ಐಎಂಎ ವಂಚನೆ ಪ್ರಕರಣ: ಜಮೀರ್ ಅಹ್ಮದ್ಗೆ ಮನೆಗೆ ಇಡಿ ಅಧಿಕಾರಿಗಳು
ಬೆಂಗಳೂರು, ಜೂನ್ 28: ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಸಚಿವ ಜಮೀರ್ ಅಹ್ಮದ್ ಅವರಿಗೆ ಸಮನ್ಸ್ ನೀಡಿದ್ದಾರೆ.
ಸಚಿವ ಜಮೀರ್ ಮನೆಗೆ ತೆರಳಿದ್ದ ಇಡಿ ಅಧಿಕಾರಿಗಳು ಜುಲೈ 5 ರ ಒಳಗಾಗಿ ಬಂದು ಸ್ಪಷ್ಟನೆ ನೀಡಬೇಕೆಂದು ಸಮನ್ಸ್ ಜಾರಿಗೊಳಿಸಿದ್ದಾರೆ.
ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ. ಕೆಲವು ವರ್ಷದ ಹಿಂದೆ ಜಮೀರ್ ಅಹ್ಮದ್ ಅವರು ಐಎಂಎ ಮಾಲೀಖ ಮನ್ಸೂರ್ ಖಾನ್ ಅವರಿಂದ ಆಸ್ತಿ ಖರೀದಿ ಮಾಡಿದ್ದರು. ಅಷ್ಟೆ ಅಲ್ಲದೆ ಮನ್ಸೂರ್ ಖಾನ್ ಬಿಡುಗಡೆ ಮಾಡಿದ್ದ ವಿಡಿಯೋದಲ್ಲಿ ಜಮೀರ್ ಖಾನ್ ಅವರ ಹೆಸರಿನ ಉಲ್ಲೇಖವೂ ಇದೆ.

ಜಮೀರ್ ಖಾನ್ ಮಾತ್ರವಲ್ಲದೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶರವಣ, ರಹಮಾನ್ ಖಾನ್, ಉಬದುಲ್ಲಾ ಶರೀಫ್ ಇನ್ನೂ ಕೆಲವರಿಗೆ ಸಮನ್ಸ್ ನೀಡುವ ಸಾಧ್ಯತೆ ಇದೆ. ಐಎಂಎ ಮಾಲೀಕ ಮನ್ಸೂರ್ ಖಾನ್ಗೆ ಈಗಾಗಲೇ ಸಮನ್ಸ್ ಜಾರಿ ಮಾಡಿಯಾಗಿದೆ.
ಇಡಿ ಸಮನ್ಸ್ ಬಗ್ಗೆ ಪ್ರತಿಕ್ರಿಯಿಸಿರುವ ಜಮೀರ್ ಖಾನ್ ಅವರು, ಸಮನ್ಸ್ ನೀಡಿದ್ದಾರೆ, ಜುಲೈ 5 ರ ಒಳಗೆ ಸ್ಪಷ್ಟನೆ ನೀಡುವಂತೆ ಹೇಳಿದ್ದಾರೆ, ನಾನು ಸ್ಪಷ್ಟನೆ ನೀಡಲಿದ್ದೇನೆ. ಐಎಂಎ ಜೊತೆಗಿನ ನನ್ನ ವ್ಯವಹಾರದ ಬಗ್ಗೆ ನಾನು ಈಗಾಗಲೇ ಹೇಳಿದ್ದೇನೆ, ಆಸ್ತಿ ಖರೀದಿ ಬಗ್ಗೆ ಚುನಾವಣೆ ನಾಮಪತ್ರದ ಸಂದರ್ಭದಲ್ಲೂ ನಮೂದಿಸಿದ್ದೆ ಎಂದು ಜಮೀರ್ ಹೇಳಿದ್ದಾರೆ.
ಎಸ್ಐಟಿ, ಸಿಬಿಐ, ಇಡಿ ಯಾವದೇ ತನಿಖೆ ಆದರೂ ಸಮಸ್ಯೆ ಇಲ್ಲ, ನಾನು ಎಲ್ಲದಕ್ಕೂ ತಯಾರಿದ್ದೇನೆ, ಆದರೆ ಜನರ ಹಣ ವಾಪಸ್ ಬರಬೇಕು ಅಷ್ಟೆ ಎಂದು ಜಮೀರ್ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications