Electronic Waste: ಬೆಂಗಳೂರು ಇ-ತ್ಯಾಜ್ಯ ವಿಲೇವಾರಿಗೆ ಸರ್ಕಾರ ಕ್ರಮ: ತಯಾರಿಕರಿಗೆ ನೋಂದಣಿಗೆ ಸೂಚನೆ
ಬೆಂಗಳೂರು, ಫೆಬ್ರವರಿ 22: ಭಾರತದಲ್ಲಿ ಸಿಲಿಕಾನ್ ಸಿಟಿ ಎಂದು ಖ್ಯಾತಿ ಪಡೆದಿರುವ ಉದ್ಯಾನ ನಗರಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಸ್ತುಗಳ ಬಳಕೆಯು ಗಣನೀಯವಾಗಿ ಹೆಚ್ಚುತ್ತಿದೆ. ಇದರ ಬೆನ್ನಲ್ಲೆ ಇ-ತ್ಯಾಜ್ಯವು ಹೆಚ್ಚುತ್ತಿದ್ದು, ಭವಿಷ್ಯದಲ್ಲಿ ಅದರ ವಿಲೇವಾರಿಗೆ ತೊಂದರೆ ಆಗದಂತೆ ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಳ್ಳುತ್ತಿದೆ.
ಹೌದು, ದೇಶದ ತಂತ್ರಜ್ಞಾನದ ರಾಜಧಾನಿ ಆಗಿರುವ ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ತ್ಯಾಜ್ಯವು ದಿನೇ ದಿನೆ ಹೆಚ್ಚುತ್ತಿದೆ. ಇದನ್ನು ಸ್ವಚ್ಛಗೊಳಿಸುವುದು ಮತ್ತು ನಗರದಾದ್ಯಂತ ಇ-ತ್ಯಾಜ್ಯ ವಿಲೇವಾರಿ ಸುಗಮಗೊಳಿಸಬೇಕಿದೆ. ಈ ಸಂಬಂಧ ರಾಜ್ಯ ಅರಣ್ಯ, ಪರಿಸರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಎಲೆಕ್ಟ್ರಾನಿಕ್ ಉಪಕರಣ ತಯಾರಿಸುವ ಎಲ್ಲ ತಯಾರಕರನ್ನು ವಿಸ್ತೃತ ಉತ್ಪಾದಕರ ಜವಾಬ್ದಾರಿ (EPR)ಗೆ ನೋಂದಾಯಿಸಲು ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಇ-ತ್ಯಾಜ್ಯ ವಿಲೇವಾರಿ ನಿಯಮ ಪಾಲಿಸಬೇಕು
ಈ ಕುರಿತು ಬೆಂಗಳೂರಿನಲ್ಲಿ ಬುಧವಾರ ಅರಣ್ಯ ಸಚಿವರು, ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ವಸ್ತು ತಯಾರಕರು, ನವೀಕರಣಕಾರರು, ಮರುಬಳಕೆದಾರರು ಮತ್ತು ಇ-ತ್ಯಾಜ್ಯ ಸಂಸ್ಕರಣಾ ಏಜೆನ್ಸಿಗಳ ಜತೆಗೆ ಸಮಾಲೋಚನಾ ಸಭೆ ನಡೆಸಿದರು. ಇದೇ ವೇಳೆ ಇ-ತ್ಯಾಜ್ಯ ವಿಲೇವಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಯಾ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ನಮ್ಮ ಸುತ್ತಮುತ್ತಲಿನ ಪರಿಸರ, ಪ್ರಕೃತಿ ಸೇರಿದಂತೆ ಇಡೀ ಭೂಮಿಯೇ ಮನುಕುಲಕ್ಕೆ ಕೊಡುಗೆಯಾಗಿದೆ ಸಿಕ್ಕಿದೆ. ಇಂತಹ ಅತ್ಯದ್ಬೂತ ಕೊಡುಗೆಯನ್ನು ನಾವು ಭೂಕುಸಿತವಾಗಿ ಪರಿವರ್ತಿಸಬಾರದು. ಪರಿಸರಕ್ಕೆ ಇ-ತ್ಯಾಜ್ಯ ಅಪಾಯಕಾರಿಯಾಗಿದೆ. ಇದರ ಸ್ವರೂಪವು ಆ ಮಟ್ಟಿನದ್ದಾಗಿದೆ. ಹೀಗಾಗಿ ಭವಿಷ್ಯದ ಪೀಳಿಗೆಯ ಆರೋಗ್ಯ ಮತ್ತು ಯೋಗಕ್ಷೇಮವನ್ನು ಗಮನದಲ್ಲಿಟ್ಟುಕೊಂಡು ಇ-ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸಬೇಕು ಮತ್ತು ಮರುಬಳಕೆ ಮಾಡಬೇಕು ಎಂದು ಅವರು ಹೇಳಿದರು.
ಕರ್ನಾಟಕದಿಂದ 0.8 MT ಇ-ತ್ಯಾಜ್ಯ ಉತ್ಪಾದನೆ
ಸದ್ಯ ಉತ್ಪನ್ನಗಳ ಮರುಬಳಕೆಯ ಮೇಲೆ ನಮ್ಮ ಗಮನ ಕೇಂದ್ರೀಕರಿಸುತ್ತದೆ ಎಂದು ಈಶ್ವರ್ ಖಂಡ್ರೆ ಅವರು ಪ್ರತಿನಿಧಿಗಳಿಗೆ ತಿಳಿಸಿದರು. ಭಾರತದಲ್ಲಿ ವಾರ್ಷಿಕವಾಗಿ 3.8 ಮಿಲಿಯನ್ ಮೆಟ್ರಿಕ್ ಟನ್ ಇ-ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಇದಕ್ಕೆ ಕರ್ನಾಟಕ ರಾಜ್ಯವು 0.8 ಮಿಲಿಯನ್ ಮೆಟ್ರಿಕ್ ಇ-ತ್ಯಾಜ್ಯವನ್ನು ಕೊಡುಗೆಯಾಗಿ ನೀಡುತ್ತದೆ.

ಈ ಮೂಲಕ ಕರ್ನಾಟಕ ಅತ್ಯಧಿಕ ಇ-ತ್ಯಾಜ್ಯ ಉತ್ಪಾದಿಸುವ ಮೂರನೇ ರಾಜ್ಯವಾಗಿದೆ. ಬೆಂಗಳೂರಿನ ಇ-ತ್ಯಾಜ್ಯವನ್ನು ನಿರ್ವಹಿಸಲು ಸಜ್ಜಾಗುವ ಮುನ್ನ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು, ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ಅವರು ಹೇಳಿದರು.
1.11 ಲಕ್ಷ MT ಇ-ತ್ಯಾಜ್ಯ ಮರುಬಳಕೆ
ಕರ್ನಾಟಕ ರಾಜ್ಯವು ಪ್ರಸ್ತುತದಲ್ಲಿ ಸುಮಾರು 108 ಇ-ತ್ಯಾಜ್ಯ ಸಂಸ್ಕರಣಾ ಕೇಂದ್ರಗಳನ್ನು ಹೊಂದಿದೆ. 2019-20ರಲ್ಲಿ ಒಟ್ಟು 44,240 ಮೆಟ್ರಿಕ್ ಟನ್ ಹಾಗೂ 2020-21 ರಲ್ಲಿ ಒಟ್ಟು 95,175 ಮೆಟ್ರಿಕ್ ಟನ್ ಇ-ತ್ಯಾಜ್ಯವನ್ನು ಮರುಬಳಕೆ ಮಾಡಲಾಗಿದೆ. 2021-22 ಅವಧಿಯಲ್ಲಿ ಈ ಮರುಬಳಕೆ 1.11 ಲಕ್ಷ ಮೆಟ್ರಿಕ್ ಟನ್ಗೆ ಏರಿಕೆ ಆಗಿದೆ.
ಭಾರತದಲ್ಲಿ ತಾಂತ್ರಿಕವಾಗಿಯು ಹೆಸರು ಮಾಡಿರುವ ಕರ್ನಾಟಕ ರಾಜಧಾನಿಯಾಗಿರುವ ಬೆಂಗಳೂರು ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಯಲ್ಲಿ ತೀವ್ರ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. ನಾವು ಈ ಎಲೆಕ್ಟ್ರಾನಿಕ್ ವಸ್ತುಗಳನ್ನು ನಿರ್ವಹಿಸದಿದ್ದರೆ, ಭವಿಷ್ಯದಲ್ಲಿ ಇದು ಮಾನವ ಕುಲ ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಭೀರುವ ಸಾಧ್ಯತೆ ಇದೆ ಎಂದು ಅವರು ವಿವರಿಸಿದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು












Click it and Unblock the Notifications