E-Khata Good News: ಇ-ಖಾತಾ ವಿತರಣೆಗೆ ಸೇವಾ ಕೇಂದ್ರ ಆರಂಭ: ಜಿಬಿಎ
Bengaluru E-Khata: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಇ-ಖಾತಾ ತ್ವರಿತ ವಿಲೇವಾರಿಗಾಗಿ ಪಾಸ್ ಪೋರ್ಟ್ ಮಾದರಿಯಲ್ಲಿ 'ಸೇವಾ ಕೇಂದ್ರಗಳ" ಪ್ರಾರಂಭಿಸಲಾಗುವುದೆಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿನಾಥ್ ರವರು ತಿಳಿಸಿದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡಿರುವ ಕುರಿತು ಜಿಬಿಎ ಕೇಂದ್ರ ಕಛೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಇ-ಖಾತಾ ಪಡೆಯುವಲ್ಲಿ ನಾಗರಿಕರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದೆಂಬ ಉದ್ದೇಶದಿಂದ ಜಿಬಿಎ ಹೊಸದಾಗಿ ಪಾಸ್ ಪೋರ್ಟ್ ಮಾದರಿಯಲ್ಲಿ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದೆಂದು ಹೇಳಿದರು.

ಕಣ್ಗಾವಲು ತಂಡ ನಿಯೋಜನೆ
ಇ-ಖಾತಾ ವಿಚಾರದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಅಧಿಕಾರಿಗಳ ಮೇಲೆ ನಿಗಾವಗಿಸಲು 25 ಜನ ಅಧಿಕಾರಿ/ಸಿಬ್ಬಂದಿಗಳನ್ನೊಳಗೊಂಡ ತಂಡಗಳನ್ನು ಒಳಗೊಂಡ ಕಣ್ಗಾವಲು ತಂಡವನ್ನು ನಿಯೋಜನೆ ಮಾಡಲಾಗಿದೆ. ಅದರ ಮೂಲಕ ಕಾರಣಗಳಿಲ್ಲದೆ ತಿರಸ್ಕರಿಸಿದವರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಾಗುವುದೆಂದು ತಿಳಿಸಿದರು.
8 ಲಕ್ಷ ಇ-ಖಾತಾ ವಿತರಣೆ
ಜಿಬಿಎ ವ್ಯಾಪ್ತಿಯಲ್ಲಿ ಈಗಾಗಲೇ 8 ಲಕ್ಷ ಇ-ಖಾತಾ ಪಡೆದಿದ್ದಾರೆ. ಬೆಂಗಳೂರು ಒನ್ ಹಾಗೂ ಸುಮಾರು 1,000 ಸ್ವಯಂ ಸೇವಕರ ಮೂಲಕವೂ ಇ-ಖಾತಾ ಪಡೆಯಬಹುದಾಗಿದೆ. ನಾಗರಿಕರಿಗೆ ಪಾರದರ್ಶಕತೆ ಹಾಗೂ ಸುಗಮವಾಗಿ ಇ-ಖಾತಾ ನೀಡುವ ಸಲುವಾಗಿ ರೌಂಡ್ ರಾಬಿನ್ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಅದರಿಂದ ಕೆಲ ಸಮಸ್ಯೆಗಳಾಗಿತ್ತು. ಇದೀಗ ಆ ವ್ಯವಸ್ಥೆಯನ್ನು ತೆಗೆದುಹಾಗಿ ಬೇರೆ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
22,539 ಗುಂಡಿಗಳ ದುರಸ್ತಿ
ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ನಗರದಾದ್ಯಂತ ರಸ್ತೆ ಗುಂಡಿಗಳನ್ನು ಯುದ್ಧೋಪಾದಿಯಲ್ಲಿ ಮುಚ್ಚಲಾಗುತ್ತಿದ್ದು, ಈವರೆಗೆ 22,539 ಗುಂಡಿಗಳನ್ನು ಮುಚ್ಚಲಾಗಿದೆ. ಮಳೆ ನಿರಂತರವಾಗಿ ಬಂದ ಪರಿಣಾಮ ತಡವಾಗಿದ್ದು, ಮುಂದಿನ ವರ್ಷ ರಸ್ತೆಗುಂಡಿಗಳನ್ನು ನಿಯಂತ್ರಿಸುವ ಸಲುವಾಗಿ ಧೀರ್ಘಕಾಲಿಕ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ನಗರದಲ್ಲಿ 1,682 ಕಿ.ಮೀ ಆರ್ಟಿರಿಯಲ್ ಸಬ್ ಆರ್ಟಿಯಲ್ ರಸ್ತೆಗಳಿದ್ದು, ಸುಮಾರು 8 ವರ್ಷಗಳಿಂದ ಯಾವುದೇ ಅನುದಾನ ವ್ಯಯಿಸಿಲ್ಲ. ಈ ರಸ್ತೆಗಳನ್ನು ಅಭವೃದ್ಧಿಪಡಿಸಿದರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳು ಕಡಿಮೆಯಾಗಿ ಸಂಚಾರ ದಟ್ಟಣೆ ಕ್ರಮೇಣ ನಿಯಂತ್ರಣವಾಗಲಿದೆ ಎಂದು ಹೇಳಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications