E-Khata: ವಿಶೇಷ ಇ - ಖಾತಾ ಅಭಿಯಾನದಲ್ಲಿ ಭಾಗವಹಿಸಲು ಏನು ಮಾಡಬೇಕು, ಖಾತಾ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ!
E-Khata: ಇ - ಖಾತಾಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಭರ್ಜರಿ ಗುಡ್ನ್ಯೂಸ್ ನೀಡಿದೆ. ಜುಲೈ - 1ರಿಂದ ಮನೆ - ಮನೆಗೆ ಇ - ಖಾತಾ ನೀಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಬೆಂಗಳೂರಿನಲ್ಲಿ ಬೃಹತ್ ಇ ಖಾತಾ ವಿಶೇಷ ಅಭಿಯಾನವನ್ನು ರಾಜ್ಯ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಬೆಂಗಳೂರಿನ ಆಸ್ತಿದಾರರು ಇ - ಖಾತಾ ಮಾಡಿಸಿಕೊಳ್ಳಬಹುದಾಗಿದೆ.
ಕರ್ನಾಟಕ ಸರ್ಕಾರವು ನಿಮ್ಮ ಆಸ್ತಿ ನಮ್ಮ ಗ್ಯಾರಂಟಿ ಎನ್ನುವ ಪರಿಕಲ್ಪನೆಯೊಂದಿ ಇ - ಖಾತಾ ಅಭಿಯಾನವನ್ನು ಹಮ್ಮಿಕೊಂಡಿದೆ. ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಿಂದಲೂ ಆಸ್ತಿಗಳಿಗೆ ಇ - ಖಾತಾ ನೀಡಲಾಗುತ್ತಿದೆ. ಇ-ಖಾತಾ ಪಡೆಯಿರಿ ನಿಮ್ಮ ಆಸ್ತಿಯನ್ನು ರಕ್ಷಿಸಿಕೊಳ್ಳಿ ಎಂದು ರಾಜ್ಯ ಸರ್ಕಾರ ಹೇಳಿದೆ. ವಿಶೇಷ ಇ-ಖಾತಾ ಆಂದೋಲನ 2025ರ ಜುಲೈ 1 ರಿಂದ 31 ರವರೆಗೆ ನಡೆಯಲಿದೆ.

ಬೆಂಗಳೂರಿನಲ್ಲಿ ನಡೆಯುವ ಇ-ಖಾತಾ ಅಭಿಯಾನದಲ್ಲಿ ನೀವೂ ಪಾಲ್ಗೊಳ್ಳಬಹುದು.
ಜನಸೇವಕರಿಂದ ಸೇವೆ ಪಡೆಯಲು ಕರೆ ಮಾಡಿ 080-4920 3888 ಅಥವಾ https://janasevaka.karnataka.gov.in
ಜನಸೇವಕನಿಗೆ ಪಾವತಿಸಬೇಕಾದ ಮೊತ್ತದ ವಿವರ
* ಇ-ಖಾತಾ ಅರ್ಜಿಗೆ: 45 ರೂಪಾಯಿ
* ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು (ಪ್ರತಿ ಪುಟಕ್ಕೆ): 5 ರೂಪಾಯಿ
ಇ - ಖಾತಾಗೆ ಈ ದಾಖಲೆಗಳು ಇರಲಿ
• ಮಾಲೀಕರ ಆಧಾರ್
• ಈ ಆಸ್ತಿ ತೆರಿಗೆ ಎಸ್.ಎ.ಎಸ್. ಅರ್ಜಿ ಸಂಖ್ಯೆ
• ಸ್ವತ್ತಿನ ಕ್ರಯ/ನೋಂದಾಯಿತ ಪತ್ರ ಸಂಖ್ಯೆ
(ಕಾವೇರಿ ತಂತ್ರಾಂಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುತ್ತದೆ)
• ಬೆಸ್ಕಾಂ ಖಾತೆ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ)
• ಸ್ವತ್ತಿನ ಛಾಯಾಚಿತ್ರ
ವೆಬ್ಸೈಟ್ ಮೂಲಕ: ಇನ್ನು ನೀವು ಇ - ಖಾತಾವನ್ನು ಮನೆಯಲ್ಲೇ ಕುಳಿತು ಸಹ ಪಡೆದುಕೊಳ್ಳಬಹುದಾಗಿದೆ. ಮನೆಯಲ್ಲೇ ಕುಳಿತು ಆನ್ಲೈನ್ ಮೂಲಕ ಅಂತಿಮ ಇ-ಖಾತಾವನ್ನು ಪಡೆದುಕೊಳ್ಳಲು ಸಾಧ್ಯವಿದೆ. https://bbmpeasthi.karnataka.gov.in ನಿಂದಲೂ ಪಡೆದುಕೊಳ್ಳಬಹುದಾಗಿದೆ.
ಒಂದು ತಿಂಗಳು ವಿಶೇಷ ಅಭಿಯಾನ: ಇನ್ನು ಬೆಂಗಳೂರಿನಲ್ಲಿ ಎಲ್ಲಾ ಆಸ್ತಿದಾರರಿಗೂ ಇ - ಖಾತಾ ಸೌಲಭ್ಯ ನೀಡುವ ಉದ್ದೇಶದಿಂದ ಇ ಖಾತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜುಲೈ ತಿಂಗಳು ಪೂರ್ತಿ ಈ ಅಭಿಯಾನ ನಡೆಯಲಿದ್ದು. ಆಸ್ತಿದಾರರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications