ಅಭ್ಯರ್ಥಿಗಳಿಗೆ ಖರ್ಚಿನ ವಿವರ ನೀಡುವಂತೆ ಚುನಾವಣಾ ಆಯೋಗ ಸೂಚನೆ
ಬೆಂಗಳೂರು, ಮೇ 19: ರಾಜ್ಯ ವಿಧಾನಸಭಾ ಚುನಾವಣೆ ಮುಗಿದಿದೆ ಇದರ ಬೆನ್ನಲ್ಲೇ ಚುನಾವಣಾ ಆಯೋಗ ಖರ್ಚಿನ ವಿವರ ನೀಡುವಂತೆ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಚುನಾವಣೆ ವೇಳೆ ತಾವು ಮಾಡಿರುವ ಖರ್ಚಿನ ಮಾಹಿತಿ ನೀಡುವಂತೆ ಬೆಂಗಳೂರಿನ 26 ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ 400ಕ್ಕೂ ಹೆಚ್ಚಿನನ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಗರಿಷ್ಠ ತಲಾ 28 ಲಕ್ಷ ರೂ. ಖರ್ಚು ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿತ್ತು.
ಇದೀಗ ಚುನಾವಣೆ ಪೂರ್ಣಗೊಂಡಿದ್ದು, ಬಿಬಿಎಂಪಿ ಹಣಕಾಸು ವಿಭಾಗದ ಅಧಿಕಾರಿಗಳು, ಚುನಾವಣೆಯಲ್ಲಿ ಮಾಡಿದ ಖರ್ಚಿನ ಕುರಿತು ದಾಖಲೆ ಸಲ್ಲಿಸುವಂತೆ ಪ್ರತಿ ಅಭ್ಯರ್ಥಿಗಳಿಗೆ ತಿಳಿಸಿದ್ದಾರೆ.

ಅಭ್ಯರ್ಥಿಗಳ ಖರ್ಚಿನ ಮೇಲೆ ನಿಗಾವಹಿಸಲು ಪ್ರತ್ಯೇಕ ಬ್ಯಾಂಕ್ ಖಾತೆ ತೆರೆದು, ಅದರ ವಿವರವನ್ನು ಆಯೋಗಕ್ಕೆ ಸಲ್ಲಿಸುವಂತೆ ತಿಳಿಸಲಾಗಿತ್ತು. ಅದರಂತೆ ಎಲ್ಲ ಅಭ್ಯರ್ಥಿಗಳು ಬ್ಯಾಂಕ್ ಖಾತೆ ವಿವರ ಸಲ್ಲಿಸಿದ್ದರು. ಈ ಖರ್ಚಿಋನ ಮೇಲೆ ನಿಗಾವಹಿಸಲು ತೆರಿಗೆ ಇಲಾಖೆ ಅಧಿಕಾರಿಗಳನ್ನು ಖರ್ಚು-ವೆಚ್ಚ ಅಶಿಕಾರಿಯನ್ನಾಗಿ ನೇಮಿಸಿದ್ದರು. ಅವರು ಈಗಾಗಲೇ ಖರ್ಚು ಕುರಿತಂತೆ ಮಾಹಿತಿ ಸಂಗ್ರಹಿಸಿದ್ದಾರೆ.
ತಿಂಗಳಲ್ಲಿ ವರದಿ ಸಲ್ಲಿಕೆ: ಚುನಾವಣೆಯಲ್ಲಿನ ಖರ್ಚು ಕುರಿತಂತೆ ಅಭ್ಯರ್ಥಿಗಳಿಂದ ದಾಖಲೆ ಸ್ವೀಕರಿಸಿ ಅದನ್ನು ಪರಿಶೀಲಿಸಲು 23 ದಿನಗಳ ಕಾಲ ಅವಕಾಶವಿದೆ. ಅದರ ಜತೆಗೆ ಖರ್ಚಿನ ವರದಿ ಸಿದ್ಧಪಡಿಸಿ ಆಯೋಗಕ್ಕೆ ಕಳುಹಿಸಲು ಒಟ್ಟಾರೆ ಒಂದು ತಿಂಗಳಾಗಲಿದೆ.
ಚುನಾವಣಾ ವೆಚ್ಚ ಕುರಿತಂತೆ ಚುನಾವಣಾ ಪೂರ್ವದಲ್ಲಿಯೇ ಆಯೋಗ ದರ ನಿಗದಿ ಮಾಡಿದೆ. ಅದರಂತೆ ಕರಪತ್ರ ಮುದ್ರಣ, ಶಾಮಿಯಾನ ಹಾಕಿಸುವುದು, ಟಿಶರ್ಟ್ ಮಮೇ ಅಭ್ಯರ್ಥಿ ಮತ್ತು ಪಕ್ಷದ ಚಿಹ್ನೆ ಮುದ್ರಿಸುವುದು, ಕಾರ್ಯಕರ್ತರಿಗೆ ಊಟದ ವ್ಯವಸ್ಥೆ, ಸಮಾವೇಶಕ್ಕೆ ಸಭಾಂಗಣ ಹೀಗೆ ಪ್ರತಿಯೊಂದಕ್ಕೂ ದರ ನಿಗದಿ ಮಾಡಿತ್ತು. ಅದನ್ನಾಧರಿಸಿ, ಅಭ್ಯರ್ಥಿಗಳು ನೀಡುವ ದಾಖಲೆಯಂತೆ ಖರ್ಚನ್ನು ತಾಳೆ ಹಾಕಲಾಗುತ್ತದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications