E-Khata: ಜುಲೈ 1ರಿಂದ ಇ-ಖಾತಾ ಕಡ್ಡಾಯ: ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ
ಬೆಂಗಳೂರು, ಜೂನ್ 15: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಕರಡು ಇ-ಖಾತಾಗಳಿವೆ. ಸದ್ಯ ಐದು ಲಕ್ಷದಷ್ಟು ಇ-ಖಾತಾವನ್ನು ಆಸ್ತಿ ಮಾಲೀಕರಿಗೆ ವಿತರಣೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಇ- ಖಾತಾ ಕಡ್ಡಾಯಗೊಳಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಮುಂದಿನ ತಿಂಗಳ ಜುಲೈ 1ರಿಂದ ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ತಮ್ಮ ಕಟ್ಟಡ ನಕ್ಷೆ, ಮಂಜೂರಾತಿ ಮಾಡಿಕೊಡಲು ಪಾಲಿಕೆಗೆ ಅರ್ಜಿ ಸಲ್ಲಿಸಿದರೆ ಅಂತವರು ಇ-ಖಾತಾ ಹೊಂದಿರಬೇಕು. ಇಲ್ಲವಾದಲ್ಲಿ ಸೂಕ್ತ ದಾಖಲೆಗಳ ಸಮೇತ ಇ-ಖಾತಾ ಪಡೆಯುವಂತೆ ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಇ-ಖಾತೆ ಪಡೆಯುವಂತೆ ಜನರಿಗೆ ಕರೆ ನೀಡಿದ್ದಾರೆ. ಇಲ್ಲವಾದರೆ ಮಂಜೂರಾತಿ ಸಿಗುವುದು ಅನುಮಾನ ಎನ್ನಲಾಗಿದೆ.

ನಿಮ್ಮಲ್ಲಿ ಇ-ಖಾತಾ ಇಲ್ಲದಿದ್ದರೆ ಚಿಂತೆ ಬೇಡ. ಪಡೆಯುವುದು ಮತ್ತಷ್ಟು ಸರಳ, ಸುಲಭವಾಗಿದೆ. ಕಟ್ಟಡ ಮಾಲೀಕರು ಸೂಕ್ತ ದಾಖಲೆಗಳೊಂದಿಗೆ ಆನ್ಲೈನ್ನಲ್ಲಿ https://bbmp.karnataka.gov.in/newkhata/ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿಬೇಕು. ನಿಗದಿತ ಶುಲ್ಕ ಪಾವತಿಸಿದರೆ ಎರಡನೇ ದಿನದಲ್ಲಿ ನೀವು ಅಂತಿಮ ಇ- ಖಾತಾವನ್ನು ಪಡೆದುಕೊಳ್ಳುತ್ತೀರಿ ಎಂದು ಅವರು ಡಿಕೆ ಶಿವಕುಮಾರ್ ವಿವರಿಸಿದ್ದಾರೆ.
ಮೊದಲು ಇ-ಖಾತಾವನ್ನು ಬೆಂಗಳೂರು ಒನ್, ಬಿಬಿಎಂಪಿ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಿ ಪಡೆಯಬೇಕಿತ್ತು. ಇದೀಗ ನೀವು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ಪಡೆಯಬಹದು. ಸಾಲದೆಂಬಂತೆ ಇತ್ತೀಚೆಗೆ ಬಿಬಿಎಂಪಿಯು 'ಜನಸೇವಕ' ವ್ಯವಸ್ಥೆ ಜಾರಿಗೆ ತಂದಿದೆ. ನೀವು ಆನ್ಲೈನ್ನಲ್ಲಿ ಇಲ್ಲವೇ ಜನಸೇವಕ ಸಹಾಯವಾಣಿಗೆ ಕರೆ ಮಾಡಿದರೆ ಮನೆಗೆ ಬಾಗಲಿಗೆ ಬಂದು ಎರಡೇ ದಿನದಲ್ಲಿ ನಿಮಗೆ ಅಂತಿಮ ಇ-ಖಾತಾ ನೀಡುತ್ತಾರೆ.
ಇ-ಖಾತೆಗೆ ಈ ದಾಖಲೆಗಳಿದ್ದರೆ ಸಾಕು
ಇನ್ನು ಯಾರೆಲ್ಲ ಈ ಖಾತಾ ಪಡೆದಿಲ್ಲವೋ ಅಂತಹ ಕಟ್ಟಡ ಮಾಲೀಕರು 'ಆಧಾರ್ ಕಾರ್ಡ್, ಆಸ್ತಿ ತೆರಿಗೆ ಎಸ್.ಎ.ಎಸ್ ಸಂಖ್ಯೆ, ಮಾರಾಟ ಅಥವಾ ನೋಂದಾಯಿತ ಪತ್ರ, ಸ್ವತ್ತಿನ ಛಾಯಾಚಿತ್ರ'' ಈ ಎಲ್ಲ ದಾಖಲೆಗಳ ಮೂಲಕ https://bbmp.karnataka.gov.in/newkhata/ ಈ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಇಲ್ಲವೇ 080-4920-3888 ಗೆ ಕರೆ ಮಾಡಿ (ಜನಸೇವಕ) ಮನೆಯಲ್ಲಿಯೇ ಕುಳಿತ ಇ-ಖಾತಾ ಪಡೆಯಬಹುದು.
ಬಿಬಿಎಂಪಿ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದೆ. ಆದರೆ ಅದನ್ನು ಪರಿಣಾಮಕಾರಿಯಾಗಿ ವಿತರಣೆ ಗುರಿ ಹೊಂದಿದರೂ ಸಹಿತ, ನಿರಂತರ ಜಾಗೃತಿ ಕಾರ್ಯಕ್ರಮಗಳ ಮಧ್ಯೆ ಇ-ಖಾತಾ ಕೇವಲ ಐದು ಲಕ್ಷ ವಿತರಣೆ ಆಗಿವೆ. ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವಂತೆ ಬಿಬಿಎಂಪಿ ಕರೆ ನೀಡಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Bengaluru Rent Crisis: ಬೆಂಗಳೂರಲ್ಲಿ ಬಾಡಿಗೆ ಮನೆ ಡಿಮ್ಯಾಂಡ್ ಬಗ್ಗೆ ಯುವತಿ ವಿಡಿಯೋ ವೈರಲ್ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications