50 ಕೋಟಿ ರೂಪಾಯಿ ನಾಯಿ ಮಾಲೀಕನ ಅಸಲಿಯತ್ತು ಬಯಲು ಮಾಡಿದ ಇಡಿ ದಾಳಿ
ನನ್ನ ಹತ್ತಿರ ಇರುವ ನಾಯಿ ಬೆಲೆ 50 ಕೋಟಿ ರೂಪಾಯಿ ಎಂದು ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗಿದ್ದ ಬೆಂಗಳೂರಿನ ವ್ಯಕ್ತಿಗೆ ಜಾರಿ ನಿರ್ದೇಶನಾಲಯ ಶಾಕ್ ಕೊಟ್ಟಿದೆ. ಬೆಂಗಳೂರಿನ ನಿವಾಸಿ ಎಸ್ ಸತೀಶ್ ವಿರುದ್ಧ ನಿರ್ದೇಶನಾಲಯ (ED) ತನಿಖೆ ಆರಂಭಿಸಿದ್ದು, ಸಾಕಷ್ಟು ಅಚ್ಚರಿಯ ವಿಚಾರಗಳು ಬಹಿರಂಗವಾಗಿವೆ.
ಕ್ಯಾಡಬಾಂಬ್ ಒಕಾಮಿ ಎಂಬ ಅಪರೂಪದ ತಳಿಯನ್ನು ತಾನು 50 ಕೋಟಿ ರೂಪಾಯಿಗೆ ಖರೀದಿಸಿದ್ದೇನೆ ಎಂದು ಸತೀಶ್ ಹೇಳಿಕೊಂಡಿದ್ದರು. ಈ ಫೋಟೊಗಳು ಆನ್ಲೈನ್ನಲ್ಲಿ ಭಾರಿ ಕುತೂಹಲವನ್ನು ಹುಟ್ಟುಹಾಕಿದವು, ಇದು ಅಪರೂಪದ ತಳಿಯ ನಾಯಿ, ಭಾರತದಲ್ಲಿ ನನ್ನ ಬಳಿ ಮಾತ್ರ ಇದೆ ಎಂದು ಹೇಳಿಕೊಂಡಿದ್ದರು.

ಈ ನಾಯಿ ಖರೀದಿಯ ಹಿಂದೆ ಹವಾಲಾ ವ್ಯವಹಾರ ಇರಬಹುದು, ಅಕ್ರಮ ಹಣದ ಬಳಕೆಯಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯಕ್ಕೆ ದೂರುಗಳು ದಾಖಲಾಗಿದ್ದವು.
ಇಡಿ ವಿಚಾರಣೆ ವೇಳೆ ಸತೀಶ್ ಅವರಿಗೆ ನಾಯಿಯನ್ನು ಕೂಡ ಕರೆದುಕೊಂಡು ಬರುವಂತೆ ಕೇಳಿದ್ದಾರೆ. ಆದರೆ ಸತೀಶ್ ನಾಯಿ ತನ್ನ ಸ್ನೇಹಿತನ ಜೊತೆ ಇದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ. ಹಣಕಾಸಿನ ಅಕ್ರಮಗಳ ಎಲ್ಲಾ ಆರೋಪಗಳನ್ನು ಸತೀಶ್ ನಿರಾಕರಿಸಿದ್ದಾರೆ. ನಾಯಿ ನನ್ನ ಸ್ನೇಹಿತನದು ನಾನು ಅದರ ಜೊತೆ ಫೋಟೊ ತೆಗೆಸಿಕೊಂಡಿದ್ದೇನೆ ಎಂದಿದ್ದಾರೆ.
51 ವರ್ಷದ ಸತೀಶ್ ಬಳಿ ಇದ್ದ ನಾಯಿ ತೋಳನಾಯಿ ಕಾಡು ತೋಳ ಮತ್ತು ಕಕೇಶಿಯನ್ ಶೆಫರ್ಡ್ನ ಅಪರೂಪದ ಮಿಶ್ರತಳಿಯಾಗಿದೆ. ಫೆಬ್ರವರಿಯಲ್ಲಿ ಅವರು ಬ್ರೋಕರ್ ಮೂಲಕ ಈ ನಾಯಿಯನ್ನು ಖರೀದಿಸಿದ್ದರು ಎಂದು ದಿ ಸನ್ ವರದಿ ಮಾಡಿತ್ತು.
ಇಡಿ ಅಧಿಕಾರಿಗಳು ಹೇಳಿದ್ದೇನು?
ಇಡಿ ಅಧಿಕಾರಿಗಳ ಪ್ರಕಾರ, ಸತೀಶ್ ಇತರ ನಾಯಿ ಸಾಕಾಣಿಕೆದಾರರಿಂದ ನಾಯಿಗಳನ್ನು ಬಾಡಿಗೆ ತಂದು ವಿಡಿಯೋಗಳನ್ನು ಮಾಡುತ್ತಿದ್ದರು ಎನ್ನಲಾಗಿದೆ. ಅವರು ಕೋಟ್ಯಂತರ ರೂಪಾಯಿಗಳಿಗೆ ವಿದೇಶಿ ತಳಿಗಳನ್ನು ಖರೀದಿಸಿದ್ದಾರೆ ಎಂದು ಸುಳ್ಳು ಹೇಳಿಕೊಳ್ಳುತ್ತಿದ್ದರು. ಸತೀಶ್ ಹಣಕಾಸು, ಆದಾಯ ಮೂಲಗಳು ಮತ್ತು ಜಿಎಸ್ಟಿ ದಾಖಲೆಗಳನ್ನು ಪರಿಶೀಲಿಸಲು ಇಡಿ ಆರಂಭಿಸಿತು, ಅಂತಿಮವಾಗಿ ಬೆಂಗಳೂರಿನಲ್ಲಿರುವ ಅವರ ವಿಶಾಲವಾದ ಬಂಗಲೆಯ ಮೇಲೆ ದಾಳಿ ನಡೆಸಿದೆ.
ದಾಖಲೆ ಪರಿಶೀಲನೆಯ ಸಮಯದಲ್ಲಿ, ಆ ನಾಯಿ ಬೆಲೆ 50 ಕೋಟಿ ರೂ. ಬೆಲೆ ಸುಳ್ಳು ಎಂದು ಕಂಡುಬಂದಿದೆ. ನಾಯಿಯನ್ನು ಹೊರದೇಶದಿಂದ ಆಮದು ಮಾಡಿಕೊಂಡಿರುವುದಕ್ಕೆ ಯಾವುದೇ ಕಾನೂನು ಬದ್ಧ ದಾಖಲೆಗಳಿಲ್ಲ ಎಂದರು. ಇನ್ನೂ ತನಿಖೆ ನಡೆಯುತ್ತಿದೆ, ತಪ್ಪು ಮಾಹಿತಿ ಹರಡುವಿಕೆ ಮತ್ತು ಸಂಭಾವ್ಯ ಆರ್ಥಿಕ ಅಕ್ರಮಗಳ ಆರೋಪದ ಮೇಲೆ ಸತೀಶ್ ವಿರುದ್ಧ ಕಾನೂನು ಪ್ರಕ್ರಿಯೆಯನ್ನು ಇಡಿ ಅಧಿಕಾರಿಗಳು ಆರಂಭಿಸಿದ್ದಾರೆ.
ಎಸ್ ಸತೀಶ್ ಯಾರು?
ಸತೀಶ್ ಭಾರತೀಯ ನಾಯಿ ತಳಿಗಾರರ ಸಂಘದ ಸ್ವಯಂ ಘೋಷಿತ ಅಧ್ಯಕ್ಷರಾಗಿದ್ದಾರೆ. ಒಂದು ಕಾಲದಲ್ಲಿ ಕಟ್ಟಾ ನಾಯಿ ಪ್ರೇಮಿಯಾಗಿದ್ದ ಅವರು ವರ್ಷಗಳ ಹಿಂದೆ ನಾಯಿಗಳನ್ನು ಸಾಕುವುದನ್ನು ನಿಲ್ಲಿಸಿದ್ದರು ಎಂದು ವರದಿಯಾಗಿದೆ ಆದರೆ ಅಪರೂಪದ ತಳಿಗಳ ನಾಯಿಗಳಿವೆ ಎಂದು ಹೇಳಿಕೊಳ್ಳುತ್ತಲೇ ಇದ್ದರು. ಅವರ ಹೇಳಿಕೆಗಳ ಪ್ರಕಾರ, ಅವರು ತಮ್ಮ ನಾಯಿಗಳನ್ನು ಕಾರ್ಯಕ್ರಮಗಳಲ್ಲಿ ಪ್ರದರ್ಶಿಸುವ ಮೂಲಕ ಹಣ ಮಾಡುತ್ತಿದ್ದರು, 30 ನಿಮಿಷಗಳ ಪ್ರದರ್ಶನಕ್ಕೆ ರೂ. 2.46 ಲಕ್ಷ ಮತ್ತು ದೀರ್ಘ ಪ್ರದರ್ಶನಗಳಿಗೆ ರೂ. 10 ಲಕ್ಷಕ್ಕೂ ಹೆಚ್ಚು ಹಣ ಪಡೆಯುತ್ತಿದ್ದರು.
-
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications