ಈ ಬಾರಿ ದೇಶದಲ್ಲಿ ಸಾಮಾನ್ಯ ಮಾನ್ಸೂನ್ ಮುನ್ಸೂಚನೆ
ಬೆಂಗಳೂರು, ಮಾರ್ಚ್ 26: ಈ ಬಾರಿ ದೇಶದಲ್ಲಿ ಸಾಮಾನ್ಯ ಮಾನ್ಸೂನ್ ಆಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಇತ್ತೀಚೆಗೆ ಭಾರತೀಯ ಹವಾಮಾನ ಇಲಾಖೆಯು ಎಲ್ ನಿನೋ ಹಾಗೂ ಲಾ ನಿನಾ ಮೇಲೆ ಸಮೀಕ್ಷೆ ನಡೆಸಿದೆ. ಅದರ ವರದಿ ಪ್ರಕಾರ ಈ ಬಾರಿ ಆಗಸ್ಟ್ ವರೆಗೆ ಸಾಮಾನ್ಯ ಮಾನ್ಸೂನ್ ನಿರೀಕ್ಷಿಸಬಹುದಾಗಿದೆ. ಎಲ್ ನಿನೋ ಎನ್ನುವುದು ಡಿಸೆಂಬರ್ ಅಂತ್ಯದ ಸುಮಾರಿಗೆ ಪೆಸಿಫಿಕ್ ಸಾಗರದ ಪೆರು ಮತ್ತು ಈಕ್ವೆಡಾರ್ ಗಳ ಬಳಿ ಪ್ರಾರಂಭವಾಗುವ ಒಂದು ಹವಾಮಾನ ವೈಪರೀತ್ಯದ ವಿದ್ಯಮಾನವಾಗಿದೆ.
ಸದ್ಯಕ್ಕೆ ಮುಂದಿನ ಮಾನ್ಸೂನ್ ಕುರಿತು ಸಂಪೂರ್ಣ ಮಾಹಿತಿಯನ್ನು ಈಗಲೇ ನೀಡಲು ಸಾಧ್ಯವಿಲ್ಲ. ಏಪ್ರಿಲ್ ಮಧ್ಯದಲ್ಲಿ ಇದರ ಬಗ್ಗೆ ಮಾಹಿತಿ ನೀಡಬಹುದು ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಕೆ.ಜೆ. ರಮೇಶ್ ತಿಳಿಸಿದ್ದಾರೆ.

ಮಾರ್ಚ್ ನಿಂದ ಮೇ ತಿಂಗಳಲ್ಲಿ ಕಾಣಿಸಿಕೊಳ್ಳುವ ತಾಪಮಾನವನ್ನು ಪರೀಕ್ಷಿಸಿ ಭಾರತೀಯ ಹವಾಮಾನ ಇಲಾಖೆ ಮುಂದಿನ ಮಾನ್ಸೂನ್ ಕುರಿತು ವರದಿ ನೀಡಬಲ್ಲದು. ಮಾರ್ಚ್ ನಿಂದ ಮೇ ತಿಂಗಳಲ್ಲಿ ಲಾ ನೀನಾ ಲಕ್ಷಣಗಳು ಕಂಡು ಬಂದರೆ ಸಮಾನ್ಯ ಮಳೆಯನ್ನು ನಿರೀಕ್ಷಿಸಬಹುದು ಯಾಕೆಂದರೆ ಎಲ್ ನಿನೋ ಹಾಗೂ ಲಾ ನಿನಾ ಪರಸ್ಪರ ವಿರೋಧ ವಿರುದ್ಧವಾಗಿರುತ್ತದೆ.
ಎಲ್ ನಿನೋ ಪದಕ್ಕೆ ಇಂದು ವಿಸ್ತೃತವಾದ ಅರ್ಥವಿದೆ. ಅದು ಕೇವಲ ಪೆರು-ಈಕ್ವೆಡಾರ್ ಸಾಗರದಾಚೆಯ ಮೇಲ್ಮೈ ತಾಪದ ಹೆಚ್ಚಳವನ್ನು ಸೂಚಿಸುವುದಿಲ್ಲ. ಇಡೀ ಪೆಸಿಫಿಕ್ ಸಾಗರದ ಮೇಲ್ಮೈ ತಾಪದ ಹೆಚ್ಚಳವನ್ನು ಅದು ಪರಿಗಣಿಸುತ್ತದೆ.
ಎಲ್ ನಿನೋ ತೀಕ್ಷ್ಣತೆಗಿಂತ ಅದು ಪೆಸಿಫಿಕ್ ಸಾಗರದ ಯಾವ ಭಾಗದಲ್ಲಿದೆ ಎಂಬುದು ಮುಖ್ಯವಾಗುತ್ತದೆ ಎಂದು ಅಮೆರಿಕದ ನ್ಯಾಷನಲ್ ಓಷನಿಕ್ ಅಂಡ್ ಅಟ್ಮಾಸ್ಫಿಯರಿಕ್ ಅಡ್ಮಿನಿಸ್ಟ್ರೇಷನ್ ಜಾಲತಾಣದಲ್ಲಿರುವ ಸಂಶೋಧನಾ ಲೇಖನವೊಂದು ತಿಳಿಸುತ್ತದೆ.
ಎಲ್ ನಿನೋ ವಿದ್ಯಮಾನ ಮಧ್ಯ ಪೆಸಿಫಿಕ್ ಸಾಗರದಲ್ಲಿ ಕಂಡು ಬಂದರೆ ಭಾರತದಲ್ಲಿ ಬರಗಾಲದ ಪರಿಸ್ಥಿತಿಯ ಸಾಧ್ಯತೆ ಇದೆ. ಅದರ ಬದಲಿಗೆ ಪೂರ್ವ ಪೆಸಿಫಿಕ್ ಸಾಗರದಲ್ಲಿ ಕಂಡು ಬರುವ ಎಲ್ ನಿನೋ ಭಾರತದ ಮುಂಗಾರು ಮಳೆಯನ್ನು ಸಹಜ ಸ್ಥಿತಿಯಲ್ಲಿಡುತ್ತದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಮಾರ್ಚ್ ಮೊದಲ ವಾರದಲ್ಲಿ ಯುಎಸ್ ನ್ಯಾಷನಲ್ ಓಷಿಯಾನಿಕ್ ಅಂಡ್ ಅಟ್ಮೋಸ್ಫಿಯರಿಕ್ ಅಡ್ಮಿನಿಸ್ಟ್ರೇಷನ್ ಹೇಳಿರುವ ಪ್ರಕಾರ ಫೆಸಿಫಿಕ್ ಓಷನ್ ನಲ್ಲಿ ನೀರನ್ನು ತಣ್ಣಗಾಗಿಸುವ ಲಾ ನಿನಾ ಇದೀಗ ಕಣ್ಮರೆಯಾಗಿದೆ. ಪೆಸಿಫಿಕ್ ಸಮುದ್ರವು ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ.
ಲಾ ನಿನಾವು ಸಮುದ್ರದಲ್ಲಿರುವ ಸಾಮಾನ್ಯ ತಾಪಮಾನವನ್ನು ತಣ್ಣಗಾಗಿಸುತ್ತದೆ. ಇದು ಸಮುದ್ರದ 50 ರಿಂದ 250 ಮೀಟರ್ ಆಳದಲ್ಲಿ ಕಂಡುಬರುವ ಸ್ಥಿತಿಯಾಗಿದೆ. ಆದರೆ ಲಾ ನಿನ ತನ್ನ ಹಿಡಿತವನ್ನು ಕಳೆದುಕೊಂಡಿದೆ. ಸಮುದ್ರದ ತಾಪಮಾನ ದಕ್ಷಿಣ ಟ್ರಾಪಿಕಲ್ ಪೆಸಿಫಿಕ್ ಸಾಮಾನ್ಯ ತಾಪಮಾನಕ್ಕಿಂತ ತಣ್ಣಗಿದೆ. ಆದರೂ ಲಾ ನಿನ ತನ್ನ ಹಿಡಿತವನ್ನು ಕಳೆದುಕೊಂಡಿದ್ದು ಈಗಿರುವ ಸನ್ನಿವೇಶವನ್ನು ಗಮನಿಸಿದರೆ ಸಾಮಾನ್ಯ ಮಳೆಯಾಗುವ ಲಕ್ಷಣಗಳಿವೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications