Eid-al-Adha: ಬೆಂಗಳೂರಿನ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಬಕ್ರೀದ್ ಬಲಿಗೆ ನಿಷೇಧ- ಶಿಕ್ಷೆ, ದಂಡದ ಪ್ರಮಾಣ ತಿಳಿಯಿರಿ
ಬೆಂಗಳೂರು, ಜೂನ್ 27: ಈದ್-ಅಲ್-ಅದಾಹ್ (ಬಕ್ರೀದ್) ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ, ಹಬ್ಬದ ಪ್ರಯುಕ್ತ ಬೆಂಗಳೂರಿನ ಸಾರ್ವಜನಿಕ ಸ್ಥಳಗಳಾದ ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು, ಉದ್ಯಾನವನಗಳು ಮತ್ತು ಆವರಣದ ಒಳಗೆ ಅಥವಾ ಹೊರಗೆ ಪ್ರಾಣಿಗಳನ್ನು ಬಲಿ ನೀಡುವುದನ್ನು ನಿಷೇಧಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೋಮವಾರ ಈ ಅಧಿಸೂಚನೆಯನ್ನು ಪ್ರಕಟಿಸಿದೆ.
ಸುತ್ತೋಲೆಯ ಪ್ರಕಾರ, ಅಧಿಕೃತ ಕಸಾಯಿಖಾನೆಗಳಿಗೆ ಮಾತ್ರ ಆಹಾರಕ್ಕಾಗಿ ಪ್ರಾಣಿಗಳನ್ನು ವಧೆ ಮಾಡಲು ಅನುಮತಿಸಲಾಗುವುದು.

'ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಮಾರ್ಗಸೂಚಿಗಳನ್ನು ಉಲ್ಲಂಘಿಸುವುದು ಕಂಡುಬಂದರೆ, ಅವರು ಕರ್ನಾಟಕ ರಾಜ್ಯ ಪ್ರಾಣಿ ಬಲಿ ಕಾಯ್ದೆ 1959 ಸೆಕ್ಷನ್ 3 ರ ಅಡಿಯಲ್ಲಿ ಆರು ತಿಂಗಳವರೆಗೆ ಜೈಲು ಶಿಕ್ಷೆ / ದಂಡ ಅಥವಾ ಎರಡನ್ನೂ ಶಿಕ್ಷೆಗೆ ಗುರಿಪಡಿಸಲು ಹೊಣೆಗಾರರಾಗಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 429 ಐದು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ನೀಡುತ್ತದೆ' ಎಂದು ಬಿಬಿಎಂಪಿ ಹೇಳಿದೆ.
ಯಾರಾದರೂ ಕಾನೂನನ್ನು ಉಲ್ಲಂಘಿಸಿದರೆ ಭಾರತೀಯ ದಂಡ ಸಂಹಿತೆ ಮತ್ತು ಕರ್ನಾಟಕ ಗೋಹತ್ಯೆ ತಡೆ ಕಾಯ್ದೆ ಮತ್ತು ಜಾನುವಾರುಗಳ ಸಂರಕ್ಷಣೆ ಕಾಯಿದೆ 2020 ರ ಪ್ರಕಾರ ಶಿಕ್ಷೆ ವಿಧಿಸಲಾಗುವುದು ಎಂದು ಬಿಬಿಎಂಪಿಯ ಪಶುಸಂಗೋಪನಾ ಜಂಟಿ ನಿರ್ದೇಶಕ ಡಾ ಕೆ ಪಿ ರವಿಕುಮಾರ್ ಹೇಳಿದ್ದಾರೆ.
ಬಿಬಿಎಂಪಿ ಈ ಹಿಂದೆಯೂ ಬಕ್ರೀದ್ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿಗಳ ಹತ್ಯೆಯನ್ನು ನಿಷೇಧಿಸಿತ್ತು.

'ಈ ಹಿಂದೆಯೇ ನಾವು ಸಾರ್ವಜನಿಕ ರಸ್ತೆಗಳಲ್ಲಿ ಪ್ರಾಣಿಗಳನ್ನು ವಧೆ ಮಾಡುವುದನ್ನು ನಿಷೇಧಿಸಿದ್ದೇವೆ. ಸ್ವಚ್ಛತೆ ನಮ್ಮ ಪ್ರಮುಖ ಕಾಳಜಿಯಾಗಿದೆ. ಇದಲ್ಲದೆ, ಎಲ್ಲಾ ವಯೋಮಾನದ ಹಸುಗಳು, ದನ, ಕರು ಮತ್ತು ಗೂಳಿಗಳನ್ನು ವಧೆಗಾಗಿ ಸಾಗಿಸುವುದು ಶಿಕ್ಷಾರ್ಹ ಅಪರಾಧವಾಗಿದೆ' ಎಂದು ಮತ್ತೊಬ್ಬ ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ಈ ಕೆಳಗಿನ ಸ್ಥಳಗಳಲ್ಲಿ ಬಕ್ರೀದ್ ಅಥವಾ ಇತರ ಧಾರ್ಮಿಕ ಸಂದರ್ಭಗಳಲ್ಲಿ ಪ್ರಾಣಿಗಳನ್ನು ಬಲಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಸಾರ್ವಜನಿಕರಿಗೆ ಈ ಮೂಲಕ ತಿಳಿಸಲಾಗಿದೆ" ಎಂದು ಬಿಬಿಎಂಪಿ ಅಧಿಸೂಚನೆಯಲ್ಲಿ ಇದೆ.
ಸಾರ್ವಜನಿಕ ರಸ್ತೆಗಳು ಮತ್ತು ಕಾಲುದಾರಿಗಳು, ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು, ಶಾಲೆಗಳು, ಕಾಲೇಜುಗಳು, ದೇವಾಲಯಗಳು, ಮಸೀದಿಗಳು ಅಥವಾ ಇತರ ಧಾರ್ಮಿಕ ಪೂಜಾ ಸ್ಥಳಗಳು, ಉದ್ಯಾನವನಗಳು ಅಥವಾ ಇತರ ಸಾರ್ವಜನಿಕ ಸ್ಥಳಗಳ ಆವರಣದ ಒಳಗೆ ಅಥವಾ ಹೊರಗೆ ನಿರ್ಬಂಧವು ಜಾರಿಯಲ್ಲಿರುತ್ತದೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು











Click it and Unblock the Notifications