E Khata: ಇ ಖಾತಾ ಇಲ್ಲದೆ ರಿಜಿಸ್ಟ್ರೇಷನ್ ಅಕ್ರಮಗಳಿಗೆ ಬ್ರೇಕ್: 5 ಅಧಿಕಾರಿಗಳ ತಲೆದಂಡ
ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿಗಳ ಸಂರಕ್ಷಣೆ ಮಾಡುವ ಉದ್ದೇಶದಿಂದ ಪರಿಚಯಿಸಲಾಗಿರುವ ಇ ಖಾತಾ ವಿಚಾರದಲ್ಲಿ ಮೊದಲು ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿ ಬಂದಿತ್ತು. ಆಸ್ತಿಗಳ ಮಾರಾಟ ಮತ್ತು ಖರೀದಿ ವಿಚಾರದಲ್ಲಿ ಮೋಸ ಆಗುವುದನ್ನು ತಪ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಪರಿಚಯಿಸಲಾಗಿದೆ. ಆದರೆ ಇದೀಗ ಆಸ್ತಿ ರಿಜಿಸ್ಟ್ರೇಷನ್ ವೇಳೆಯೇ ಇ ಖಾತಾ ವಿಚಾರದಲ್ಲಿ ಅಕ್ರಮಗಳು ನಡೆದಿದ್ದು, ಈ ಹಗರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಏನಿದು ಇ ಖಾತಾ ಅಕ್ರಮ ಎನ್ನುವ ವಿವರ ಇಲ್ಲಿದೆ.
ಕರ್ನಾಟಕ ಸರ್ಕಾರವು ಒಂದು ವರ್ಷದ ಮುನ್ನವಷ್ಟೇ ಪ್ರಾಪರ್ಟಿಗಳಿಗೆ ಡಿಜಿಟಲ್ ಆಸ್ತಿ ವಿವರದ ಇ ಖಾತಾ ಪರಿಚಯಿಸಿದೆ. ಮೊದಲಿಗೆ ಇದನ್ನು ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಪರಿಚಯಿಸಲಾಗಿತ್ತು. ಇದಾದ ನಂತರ ಬೆಂಗಳೂರಿನಿಂದ ರಾಜ್ಯದಾದ್ಯಂತ ವಿಸ್ತರಿಸಲಾಯಿತು. ಆದರೆ ಇ ಖಾತಾಗೆ ಸಂಬಂಧಿಸಿದ ಗೊಂದಲ ಹಾಗೂ ದೂರುಗಳು ಇಂದಿಗೂ ಮುಂದುವರಿದಿದೆ.

ಬೆಂಗಳೂರಿನಲ್ಲಿ ಆಸ್ತಿ ನೋಂದಣಿ ಸಾಫ್ಟ್ವೇರ್ ದುರುಪಯೋಗಪಡಿಸಿಕೊಂಡಿರುವ ಆರೋಪ ಇದೀಗ ಕೇಳಿ ಬಂದಿದೆ. ಅದರಲ್ಲಿ ಮುಖ್ಯವಾಗಿ ಇ ಖಾತಾ ಇಲ್ಲದೆ ರಿಜಿಸ್ಟ್ರೇಷನ್ ಮಾಡಲಾಗಿದ್ದು ಸರ್ಕಾರವು ಕಾನೂನು ಕ್ರಮ ತೆಗೆದುಕೊಂಡಿದೆ ಎಂದು DH ವರದಿ ಮಾಡಿದೆ.
ಬೆಂಗಳೂರಿನಲ್ಲಿ ಕಡ್ಡಾಯ ಇ-ಖಾತಾ ಪರಿಶೀಲನಾ ನಿಯಮಗಳನ್ನು ಉಲ್ಲಂಘಿಸಿ ಆಸ್ತಿಗಳನ್ನು ನೋಂದಾಯಿಸಲು ಕಾವೇರಿ 2.0 ಸಾಫ್ಟ್ವೇರ್ ತಂತ್ರಾಂಶವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಮುದ್ರಾಂಕ ಮತ್ತು ನೋಂದಣಿ (Stamps and Registration)ಇಲಾಖೆಯು 5 ಜನ ಸಬ್-ರಿಜಿಸ್ಟ್ರಾರ್ ಆಫೀಸರ್ಗಳನ್ನು ಅಮಾನತುಗೊಳಿಸಿದೆ. ಆಸ್ತಿಗಳ ನೋಂದಣಿಯಲ್ಲಿ ಅಕ್ರಮಗಳು ನಡೆದಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ಬಹಿರಂಗವಾದ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇ ಖಾತಾ ಇಲ್ಲದೆ ರಿಜಿಸ್ಟ್ರೇಷನ್
ಇನ್ನು ಕರ್ನಾಟಕ ಸರ್ಕಾರವು ಆಸ್ತಿಗಳ ಪರಿಶೀಲನೆ ಹಾಗೂ ರಿಜಿಸ್ಟ್ರೇಷನ್ಗೆ ಇ ಖಾತಾ ಕಡ್ಡಾಯ ಮಾಡಿದೆ. ಆದರೆ ಇ ಖಾತಾ ಇಲ್ಲದೆಯೂ ಕೆಲವು ಕಡೆಗಳಲ್ಲಿ ರಿಜಿಸ್ಟ್ರೇಷನ್ ನಡೆದಿರುವ ಆರೋಪ ಕೇಳಿ ಬಂದಿದೆ. ಕಾವೇರಿ 2.0ನಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ ಎಂದು ನೋಂದಣಿ ಮಹಾನಿರ್ದೇಶಕರು (ಐಜಿಆರ್) ತಿಳಿಸಿದ್ದಾರೆ.
ವಿಶೇಷವಾಗಿ ಆಸ್ತಿ ನೋಂದಣಿಗಳು ನ್ಯಾಯಾಲಯದ ಆದೇಶಗಳಿಗೆ ಒಳಪಟ್ಟಿದ್ದರೆ ಈ ವಿನಾಯಿತಿ ಅನುಸರಿಸಬಹುದಾಗಿದೆ. ಆದರೆ, ಸರ್ಜಾಪುರ ಸಬ್-ರಿಜಿಸ್ಟ್ರಾರ್ ಕಚೇರಿಯಲ್ಲಿ ಯಾವುದೇ ನ್ಯಾಯಾಲಯದ ಆದೇಶಗಳು ಇಲ್ಲದಿದ್ದರೂ ಸಹ ಆಸ್ತಿ ಮಾರಾಟ ಪತ್ರಗಳನ್ನು ನೋಂದಾಯಿಸಲು ಈ ಆಯ್ಕೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
ಆಸ್ತಿ ಮಾರಾಟ ಪತ್ರಗಳನ್ನು ನೋಂದಾಯಿಸುವ ಸಂದರ್ಭದಲ್ಲಿ ಇ ಖಾತಾ ಪರಿಶೀಲನೆ ಮಾಡುವುದು ತಪ್ಪಿಸಲಾಗಿದೆ. ಅಧಿಕಾರಿಗಳು ಸರ್ಜಾಪುರ ಸಬ್-ರಿಜಿಸ್ಟ್ರಾರ್ ರವಿ ಸಂಕನ ಗೌಡ ಅವರನ್ನು ತಕ್ಷಣ ಅಮಾನತುಗೊಳಿಸಲಾಗಿದೆ.
ಬಾಣಸವಾಡಿ, ವರ್ತೂರು ಮತ್ತು ಹಲಸೂರು ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇದೇ ರೀತಿಯ ಇ ಖಾತಾ ಪರಿಶೀಲನೆ ಉಲ್ಲಂಘನೆಗಳು ಆಗಿವೆ ಎಂದು ಹೇಳಲಾಗಿದೆ. ಇಲಾಖೆಯು ಇಲಾಖಾ ವಿಚಾರಣೆ ಬಾಕಿ ಇರುವ ನಾಲ್ವರು ಸಬ್-ರಿಜಿಸ್ಟ್ರಾರ್ಗಳನ್ನು ಅಮಾನತುಗೊಳಿಸಿದೆ. ಒಬ್ಬರು ನಿವೃತ್ತರಾಗಿದ್ದಾರೆ. ಅಮಾನತುಗೊಂಡ ಅಧಿಕಾರಿಗಳ ವಿವರ ಈ ರೀತಿ ಇದೆ ಎನ್ ಸತೀಶ್ ಕುಮಾರ್, ಶ್ರೀಧರ್, ಗಿರೀಶ್ ಚಂದ್ರ ಹಾಗೂ ಆರ್ ಪ್ರಭಾವತಿ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications