ಬೆಂಗಳೂರಿನ ಕೆನರಾ, ಐಸಿಐಸಿಐ, ಆಕ್ಸಿಸ್ ಬ್ಯಾಂಕ್ ಮೇಲೆ ದಾಳಿ
ಬೆಂಗಳೂರು, ಡಿಸೆಂಬರ್ 3: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಮೂರು ಬ್ಯಾಂಕ್ ಗಳ ವಿವಿಧ ಶಾಖೆಗಳ ಮೇಲೆ ದಾಳಿ ನಡೆಸಿದರು. ಹಳೇ ನೋಟು ಬದಲಾವಣೆ ದಂಧೆಯನ್ನು ಕೆಲವು ಬ್ಯಾಂಕ್ ಗಳಲ್ಲಿ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ಖಚಿತಪಡಿಸಿವೆ.
ಕೆನರಾ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಹಾಗೂ ಆಕ್ಸಿಸ್ ಬ್ಯಾಂಕ್ ನ ವಿವಿಧ ಶಾಖೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿತು. ದೇಶದಾದ್ಯಂತ ವಿವಿಧ ಬ್ಯಾಂಕ್ ಗಳ ಮೇಲೆ ಇತ್ತೀಚೆಗೆ ನಡೆದ ದಾಳಿಗಳಲ್ಲಿ ಕೆಲ ಅಧಿಕಾರಿಗಳನ್ನು ಬಂಧಿಸಲಾಗಿತ್ತು.[ರಮೇಶ್ ಬರೆದ ಪತ್ರದಲ್ಲಿ ಗಾಲಿ ರೆಡ್ಡಿ 'ಭ್ರಷ್ಟಾಚಾರ ಬಹಿರಂಗ']
ಕಪ್ಪು ಹಣ ಇರುವವರೊಂದಿಗೆ ಶಾಮೀಲಾಗಿ, ಕೆಲವು ಬ್ಯಾಂಕ್ ಅಧಿಕಾರಿಗಳು ಹಣ ಬದಲಾವಣೆಗೆ ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪ ವ್ಯಾಪಕವಾಗಿತ್ತು. ಬೆಂಗಳೂರಿನಲ್ಲಿ ಇತ್ತೀಚೆಗೆ ಸರಕಾರಿ ಅಧಿಕಾರಿಗಳ ಬಳಿ 5.7 ಕೋಟಿ ರುಪಾಯಿ ಹೊಸ ಎರಡು ಸಾವಿರ ರುಪಾಯಿ ನೋಟುಗಳು ಸಿಕ್ಕಿದ್ದವು.[ಹಳೇ ನೋಟಿನೊಂದಿಗೆ ಖ್ಯಾತ ನಟನ ಕುಟುಂಬ: ಅಧಿಕಾರಿಗಳ ತೀವ್ರ ವಿಚಾರಣೆ]
ಆ ನಂತರ ಅಷ್ಟೊಂದು ಪ್ರಮಾಣದಲ್ಲಿ ಹೊಸ ನೋಟುಗಳು ಸಿಗುವುದರಲ್ಲಿ ತಮಿಳುನಾಡಿನ ಈರೋಡ್ ನ ಬ್ಯಾಂಕ್ ಹಾಗೂ ಬೆಂಗಳೂರಿನ ಬ್ಯಾಂಕ್ ವೊಂದರ ಅಧಿಕಾರಿ ಪಾತ್ರ ಇರುವ ಬಗ್ಗೆ ಕೂಡ ಮಾಹಿತಿ ಸಿಕ್ಕಿತ್ತು.