ಅನಾಥ, ನಿರ್ಗತಿಕ ಮಕ್ಕಳಿಗಾಗಿ ಎಡಿಫೈನಿಂದ ಕೊಡುಗೆ
ಬೆಂಗಳೂರು, ಅ.28: ಅನಾಥ, ನಿರ್ಗತಿಕ ಮಕ್ಕಳ ಸಹಾಯಾರ್ಥ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡು ಅದರಿಂದ ಸಂಗ್ರಹವಾಗುವ ದೇಣಿಗೆಯನ್ನು ಉತ್ತಮ ಕಾರ್ಯಕ್ಕೆ ಬಳಸಲು ಎಡಿಫೈ ಶಾಲೆ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ 'ಹೆಣ್ಣು ಮಕ್ಕಳ ಮಾಸಾಚಾರಣೆ' ಎಂದು ಕಾರ್ಯಕ್ರಮ ರೂಪಿಸಲಾಗಿದೆ.
ಅಕ್ಟೋಬರ್ 31ರಂದು ಬೆಂಗಳೂರಿನ ಹೊರವಲಯದಲ್ಲಿರುವ ಸೂರ್ಯ ಸಿಟಿ ಎರಡನೇ ಹಂತದಲ್ಲಿ ಶಾಲೆಯ ಹೊಸ ಕಟ್ಟಡದಲ್ಲಿ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ. [ಶಾಲೆಯ ಬಗ್ಗೆ ಇನ್ನಷ್ಟು ಮಾಹಿತಿ]
ಕೆಎಂಇ ಟ್ರಸ್ಟ್ ಆಯೋಜನೆಯ ಈ ಕಾರ್ಯಕ್ರಮದ ಮುಖ್ಯ ಉದ್ದೇಶ ನಿರ್ಗತಿಕ ಮಕ್ಕಳಿಗೂ ಶಿಕ್ಷಣ ದೊರಕಿಸುವುದೇ ಆಗಿದೆ. ಇದಕ್ಕಾಗಿ ಹಣ ಸಂಗ್ರಹಿಸಲು ವಿವಿಧ ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಲಗೋರಿ ರಾಕ್ ಬ್ಯಾಂಡ್ ಜೊತೆ ಹಾಲೋವಿನ್ ನೈಟ್, ಅಕ್ಸಿಜನ್ ಡ್ಯಾನ್ಸ್ ತಂಡದಿಂದ ನೃತ್ಯ, ಸುಧಾ ಬರಗೂರು ಅವರಿಂದ ಹಾಸ್ಯ ಕಾರ್ಯಕ್ರಮಗಳಿವೆ. ಇದರ ಜೊತೆಗೆ ಎಡಿಫೈ ಸಂತೆ ನಡೆಸಲಾಗುತ್ತಿದ್ದು, ವೈವಿಧ್ಯಮಯ ತಿಂಡಿ ತಿನಿಸುಗಳ 30ಕ್ಕೂ ಅಧಿಕ ಮಳಿಗೆಗಳು ನಿಮ್ಮ ಹಾಗೂ ನಿಮ್ಮ ಕುಟುಂಬವನ್ನು ಆಕರ್ಷಿಸಲಿದೆ.
500 ಪ್ರತಿ ಟಿಕೆಟ್ ನಂತೆ ನೀವು ನೀಡುವ ಮೊತ್ತವನ್ನು ಅನಾಥ ಹಾಗೂ ನಿರ್ಗತಿಕ ಮಕ್ಕಳ ಶಿಕ್ಷಣಕ್ಕಾಗಿ ಬಳಸಲಾಗುತ್ತದೆ.
ದಿನಾಂಕ : ಅಕ್ಟೋಬರ್ 31,2015
ಸಮಯ: ಸಂಜೆ 4 ಗಂಟೆ ನಂತರ.
ಸ್ಥಳ : ಎಡಿಫೈ ಶಾಲೆ ಹೊಸ ಕ್ಯಾಂಪಸ್
10th ಮುಖ್ಯರಸ್ತೆ, 19th ಅಡ್ಡರಸ್ತೆ, ಸೆಕ್ಟರ್ C, ಸೂರ್ಯ ನಗರ ಎರಡನೇ ಹಂತ, ಆನೇಕಲ್-ಚಂದಾಪುರ ಮುಖ್ಯರಸ್ತೆ, ಬೆಂಗಳೂರು 560 106.

ಎಡಿಫೈ ಶಾಲೆಗಳು ಶೈಕ್ಷಣಿಕ ಉತ್ಕೃಷ್ಟತೆ, ಕ್ರೀಡಾ ಸೌಲಭ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದೆ. ಎಡಿಫೈ ಶಾಲೆಗಳು ವಿಶಾಲವಾದ ಗ್ರಂಥಾಲಯ, ಸಂಗೀತ ಶಾಲೆ, ಇಂಗ್ಲೀಷ್ ಪ್ರಯೋಗಾಲಯ, ವಂಡರ್ ರೂಮ್, ಮ್ಯಾಥ್ ಲ್ಯಾಬ್, ಇವಿಎಸ್ ಲ್ಯಾಬ್ ಹಾಗೂ ವಿಜ್ಞಾನ ಪ್ರಯೋಗಾಲಯಗಳನ್ನು ಹೊಂದಿದೆ.
ಎಡಿಫೈ ಶಾಲೆಯಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಶ್ರೇಷ್ಠ ಪಠ್ಯಕ್ರಮ ಪದ್ಧತಿಯ ಮಿಶ್ರಣವನ್ನು ಕಾಣಬಹುದಾಗಿದೆ. ಸಿಬಿಎಸ್ ಇ, ಐಸಿಎಸ್ ಇ, ಐಜಿಸಿಎಎಸ್ ಇ ಹಾಗೂ ಐಬಿ ಹೀಗೆ ವಿವಿಧ ಮಾದರಿ ಪಠ್ಯಕ್ರಮಗಳನ್ನು ಎಡಿಎನ್ ಎಡಿಫೈ ಎಜುಕೇಷನ್ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದೆ ಶಾಲೆಯ ಸಲಹಾ ಸಮಿತಿಯಲ್ಲಿ ಪ್ರೊ.ರಾಜೀವ್ ಗೌಡ, ನಿರ್ದೇಶಕ ಪವನ್ ಕುಮಾರ್, ಡಾ. ಜಗದೀಶ್ ಮುಂತಾದವರಿದ್ದಾರೆ.
-
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price










Click it and Unblock the Notifications