Get Updates
Get notified of breaking news, exclusive insights, and must-see stories!

'ಕಾರ್ಮಿಕರು ಚುನಾವಣೆಯಲ್ಲಿ ಭಾಗವಹಿಸಲು ಸಂಪೂರ್ಣ ಅವಕಾಶ'

ಬೆಂಗಳೂರು, ಏಪ್ರಿಲ್ 21 : ಚುನಾವಣಾ ಪ್ರಕ್ರಿಯೆಯಲ್ಲಿ ಕೈಗಾರಿಕೆಗಳು ಪಾಲುದಾರರಾಗಿರುವುದರಿಂದ ಕಾರ್ಮಿಕರು ಚುನಾವಣೆಯಲ್ಲಿ ಭಾಗವಹಿಸಲು ಸಂಪೂರ್ಣ ಅವಕಾಶ ನೀಡಬೇಕೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಕರೆ ನೀಡಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯಲ್ಲಿ (ಎಫ್‍ಕೆಸಿಸಿಐ) ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಥಮವಾಗಿ ಬಳಕೆಯಾಗುತ್ತಿರುವ ವಿವಿಪ್ಯಾಟ್ ಯಂತ್ರಗಳು ಅತ್ಯಂತ ಸುರಕ್ಷಿತ ಎಂದು ತಿಳಿಸಿದರು.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

​ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರ ಪ್ರದೇಶಗಳಲ್ಲಿ ಮತದಾನದ ಅನುಪಾತ ಅತ್ಯಂತ ಕಡಿಮೆಯಿದೆ. ಮತದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಎಲ್ಲ ಅಗತ್ಯ ಕ್ರಮಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ ಎಂದರು.

EC appeals to labourers to tender their vote without fail

ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಕುರಿತು ಅನೇಕ ತಪ್ಪು ಅಭಿಪ್ರಾಯಗಳು ಜನರಲ್ಲಿವೆ. ಕಾನೂನಿನ ಪರಿಧಿಯಲ್ಲಿಯೇ ಕಾರ್ಯರ್ವಹಿಸುವುದು ಎಂದು ಮುಖ್ಯ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದರು.

ಉಪಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ ಅವರು ಇವಿಎಂ-ವಿವಿಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಅಪರ ಮುಖ್ಯ ಚುನಾವಣಾಧಿಕಾರಿ ಡಾ. ಬಿ.ಆರ್.ಮಮತಾ, ಎಫ್‍ಕೆಸಿಸಿಐ ಅಧ್ಯಕ್ಷ ಕೆ.ರವಿ , ನಾಗರೀಕ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಡಾ ಬಿ.ಅಮರನಾಥ, ಉಪಾಧ್ಯಕ್ಷ ಸಿ.ಆರ್.ಜನಾರ್ಧನ್ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+