ED Raid; 960 ಕೋಟಿ ರೂ. ಅಕ್ರಮ ಆರೋಪ, ಬಿಬಿಎಂಪಿ ಕೇಂದ್ರ ಕಛೇರಿ ಮೇಲೆ ಇಡಿ ದಾಳಿ
ಬೆಂಗಳೂರು, ಜನವರಿ 07: ಬೆಂಗಳೂರು ನಗರದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಛೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. 7 ಅಧಿಕಾರಿಗಳ ತಂಡ ಅಕ್ರಮ ಆರೋಪವೊಂದರ ಸಂಬಂಧ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.
ಕೊಳವೆ ಬಾವಿ ಕೊರೆಯುವ ಸಂಬಂಧ ಕೇಳಿ ಬಂದಿರುವ 960 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿರುವ ಮುಖ್ಯ ಇಂಜಿನಿಯರ್ ಕಛೇರಿ ಮೇಲೆ ದಾಳಿಯನ್ನು ಮಾಡಲಾಗಿದೆ. 2016ರಲ್ಲಿ ನಡೆದ ಅಕ್ರಮ ಇದು ಎಂಬ ಮಾಹಿತಿ ಸದ್ಯಕ್ಕೆ ಸಿಕ್ಕಿದೆ.

2016 ರಿಂದ 2019ರ ತನಕ ನಡೆದಿರುವ ವೈಟ್ ಟಾಪಿಂಗ್ ಅಕ್ರಮ, ಕೊಳವೆ ಬಾವಿ ಕೊರೆಯುವ ಸಂಬಂಧ ನಡೆದಿದೆ ಎನ್ನಲಾಗಿರುವ ಅಕ್ರಮ ಸಂಬಂಧ ಇಡಿ ತನಿಖೆಯನ್ನು ನಡೆಸುತ್ತಿದೆ. ಆದ್ದರಿಂದ ಮಂಗಳವಾರ 7 ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ತನಿಖೆಗೆ ಸಹಕಾರ: ಇಡಿ ದಾಳಿ ಕುರಿತು ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ಪ್ರತಿಕ್ರಿಯೆ ನೀಡಿದ್ದು,"ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಅವರಿಗೆ ಅಗತ್ಯ ಮಾಹಿತಿ ನೀಡಿ, ತನಿಖೆಗೆ ಸಹಕಾರ ನೀಡಲಾಗುತ್ತಿದೆ" ಎಂದು ಹೇಳಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಇಡಿಯ 7 ಅಧಿಕಾರಿಗಳ ತಂಡ ಬೆಳಗ್ಗೆ 11 ಗಂಟೆಯಿಂದ ಬಿಬಿಎಂಪಿ ಕೇಂದ್ರ ಕಚೇರಿಯ ಮುಖ್ಯ ಇಂಜಿನಿಯರ್ ಕಛೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಟ್ ಟಾಪಿಂಗ್ ಅಕ್ರಮ, ಕೊಳವೆ ಬಾವಿ ಕೊರೆಯುವ ಸಂಬಂಧ ನಡೆದಿದೆ ಎನ್ನಲಾಗಿರುವ ಅಕ್ರಮ ಸಂಬಂಧ 2021ರಲ್ಲಿ ಇಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಬಿಬಿಎಂಪಿಯಲ್ಲಿ ಜನಪ್ರತಿನಿಧಿಗಳಿಲ್ಲ. 2020ರ ಸೆಪ್ಟೆಂಬರ್ನಿಂದ ಬಿಬಿಎಂಪಿಯಲ್ಲಿ ಅಧಿಕಾರಿಗಳ ಆಡಳಿತ ನಡೆಯುತ್ತಿದೆ. ಆಡಳಿತಾಧಿಕಾರಿ, ಮುಖ್ಯ ಆಯುಕ್ತರು ಆಡಳಿತವನ್ನು ನಡೆಸುತ್ತಿದ್ದಾರೆ. 2022ರಲ್ಲಿ ಇಡಿ ಬಿಬಿಎಂಪಿ ಅಧಿಕಾರಿಗಳಿಗೆ ಈ ಅಕ್ರಮ ಆರೋಪದ ಕುರಿತು ವಿಚಾರಣೆಗೆ ನೋಟಿಸ್ ನೀಡಿತ್ತು. ಈಗ ಮುಂದುವರೆದ ಭಾಗವಾಗಿ ದಾಳಿಯನ್ನು ಮಾಡಲಾಗಿದೆ.
ಮಾಹಿತಿಗಳ ಪ್ರಕಾರ ಬಿಬಿಬಿಎಂಪಿ 1147 ಕೋಟಿ ರೂ. ವೆಚ್ಚದಲ್ಲಿ 93.37 ಕಿ. ಮೀ., 758.56 ಕೋಟಿ ರೂ. ವೆಚ್ಚದಲ್ಲಿ 62.80 ಕಿ. ಮೀ. ಹಾಗೂ 1139 ಕೋಟಿ ರೂ. ವೆಚ್ಚದಲ್ಲಿ 123 ಕಿ. ಮೀ. ರಸ್ತೆಯನ್ನು ವೈಟ್ ಟಾಪಿಂಗ್ ಮಾಡಲಾಗಿದೆ.
ನಗರದಲ್ಲಿ 9,588 ಕೊಳವೆ ಬಾವಿ, 976 ನೀರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದರು. ಆದರೆ ಇದರಲ್ಲಿ ಅಕ್ರಮ ನಡೆದಿದೆ ಎಂಬುದು ಆರೋಪವಾಗಿದೆ.
ಆರ್ಟಿಐ ಕಾರ್ಯಕರ್ತ, ಬಿಜೆಪಿ ಮುಖಂಡ ಎನ್. ಆರ್. ರಮೇಶ್ 2019ರಲ್ಲಿ ಈ ಕುರಿತು ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿದ್ದರು. 2016 ರಿಂದ 2018ರ ತನಕ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಆಯುಕ್ತರು, 5 ಜಂಟಿ ಆಯುಕ್ತರು, 5 ಮುಖ್ಯ ಇಂಜಿನಿಯರ್, 40ಕ್ಕೂ ಅಧಿಕ ಅಧಿಕಾರಿಗಳನ್ನು ದೂರಿನಲ್ಲಿ ಉಲ್ಲೇಖಿಸಿದ್ದರು. ಈಗ ಈ ಕುರಿತು ಇಡಿ ತನಿಖೆ ಕೈಗೊಂಡಿದ್ದು, ಬಿಬಿಎಂಪಿ ಕೇಂದ್ರ ಕಛೇರಿ ಮೇಲೆ ದಾಳಿ ಮಾಡಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications