ಬೆಂಗಳೂರಿನಲ್ಲಿ ಚೈನೀಸ್ ಲೋನ್ ಆಪ್ಗಳ ಮೇಲೆ ಇಡಿ ದಾಳಿ: 17 ಕೋಟಿ ರೂ. ವಶ
ಬೆಂಗಳೂರು, ಸೆಪ್ಟೆಂಬರ್ 03: ಚೀನಾ ವ್ಯಕ್ತಿಗಳಿಂದ ನಿಯಂತ್ರಿತ ಅಕ್ರಮ ತ್ವರಿತ ಸ್ಮಾರ್ಟ್ಫೋನ್ ಆಧಾರಿತ ಸಾಲ ನೀಡುವ ರೇಜರ್ಪೇ, ಪೇಟಿಎಂ ಮತ್ತು ಕ್ಯಾಶ್ಫ್ರೀಯಂತಹ ಆನ್ಲೈನ್ ಪಾವತಿ ಸಂಸ್ಥೆಗಳ ಬೆಂಗಳೂರಿನ ಕಚೇರಿಗಳಲ್ಲಿ ದಾಳಿ ನಡೆಯುತ್ತಿದೆ ಎಂದು ಜಾರಿ ನಿರ್ದೇಶನಾಲಯ ಶನಿವಾರ ತಿಳಿಸಿದೆ.
ಕರ್ನಾಟಕದ ರಾಜಧಾನಿ ನಗರ ಬೆಂಗಳೂರಿನ ಆರು ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಲಾಯಿತು. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಇಡಿ ತನಿಖಾ ಸಂಸ್ಥೆಯು ದಾಳಿಯ ಸಮಯದಲ್ಲಿ ಈ ಚೀನೀ ವ್ಯಕ್ತಿಗಳ ನಿಯಂತ್ರಿತ ಘಟಕಗಳ ವ್ಯಾಪಾರಿ ಐಡಿಗಳು ಮತ್ತು ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 17 ಕೋಟಿ ರೂಪಾಯಿ ಮೌಲ್ಯದ ಹಣವನ್ನು ವಶಪಡಿಸಿಕೊಂಡಿದೆ ಎಂದು ಹೇಳಿದೆ.
ಈ ಘಟಕಗಳ ಕಾರ್ಯವೈಖರಿಯು ಬಗ್ಗೆ ಮಾಹಿತಿ ನೀಡಿದ ಇಡಿ, ಚೀನಿ ವ್ಯಕ್ತಿಗಳು ನಿಯಂತ್ರಿಸುತ್ತಿದ್ದ ಈ ಆಪ್ಗಳು ಭಾರತೀಯರ ನಕಲಿ ದಾಖಲೆಗಳನ್ನು ಬಳಸಿಕೊಂಡು ಇಲ್ಲಿಯವರನ್ನು ನಕಲಿ ನಿರ್ದೇಶಕರನ್ನಾಗಿ ಮಾಡುತ್ತಿದ್ದರು. ಇದರಿಂದ ಹಣಕಾಸಿನ ಅಪರಾಧಕ್ಕೆ ಕಾರಣವಾಗುತ್ತಿದ್ದರು ಎಂದು ಅದು ಆರೋಪಿಸಿದೆ. ಪೇಮೆಂಟ್ ಆಪ್ಗಳು ಬ್ಯಾಂಕ್ಗಳೊಂದಿಗೆ ಹೊಂದಿರುವ ವಿವಿಧ ವ್ಯಾಪಾರಿ ಐಡಿಗಳು, ಖಾತೆಗಳ ಮೂಲಕ ಈ ಆಪ್ ಆಧಾರಿತ ಸಂಸ್ಥೆಗಳು ಅಕ್ರಮ ವ್ಯವಹಾರವನ್ನು ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಇಡಿ ವಿವರಿಸಿದೆ.

ರೇಜರ್ ಪೇ ಪ್ರೈ.ಲಿ., ಕ್ಯಾಶ್ ಫ್ರೀ ಪೇಮೆಂಟ್ಸ್, ಪೇಟಿಎಂ ಪೇಮೆಂಟ್ ಸರ್ವೀಸ್ ಲಿ. ಮತ್ತು ಇತರ ಚೀನಾದ ವ್ಯಕ್ತಿಗಳಿಂದ ನಿಯಂತ್ರಿಸಲ್ಪಡುವ ಟಕಗಳು ಶೋಧ ಕಾರ್ಯಾಚರಣೆಯಲ್ಲಿ ಒಳಗೊಂಡಿವೆ ಎಂದು ಇಡಿ ಹೇಳಿದೆ. ತನಿಖೆಯಲ್ಲಿರುವ ಘಟಕಗಳು ಎಂಸಿಎ (ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ) ವೆಬ್ಸೈಟ್, ನೋಂದಾಯಿತ ವಿಳಾಸದಲ್ಲಿ ನೀಡಲಾದ ವಿಳಾಸಗಳಿಂದ ಕಾರ್ಯನಿರ್ವಹಿಸುತ್ತಿಲ್ಲ. ಬದಲಿಗೆ ಯಾವುದೋ ನಕಲಿ ವಿಳಾಸವನ್ನು ಹೊಂದಿವೆ ಎಂದು ಇಡಿ ಹೇಳಿದೆ.

ಮೊಬೈಲ್ ಮೂಲಕ ಸಣ್ಣ ಮೊತ್ತದ ಸಾಲ ಪಡೆದ ಸಾರ್ವಜನಿಕರಿಗೆ ಕಿರುಕುಳ ಮತ್ತು ಸುಲಿಗೆಯಲ್ಲಿ ತೊಡಗಿದ್ದಕ್ಕೆ ಸಂಬಂಧಿಸಿದಂತೆ ಹಲವಾರು ಘಟಕಗಳು, ವ್ಯಕ್ತಿಗಳ ವಿರುದ್ಧ ಬೆಂಗಳೂರು ಪೊಲೀಸ್ ಸೈಬರ್ ಕ್ರೈಂ ಠಾಣೆ ದಾಖಲಿಸಿರುವ ಕನಿಷ್ಠ 18 ಎಫ್ಐಆರ್ಗಳನ್ನು ಆಧರಿಸಿ ತನ್ನ ತನಿಖೆ ನಡೆಯುತ್ತಿದೆ ಎಂದು ಇಡಿ ಹೇಳಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications