ್ಯ) ಪ್ರಶಸ್ತಿ ವಿಜೇತ ಕೃತಿ' ಎಂದು ಮುದ್ರಿಸಿರಬೇಕು.
8. ಹಸ್ತಪ್ರತಿಗಳನ್ನು ಮರಳಿಸಲಾಗುವುದಿಲ್ಲವಾದ್ದರಿಂದ ನಿಮ್ಮ ಬಳಿ ಅದರ ಪ್ರತಿಯನ್ನು ಕಾಯ್ದಿರಿಸಿಕೊಳ್ಳಿ.
9. ನಿಮ್ಮ ಅಪ್ರಕಟಿತ ಕಥಾ ಸಂಕಲನ, ಕವನ ಸಂಕಲನ ನಮಗೆ ತಲುಪಲು ಕೊನೆಯ ದಿನಾಂಕ : 25 ನವೆಂಬರ್ 2022
ಸೂಚನೆ:
- ಈ ಹೊತ್ತಿಗೆಯ ತೀರ್ಮಾನವೇ ಅಂತಿಮ.
- 2023ರ ಮಾರ್ಚಲ್ಲಿ ನಡೆಯುವ ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಜಯಲಕ್ಷ್ಮಿ ಪಾಟೀಲ್ ಹೇಳಿದ್ದಾರೆ.
ಹಸ್ತಪ್ರತಿ ಕಳುಹಿಸಲು ವಿಳಾಸ
ಈ ಹೊತ್ತಿಗೆ,
#65 , ಮುಗುಳ್ನಗೆ, 3ನೇಯ ಅಡ್ಡರಸ್ತೆ ,
ಪಿ.ಎನ್.ಬಿ. ನಗರ, ಕೋಣನಕುಂಟೆ,
ಬೆಂಗಳೂರು - 560062
ಸಂಪರ್ಕ ಸಂಖ್ಯೆ: 9611782621
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications