"ತೆಂಗಿನ ಕಾಯಿ ಗಣೇಶ" ಚತುರ್ಥಿ ದಿನದಿಂದ ಭಕ್ತರಿಗೆ ದರ್ಶನ
ಬೆಂಗಳೂರು, ಸೆ.02: ಜೆಪಿ ನಗರದ ಪುಟ್ಟೇನ ಹಳ್ಳಿಯ ಶ್ರೀ ಸತ್ಯ ಗಣಪತಿ ಶಿರಡಿ ಸಾಯಿ ಟ್ರಸ್ಟ್ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ವಿಶೇಷವಾದ ರೀತಿಯಲ್ಲಿ ಸಾರ್ವಜನಿಕ ಗಣೇಶ ಉತ್ಸವ ನಡೆಯಲಿದೆ. ಈ ಬಾರಿ 30 ಅಡಿ ಎತ್ತರದ ಪರಿಸರ ಸ್ನೇಹಿ ತೆಂಗಿನ ಕಾಯಿಯಿಂದ ನಿರ್ಮಿಸಲಾಗುವ "ತೆಂಗಿನ ಕಾಯಿ ಗಣೇಶ" ಮೂರ್ತಿ ನಿರ್ಮಾಣ ಮಾಡಲಾಗಿದೆ.
ಕಳೆದ ಬಾರಿ 40 ಅಡಿ ಎತ್ತರದ ಕಬ್ಬಿನ ಗಣಪತಿಯನ್ನು ನಿರ್ಮಿಸಿ ಇತಿಹಾಸದಲ್ಲಿ ಹೊಸದೊಂದು ಮೈಲಿಗಲ್ಲು ಸ್ಥಾಪಿಸಿದ್ದ ಈ ದೇವಸ್ಥಾನ ಈ ಬಾರಿಯೂ ಹೊಸದೊಂದು ಪ್ರಯತ್ನ ಮಾಡಿದೆ. 9 ಸಾವಿರ ತೆಂಗಿನ ಕಾಯಿ ಹಾಗೂ 3 ಸಾವಿರ ಏಳನೀರು ಬಳಸಿ 30 ಎತ್ತರದ ಗಣಪತಿಯನ್ನು ನಿರ್ಮಿಸಿದೆ.
"ಗಣೇಶ ಮೂರ್ತಿ ನಿರ್ಮಾಣಕ್ಕೆ 50 ಮಂದಿ ಕಳೆದ 21 ದಿನಗಳಿಂದ ಕೆಲಸ ಮಾಡುತ್ತಿದ್ದು ಸೋಮುವಾರದಿಂದ ತೆಂಗಿನ ಕಾಯಿ ಗಣಪನ ದರ್ಶನ ಪಡೆಯಬಹುದಾಗಿದೆ. ತೆಂಗಿನ ಕಾಯಿ ಬಹಳ ದಿನಗಳ ಕಾಲ ಕೆಡದೆ ಇರುತ್ತದೆ. ಹೀಗಾಗಿ ತೆಂಗಿನ ಕಾಯಿಯನ್ನು ಬಳಸಿ ಗಣಪನ ಮೂರ್ತಿಯನ್ನು ನಿರ್ಮಿಸಲಾಗುತ್ತಿದೆ. ಕಳೆದ ವರ್ಷ ಕಬ್ಬನ್ನು ಬಳಸಿ ಗಣಪನ ಮೂರ್ತಿಯನ್ನು ನಿರ್ಮಿಸಲಾಗಿತ್ತು ಹಾಗೂ ಅದಕ್ಕೂ ಹಿಂದಿನ ವರ್ಷ 400 ಕೆಜಿ ಹತ್ತಿ ಬಳಸಿ ಬೃಹತ್ ಗಣಪನ ಮೂರ್ತಿಯನ್ನು ನಿರ್ಮಿಸಿದ್ದೆವು" ಎಂದು ಟ್ರಸ್ಟಿನ ವ್ಯವಸ್ಥಾಪಕರಾದ ರಾಮ್ ಮೋಹನ ರಾಜು ಅವರು ತಿಳಿಸಿದರು.

21 ಬಗೆಯ ತರಕಾರಿಗಳನ್ನು ಬಳಸಿ ಪರಿಸರ ಸ್ನೇಹಿ ಅಲಂಕಾರ: ಗಣಪತಿ ದೇವಸ್ಥಾನವನ್ನು ಈ ಬಾರಿ ಪರಿಸರ ಸ್ನೇಹಿಯಾಗಿಸಲು ತಿರ್ಮಾನಿಸಲಾಗಿದೆ. ಈ ಬಾರಿ ತರಕಾರಿಗಳನ್ನು ಬಳಸಿ ವಿಶೇಷವಾಗಿ ಆಲಂಕಾರ ಮಾಡಲಾಗಿದೆ.
10 ಸಾವಿರ ಕೆಜಿ ಕೇಸರಿಬಾತ್ ಪ್ರಸಾದ: "ಮತ್ತೊಂದು ವಿಶೇಷವೆಂದರೆ ಗಣೇಶನಿಗೆ 10 ಸಾವಿರ ಕೆ ಜಿ ಕೇಸರಿಬಾತ್ ನ್ನು ಪ್ರಸಾದವನ್ನಾಗಿ ನೀಡಲು ತೀರ್ಮಾನಿಸಲಾಗಿದೆ. ಈ ಕೇಸರಿ ಬಾತ್ ತಯಾರಿಕೆಗೆ 2 ಸಾವಿರ ಕೆಜಿ ರವೆ, 2 ಸಾವಿರ ಕೆಜಿ ಸಕ್ಕರೆ, 1 ಸಾವಿರ ಲೀಟರ್ ತುಪ್ಪ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಬಳಸಲಾಗುತ್ತಿದೆ. ಈ ಪ್ರಸಾದವನ್ನು ಹಬ್ಬದ ದಿನ ಭಕ್ತರಿಗೆ ನೀಡಲು ನಿರ್ಧರಿಸಲಾಗಿದೆ" ಎಂದು ಟ್ರಸ್ಟಿ ರಾಮ್ ಮೋಹನ ರಾಜು ತಿಳಿಸಿದರು.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications