ಬೆಂಗಳೂರು: ಬ್ಯಾಂಕ್ ಸಾಲ ಪಡೆದು ವಂಚಿಸಿದ ಕಂಪನಿಯ 40ಕೋಟಿ ರೂ. ಆಸ್ತಿ ಇಡಿ ವಶ
ಬೆಂಗಳೂರು ಆಗಸ್ಟ್ 04: ಬ್ಯಾಂಕ್ ವಂಚನೆ ಪ್ರಕರಣ ಹಾಗೂ ಮನಿ ಲಾಂಡರಿಂಗ್ ತನಿಖೆ ಸಂಬಂಧ ಬೆಂಗಳೂರು ಮೂಲದ ಕಂಪನಿಯೊಂದರ ಒಟ್ಟು ಸುಮಾರು 40.14 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದ ಘಟನೆ ಗುರುವಾರ ನಡೆದಿದೆ.
ಬ್ಯಾಂಕ್ ನಿಂದ ಸುಮಾರು 45ಕೋಟಿ ರು. ಸಾಲ ಪಡೆದು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕಾವೇರಿ ಟೆಲಿಕಾಂ ಇನ್ಫ್ರಾಸ್ಟ್ರಕ್ಚರ್ ಲಿ.ನ ಸುಮಾರು 40.14ಕೋಟಿ ರು. ಮೌಲ್ಯದ ಚರಾಸ್ತಿ ಹಾಗೂ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಇಡಿ ದಾಳಿ ನಡೆಸ ವಶಕ್ಕೆ ಪಡೆದ ಆಸ್ತಿಗಳಲ್ಲಿ ವಸತಿ ಸಮುಚ್ಚಯಗಳು, ಪ್ಲಾಟ್ಗಳು, ಕೃಷಿ ಭೂಮಿಗಳು ಮತ್ತು ಬ್ಯಾಂಕ್ ಠೇವಣಿಗಳನ್ನು ಒಳಗೊಂಡಿವೆ. ಸಾಲ ಪಡೆದು ಮರುಪಾವತಿಸದೇ ಕೋಟ್ಯಂತರ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ದೇನಾ ಬ್ಯಾಂಕ್ ಈ ಕಾವೇರಿ ಟೆಲಿಕಾಂ ಇನ್ಫ್ರಾಸ್ಟ್ರಕ್ಚರ್ ಲಿ. ವಿರುದ್ಧ 2015 ರಲ್ಲೇ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಬಿಐನಲ್ಲಿ ಎಫ್ಐಆರ್ ದಾಖಲಿಸಿತ್ತು.

ಈ ಟೆಲಿಕಾಂ ಕಂಪನಿ ಹಾಗೂ ಅದರ ನಿರ್ದೇಶಕರು ಉಪಕರಣಗಳ ಖರೀದಿಯ ಹೆಸರಿನಲ್ಲಿ ದೇನಾ ಬ್ಯಾಂಕ್ನಿಂದ ಪಡೆದ 45 ಕೋಟಿ ರೂ.ಸಾಲದ ಹಣವನ್ನು ಸಹೋದರ ಸಂಸ್ಥೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿತ್ತು. ಈ ಸಂಸ್ಥೆಗಳಲ್ಲಿ ಕಾವೇರಿ ಟೆಲಿಕಾಂ ಕಂಪನಿಯ ನಿರ್ದೇಶಕರೆ ಪಾಲುದಾರರು ಎಂಬುದು ಗೊತ್ತಾಗಿದೆ.
ಸಾಲದ ಹಣ ದುರ್ಬಳಕೆ
ಸಾಲ ಹಣದಲ್ಲಿ ಸುಮಾರು ಅರ್ಧದಷ್ಟು ಹಣವನ್ನು ವಿದೇಶದಲ್ಲಿ ಹೂಡಿಕೆ ಮಾಡಲಾಗಿದ್ದು, ಉಳಿದ ಹಣವನ್ನು ನಿರ್ದೇಶಕರು ಕುಟುಂಬಸ್ಥರ ಹೆಸರಿನಲ್ಲಿ ಸ್ಥಿರಾಸ್ತಿ ಮಾಡಿಕೊಂಡಿದ್ದಾರೆ. ಅಲ್ಲದೇ ಸಾಲ ಪಡೆಯಲು ನಕಲಿ ದಾಖಲೆಗಳನ್ನು ಸಲ್ಲಿಸಿರುವುದು, ಬ್ಯಾಂಕ್ ಸಾಲದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದ ಇಡಿ ತನಿಖೆಯಿಂದ ತಿಳಿದು ಬಂದಿದೆ.

ದೇನಾ ಬ್ಯಾಂಕ್ನ ದೂರಿನ ಮೇರೆಗೆ ತನಿಖೆ ಕೈಗೊಂಡು ಬಳಿಕ ದೊರೆತ ಸಾಕ್ಷ್ಯಗಳ ಆಧಾರದಲ್ಲಿ ಕಾವೇರಿ ಟೆಲಿಕಾಂ ಕಂಪನಿ ಮತ್ತದರ ನಿರ್ದೇಶಕರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1998 ಸೆಕ್ಷನ್ 13(2) ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ ಅಡಿ ಪ್ರಕರಣ ದಾಖಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications